ಜಮೀರ್ ಗೆ ಎಚ್ಚರಿಕೆ ಕೊಟ್ಟ ದೇವೇಗೌಡರ ಮಾನಸ ಪುತ್ರ
Recommended Video

ಬೆಂಗಳೂರು, ಅಕ್ಟೋಬರ್ 17: ಜೆಡಿಎಸ್ ಹಾಗೂ ರೆಬೆಲ್ ಶಾಸಕರ ನಡುವಿನ ಮಾತಿನ ಚಕಮಕಿ ಮುಂದುವರೆದಿದೆ. ಈ ನಡುವೆ ಜೆಡಿಎಸ್ ವರಿಷ್ಠರ ಬಗ್ಗೆ ರೆಬೆಲ್ ಶಾಸಕ ಜಮೀರ್ ಅಹಮದ್ ಖಾನ್ ಅವರು ನೀಡಿದ ಹೇಳಿಕೆಯನ್ನು ವಿಧಾನಪರಿಷತ್ ಸದಸ್ಯ ಟಿ.ಎ ಶರವಣ ಖಂಡಿಸಿದ್ದಾರೆ.
ಪಕ್ಷದ ವರಿಷ್ಠರ ಬಗ್ಗೆ ಲಘುವಾಗಿ ಮಾತನಾಡಿರುವ ಶಾಸಕ ಜಮೀರ್ ಅಹಮದ್ ಖಾನ್ ಬೇಷರತ್ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಟಿ.ಎ. ಶರವಣ ಎಚ್ಚರಿಕೆ ನೀಡಿದ್ದಾರೆ.
'ಉಂಡ ಮನೆಗೆ ದ್ರೋಹ ಬಗೆದಿರುವ ನೀವು ತಕ್ಷಣವೇ ರಾಜೀನಾಮೆ ನೀಡಿ ಹೊರನಡೆಯಿರಿ. ನೀವು ಯಾಕೆ, ಹೇಗೆ ರಾಜಕೀಯಕ್ಕೆ ಬಂದಿರಿ ಎಂಬುದು ಎಲ್ಲರಿಗೂ ಗೊತ್ತಿದೆ. ಚುನಾವಣೆ ಮೂರು ದಿನ ಇರುವಾಗ ಎಲ್ಲಿ ಹೋಗಿದ್ದೀರಿ? ಹಣ ಖರ್ಚು ಮಾಡಿ ಶಾಸಕರನ್ನಾಗಿ ಮಾಡಿದವರು ಯಾರು?' ಎಂದು ಸುದ್ದಿಗೋಷ್ಠಿಯಲ್ಲಿ ಜಮೀರ್ ವಿರುದ್ಧ ಕಿಡಿಕಾರಿದರು.

ಕಾಂಗ್ರೆಸ್ ನಿಮ್ಮ ಪಾಲಿಗೆ ಸಮುದ್ರವಿರಬಹುದು,ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅದೇ ಸಮುದ್ರದಲ್ಲಿ ಕೊಚ್ಚಿಹೋಗುತ್ತೀರಿ. ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಬಗ್ಗೆ ನಾಲಿಗೆ ಬಿಗಿಹಿಡಿದು ಮಾತನಾಡಬೇಕು ಎಂದು ಎಚ್ಚರಿಸಿದರು.
ದೇವೇಗೌಡರು ಆಲದ ಮರವಿದ್ದ ಹಾಗೆ. ಅವರ ಬಗ್ಗೆ ಲಘುವಾಗಿ ಮಾತನಾಡುತ್ತೀರಾ? ನಮ್ಮದು ನಾಯಕರನ್ನು ತಯಾರು ಮಾಡುವ ಫ್ಯಾಕ್ಟರಿ ಇದ್ದ ಹಾಗೆ. ನಾವು ಯಾವ ಪಕ್ಷವನ್ನೂ ಸೇರುವುದಿಲ್ಲ ಎಂದರು.
ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ತನ್ನ ವಿರುದ್ಧ ಸ್ಪರ್ಧಿಸಲು ಮೀಟರ್ ಇದೆಯೇ ಎಂದು ಪ್ರಶ್ನೆ ಮಾಡಿದ್ದೀರಿ. ಆ ಮೀಟರ್ ಕೊಟ್ಟವರ್ಯಾರು, 3 ಬಾರಿ ಶಾಸಕರನ್ನಾಗಿ, ಸಚಿವರನ್ನಾಗಿ ಮಾಡಿದ್ದು ಯಾವ ಪಕ್ಷ ಎಂಬುದು ನೆನಪಿರಲಿ. ಚಾಮರಾಜಪೇಟೆಯಲ್ಲಿ ನಿಮ್ಮ ವಿರುದ್ಧ ಸ್ಪರ್ಧಿಸಲು ಸಾಮಾನ್ಯ ಕಾರ್ಯಕರ್ತರು ಸಾಕು ಎಂದು ಹೇಳಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications