ಎಂಇಪಿ ಅಧ್ಯಕ್ಷೆ ಸೇರಿ ಹಲವರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆಗೆ ಯತ್ನ
ಬೆಂಗಳೂರು, ಮೇ 4: ಮಹಿಳಾ ಎಂಪವರ್ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷೆ ನೌಹೀರಾ ಶೇಖ್ ಗುರುವಾರ ಸಂಜೆ ನಡೆದ ಗಲಭೆಯಲ್ಲಿ ಸ್ವಲ್ಪದರಲ್ಲೇ ಹಲ್ಲೆಯಿಂದ ಪಾರಾಗಿದ್ದಾರೆ.
ಕೆಜಿ ಹಳ್ಳಿ ವ್ಯಾಪ್ತಿಯಲ್ಲಿ ಎಂಇಪಿ ಪರ ರೋಡ್ ಶೋ ನಡೆಸುತ್ತಿದ್ದಾಗ ಸುಮಾರು 100 ಜನರ ಗುಂಪೊಂದು ಸ್ಥಳಕ್ಕೆ ಧಾವಿಸಿ ಗಲಾಟೆ ನಡೆಸಿತು. ಸಿವಿ ರಾಮನ್ ನಗರ ಹಾಗೂ ಕೆ.ಆರ್. ಪುರಂ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಘಟನೆ ಇದಾಗಿದೆ.
ಪ್ರಚಾರ ವಾಹನದ ಮೇಲೆ ದುಷ್ಕರ್ಮಿಗಳ ಗುಂಪು ಕಲ್ಲು ತೂರಿ ದಾಂಧಲೆ ನಡೆಸಿದೆ. ಅಲದ್ಲದೆ, ಎಂಇಪಿ ಪಕ್ಷದ ಕೆಲವು ಮುಖಂಡರು ಮತ್ತು ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ನೌಹೇರಾ ಶೇಖ್ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರಚಾರಕ್ಕೆ ಅಡ್ಡಿಪಡಿಸಿದ್ದಾರೆ.

ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದ ಕೆಜೆ ಹಳ್ಳಿಯಲ್ಲಿ ಪ್ರಚಾರ ಮಾಡುತ್ತಿದ್ದಾಗ ಏಕಾಏಕಿ ಸ್ಥಳಕ್ಕೆ ಬಂದ ನೂರಾರು ಪುಂಡರು ಎಂಇಪಿ ಪಕ್ಷದ ವಿರುದ್ಧ ಘೋಷಣೆ ಕೂಗಿ ದಾಂಧಲೆ ನಡೆಸಿದ್ದಾರೆ. ಈ ವೇಳೆ ಪ್ರಚಾರ ವರದಿ ಮಾಡಲು ತೆರಳಿದ್ದ ಮಾಧ್ಯಮಗಳ ವಾಹನಗಳನ್ನೂ ಜಖಂ ಮಾಡಿ ಪತ್ರಕರ್ತರ ಮೇಲೂ ಹಲ್ಲೆಗೆ ಯತ್ನಿಸಲಾಗಿದೆ. ಪುಂಡರ ದಾಂಧಲೆ ದೃಶ್ಯಗಳು ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿವೆ.
ಘಟನೆ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಎಂಇಪಿ ಅಭ್ಯರ್ಥಿ ನರ್ಸ್ ಜಯಲಕ್ಷ್ಮಿ, ಮುಸ್ಲಿಂರಲ್ಲಿ ಮಹಿಳೆಯರು ಹೊರಗೆ ಬರುವುದೇ ಕಡಿಮೆ. ಇಂತಹ ಸಂದರ್ಭದಲ್ಲಿ ನೌಹೇರಾ ಶೇಖ್ ಅವರು ಬದಲಾವಣೆ ಪ್ರತೀಕವಾಗಿ ಬಂದಿದ್ದಾರೆ.
ಕೆಲ ಕಿಡಿಗೇಡಿಗಳು ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಎಂಇಪಿ ಪಕ್ಷದ ಮೇಲೆ ದಾಳಿ ಆಗಲು ಕಾರಣ ನಮ್ಮ ಬೆಳವಣಿಗೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಮ್ಮ ಏಳಿಗೆಯನ್ನು ಸಹಿಸುತ್ತಿಲ್ಲ.
ಮಹಿಳಾ ಸಂಘಟನೆಗಳು ಕೂಡ ನಮಗೆ ಸಾಥ್ ಕೊಟ್ಟಿದ್ದಾರೆ. ಕೆಜಿ ಹಳ್ಳಿಯಲ್ಲಿ ನಡೆದ ಈ ಘಟನೆ ತಲೆತಗ್ಗಿಸುವಂತೆ ಮಾಡಿದೆ. ಮಾಧ್ಯಮವರ ಮೇಲೂ ಹಲ್ಲೆ ಆಗಿದೆ ಕ್ಯಾಮರಾ ಮೆನ್, ವರದಿಗಾರರ ಮೇಲೂ ಹಲ್ಲೆ ಆಗಿದೆ. ಎಂಇಪಿ ಅಧ್ಯಕ್ಷೆ ನೌಹೇರಾ ಶೇಖ್ ಹತ್ಯೆಗೆ ಕೆಲವರು ಸಂಚು ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಘಟನೆ ಸಂಬಂಧ ಕೆಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications