ನಗರ ಪೊಲೀಸ್ ಆಯುಕ್ತ ರಾಘವೇಂದ್ರ ವರ್ಗ
ಬೆಂಗಳೂರು, ಜು.21: ನಗರದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ಅತ್ಯಾಚಾರ, ಕ್ರೈಂ ಪ್ರಕರಣಗಳನ್ನು ಹತ್ತಿಕ್ಕಲಾಗದೆ ಹೆಣಗುತ್ತಿರುವ ಸಿದ್ದರಾಮಯ್ಯ ಅವರ ಕಾಂಗ್ರೆಸ್ ಸರ್ಕಾರ ಪೊಲೀಸ್ ಇಲಾಖೆಗೆ ಭರ್ಜರಿ ಸರ್ಜರಿ ಮಾಡಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್ ಅವರನ್ನು ವರ್ಗ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಎಂಎನ್ ರೆಡ್ಡಿ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.
ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಪ್ರತಿಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿರುವ ಸರ್ಕಾರ, ನಗರ ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್ ಅವರನ್ನು ವರ್ಗಾವಣೆ ಮಾಡಿದೆ. ಕಾನೂನು ಸುವ್ಯವಸ್ಥೆ ಎಡಿಜಿಪಿಯಾಗಿರುವ ಎಂ.ಎನ್.ರೆಡ್ಡಿ ಅವರನ್ನು ನೂತನ ಆಯುಕ್ತರನ್ನಾಗಿ ನೇಮಕ ಮಾಡಲಾಗಿದ್ದು, ಈ ಕುರಿತು ಇಂದು ಸಂಜೆ ಅಧಿಕೃತ ಅದೇಶ ಹೊರಡಿಸಲಾಗಿದೆ. ಎಂ.ಎನ್.ರೆಡ್ಡಿ ಅವರ ಸ್ಥಾನಕ್ಕೆ ಕಮ್ಯುನಿಕೇಶನ್ ಮತ್ತು ಲಾಜಿಸ್ಟಿಕ್ಸ್ ಮುಖ್ಯಸ್ಥ ಕಿಶೋರ್ ಚಂದ್ರ ಅವರನ್ನು ನೇಮಕ ಮಾಡಲಾಗಿದೆ.
* ರಾಘವೇಂದ್ರ ಔರಾದ್ಕರ್ ಸ್ಥಾನಕ್ಕೆ ಎಂಎನ್ ರೆಡ್ಡಿ
* ಎಂಎನ್ ರೆಡ್ಡಿ ಅವರ ಸ್ಥಾನಕ್ಕೆ ಕಿಶೋರ್ ಚಂದ್ರ
* ಕಮಲ್ ಪಂಥ್ ಸ್ಥಾನಕ್ಕೆ ಅಲೋಕ್ ಕುಮಾರ್
* ಮಾನವ ಹಕ್ಕುಗಳು ಕುಂದುಕೊರತೆ ವಿಭಾಗದ ಐಜಿಪಿಯಾಗಿ ಕಮಲ್ ಪಂಥ್ ವರ್ಗ

ರಾಘವೇಂದ್ರ ಔರಾದ್ಕರ್ ಅವರ ವರ್ಗಾವಣೆಗೆ ಕಾರಣವಾದ ಅಂಶಗಳು:
* ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಕಾಫಿ ಶಾಪ್ ನಲ್ಲಿ ಎಡಿಜಿಪಿ- ಕೆಎಸ್ಆರ್ ಪಿ ಡಾ ಪಿ.ರವೀಂದ್ರನಾಥ್ ಯುವತಿಯ ಫೋಟೋ ಕ್ಲಿಕ್ಕಿಸಿದ ಪ್ರಕರಣ.
* ಬೆಂಗಳೂರಿನ ವಿವಿಧೆಡೆ ರಾತ್ರಿ ಅವಧಿ ಹೆಚ್ಚಳಕ್ಕೆ ಹೆಚ್ಚಿನ ಒತ್ತಡ. ರಾತ್ರಿ 1 ಗಂಟೆ ತನಕ ನಿಯಮ ಸಡಿಲಗೊಳಿಸಿದ್ದು,
* ಸರಣಿ ಅತ್ಯಾಚಾರ ಪ್ರಕರಣಗಳು, ಪ್ರಕರಣಗಳ ತನಿಖೆ ಕುಂಠಿತಗೊಂಡಿರುವುದು.
* ಕಾರ್ಪೊರೇಷನ್ ಬ್ಯಾಂಕ್ ಎಟಿಎಂ ಹಲ್ಲೆ ಪ್ರಕರಣದ ಆರೋಪಿ ಬಂಧನವಾಗದಿರುವುದು
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications