ಎಂಇಪಿ ಅಧ್ಯಕ್ಷೆ ಸೇರಿ ಹಲವರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆಗೆ ಯತ್ನ
ಬೆಂಗಳೂರು, ಮೇ 4: ಮಹಿಳಾ ಎಂಪವರ್ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷೆ ನೌಹೀರಾ ಶೇಖ್ ಗುರುವಾರ ಸಂಜೆ ನಡೆದ ಗಲಭೆಯಲ್ಲಿ ಸ್ವಲ್ಪದರಲ್ಲೇ ಹಲ್ಲೆಯಿಂದ ಪಾರಾಗಿದ್ದಾರೆ.
ಕೆಜಿ ಹಳ್ಳಿ ವ್ಯಾಪ್ತಿಯಲ್ಲಿ ಎಂಇಪಿ ಪರ ರೋಡ್ ಶೋ ನಡೆಸುತ್ತಿದ್ದಾಗ ಸುಮಾರು 100 ಜನರ ಗುಂಪೊಂದು ಸ್ಥಳಕ್ಕೆ ಧಾವಿಸಿ ಗಲಾಟೆ ನಡೆಸಿತು. ಸಿವಿ ರಾಮನ್ ನಗರ ಹಾಗೂ ಕೆ.ಆರ್. ಪುರಂ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಘಟನೆ ಇದಾಗಿದೆ.
ಪ್ರಚಾರ ವಾಹನದ ಮೇಲೆ ದುಷ್ಕರ್ಮಿಗಳ ಗುಂಪು ಕಲ್ಲು ತೂರಿ ದಾಂಧಲೆ ನಡೆಸಿದೆ. ಅಲದ್ಲದೆ, ಎಂಇಪಿ ಪಕ್ಷದ ಕೆಲವು ಮುಖಂಡರು ಮತ್ತು ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ನೌಹೇರಾ ಶೇಖ್ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರಚಾರಕ್ಕೆ ಅಡ್ಡಿಪಡಿಸಿದ್ದಾರೆ.

ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದ ಕೆಜೆ ಹಳ್ಳಿಯಲ್ಲಿ ಪ್ರಚಾರ ಮಾಡುತ್ತಿದ್ದಾಗ ಏಕಾಏಕಿ ಸ್ಥಳಕ್ಕೆ ಬಂದ ನೂರಾರು ಪುಂಡರು ಎಂಇಪಿ ಪಕ್ಷದ ವಿರುದ್ಧ ಘೋಷಣೆ ಕೂಗಿ ದಾಂಧಲೆ ನಡೆಸಿದ್ದಾರೆ. ಈ ವೇಳೆ ಪ್ರಚಾರ ವರದಿ ಮಾಡಲು ತೆರಳಿದ್ದ ಮಾಧ್ಯಮಗಳ ವಾಹನಗಳನ್ನೂ ಜಖಂ ಮಾಡಿ ಪತ್ರಕರ್ತರ ಮೇಲೂ ಹಲ್ಲೆಗೆ ಯತ್ನಿಸಲಾಗಿದೆ. ಪುಂಡರ ದಾಂಧಲೆ ದೃಶ್ಯಗಳು ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿವೆ.
ಘಟನೆ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಎಂಇಪಿ ಅಭ್ಯರ್ಥಿ ನರ್ಸ್ ಜಯಲಕ್ಷ್ಮಿ, ಮುಸ್ಲಿಂರಲ್ಲಿ ಮಹಿಳೆಯರು ಹೊರಗೆ ಬರುವುದೇ ಕಡಿಮೆ. ಇಂತಹ ಸಂದರ್ಭದಲ್ಲಿ ನೌಹೇರಾ ಶೇಖ್ ಅವರು ಬದಲಾವಣೆ ಪ್ರತೀಕವಾಗಿ ಬಂದಿದ್ದಾರೆ.
ಕೆಲ ಕಿಡಿಗೇಡಿಗಳು ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಎಂಇಪಿ ಪಕ್ಷದ ಮೇಲೆ ದಾಳಿ ಆಗಲು ಕಾರಣ ನಮ್ಮ ಬೆಳವಣಿಗೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಮ್ಮ ಏಳಿಗೆಯನ್ನು ಸಹಿಸುತ್ತಿಲ್ಲ.
ಮಹಿಳಾ ಸಂಘಟನೆಗಳು ಕೂಡ ನಮಗೆ ಸಾಥ್ ಕೊಟ್ಟಿದ್ದಾರೆ. ಕೆಜಿ ಹಳ್ಳಿಯಲ್ಲಿ ನಡೆದ ಈ ಘಟನೆ ತಲೆತಗ್ಗಿಸುವಂತೆ ಮಾಡಿದೆ. ಮಾಧ್ಯಮವರ ಮೇಲೂ ಹಲ್ಲೆ ಆಗಿದೆ ಕ್ಯಾಮರಾ ಮೆನ್, ವರದಿಗಾರರ ಮೇಲೂ ಹಲ್ಲೆ ಆಗಿದೆ. ಎಂಇಪಿ ಅಧ್ಯಕ್ಷೆ ನೌಹೇರಾ ಶೇಖ್ ಹತ್ಯೆಗೆ ಕೆಲವರು ಸಂಚು ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಘಟನೆ ಸಂಬಂಧ ಕೆಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications