ಮನ್ಸೂರ್ ಸ್ಫೋಟಕ ವಿಡಿಯೋ ಆರೋಪ ಅಲ್ಲಗೆಳೆದ ಟಿಎ ಶರವಣ
ಬೆಂಗಳೂರು, ಜೂನ್ 23: ಐಎಂಎ ಹಗರಣದ ಮುಖ್ಯ ಆರೋಪಿ ಮನ್ಸೂರ್ ಖಾನ್ ಅವರು ದುಬೈನಿಂದ ವಿಡಿಯೋ ಬಿಡುಗಡೆ ಮಾಡಿ ಸ್ಫೋಟಕ ಮಾಹಿತಿ ಹೊರ ಹಾಕಿದ್ದಾನೆ. ವಿಡಿಯೋದಲ್ಲಿ ಜೆಡಿಎಸ್ ಪಕ್ಷದ ನಿಷ್ಠಾವಂತ, ಎಂಎಲ್ಸಿ, ಆರ್ಯು ವೈಶ್ಯ ಮಂಡಳಿ ಅಧ್ಯಕ್ಷ ಟಿ.ಎ ಶರವಣ ಅವರ ಹೆಸರನ್ನು ಪ್ರಸ್ತಾಪಿಸಿದ್ದಾನೆ.
ಆದರೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ಟಿಎ ಶರವಣ, ನಾನು ಆತನನ್ನು ಒಮ್ಮೆ ಕೂಡಾ ಭೇಟಿ ಮಾಡಿಲ್ಲ. ನಾನು ಯಾವುದೇ ರೀತಿ ವಂಚನೆಗೆ ಸಹಕರಿಸಿಲ್ಲ ಎಂದಿದ್ದಾರೆ.
ಈ ಮುಂಚೆ ಆಡಿಯೋ ರಿಲೀಸ್ ಮಾಡಿದ್ದು ನಾನೇ, ರಾಜಕಾರಣಿಗಳು ನನ್ನ ಜೀವಕ್ಕೆ ಕುತ್ತು ತರುವಂಥ ಸನ್ನಿವೇಶ ಸೃಷ್ಟಿಸಿದ್ದರಿಂದ ನಾನು ಭಾರತ ತೊರೆಯಬೇಕಾಯಿತು. ನಾನು ಯಾರು ಯಾರಿಗೆ ಹಣ ಕೊಟ್ಟಿದ್ದೇನೆ ಎಂಬುದರ ಬಗ್ಗೆ ಸಂಪೂರ್ಣ ಪಟ್ಟಿಯಿದೆ. ಕಳೆದ 13 ವರ್ಷಗಳಲ್ಲಿ ಗ್ರಾಹಕರಿಗೆ 12 ಸಾವಿರ ಕೋಟಿ ಲಾಭಂಶ ನೀಡಿದ್ದೇನೆ. ನನ್ನ ಬಳಿ 1,350 ಕೋಟಿ ರು ಮಾತ್ರ ಆಸ್ತಿ ಇದೆ.

ನನಗೆ ಜೀವ ಬೆದರಿಕೆ ಇದೆ: ನಾನು ಭಾರತಕ್ಕೆ ಬಂದರೆ ನನ್ನನ್ನು ಉಳಿಸುವುದಿಲ್ಲ. ನಾನು ಪಟ್ಟಿಯಲ್ಲಿರುವ ಹೆಸರುಗಳನ್ನು ಬಹಿರಂಗಪಡಿಸಿದರೆ ನನ್ನ ಕುಟುಂಬವನ್ನು ನಾಶ ಮಾಡುತ್ತಾರೆ. ಬೆಂಗಳೂರು ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರಿಗೆ ನನಗೆ ರಕ್ಷಣೆ ನೀಡುವ ಭರವಸೆ ಕೊಟ್ಟರೆ ಭಾರತಕ್ಕೆ ಬರುತ್ತೇನೆ, ಸಾರ್ವಜನಿಕರಿಗೆ ಹಣ ಹಿಂತಿರುಗಿಸುತ್ತೇನೆ, ತನಿಖೆಗೆ ಸಹಕರಿಸುತ್ತೇನೆ ಎಂದಿದ್ದಾನೆ.
ಕಾಂಗ್ರೆಸ್ ಮುಖಂಡ ಜಮೀರ್ ಅಹ್ಮದ್ ಖಾನ್, ಪ್ರೆಸ್ಟೀಜ್ ಗ್ರೂಪ್ ನ ಇರ್ಫಾನ್, ಮಾಜಿ ರಾಜ್ಯಸಭಾ ಸದಸ್ಯರಾದ ರಹಮಾನ್ ಖಾನ್, ಶಬೀದ್ ಉಲ್ಲಾ, ಟಾಡಾ ಉಗ್ರ ಮುಖ್ತಿಯಾರ್ ಸೇರಿದಂತೆ ಹಲವರಿಗೆ ಧನ್ಯವಾದ ಅರ್ಪಿಸಿದ್ದಾನೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications