ಟೋಲ್ ಪಾವತಿ ವಿವಾದ : ಗಲಾಟೆ, ಬೂತ್ಗೆ ಬೆಂಕಿ
ಬೆಂಗಳೂರು, ಏ. 20 : ಟೋಲ್ ಪಾವತಿ ವಿಚಾರದಲ್ಲಿ ಆರಂಭವಾದ ಜಗಳ ಟೋಲ್ ಬೂತ್ಗಳನ್ನು ಧ್ವಂಸಗೊಳಿಸಿ, ಬೆಂಕಿ ಹಚ್ಚುವುದರೊಂದಿಗೆ ಮುಕ್ತಾಯಗೊಂಡ ಘಟನೆ ನಗರದ ಹೊರವಲಯದ ಹೊಸಕೋಟೆಯಲ್ಲಿ ನಡೆದಿದೆ. ಲ್ಯಾಂಕೋ ಕಂಪನಿಗೆ ಸೇರಿದ ಟೋಲ್ ಗೇಟ್ಗಳು ಧ್ವಂಸಗೊಂಡಿವೆ.
ಹುಸ್ಕೂರು ಕೋಡಿ ಬಳಿ ಲ್ಯಾಂಕೋ ಸಂಸ್ಥೆ ನಿರ್ಮಿಸಿರುವ ಟೋಲ್ ಘಟಕದ ಪಕ್ಕದ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯ ನಾರಾಯಣಸ್ವಾಮಿ ಅವರು ಭಾನುವಾರ ತಮ್ಮ ಕುಟುಂಬ ಸದಸ್ಯರೊಂದಿಗೆ ಸ್ಕಾರ್ಪಿಯೊ ವಾಹನದಲ್ಲಿ ತೆರಳುತ್ತಿದ್ದಾಗ ಟೋಲ್ ಸಿಬ್ಬಂದಿ ಅವರನ್ನು ತಡೆದು ಹಲ್ಲೆ ಮಾಡಿರುವುದು ಈ ಘಟನೆಗೆ ಕಾರಣವಾಗಿದೆ. [ದೇವನಹಳ್ಳಿ ರಸ್ತೆ ಟೋಲ್ ದರ ಹೆಚ್ಚಳ]

ಟೋಲ್ ಗೇಟ್ ಬಳಿ ನಾರಾಯಣಸ್ವಾಮಿ ಅವರ ಕಾರನ್ನು ಸಿಬ್ಬಂದಿ ತಡೆದಿದ್ದಾರೆ. ಸ್ಥಳೀಯರು ಎಂದು ಅವರು ಗುರುತಿನ ಚೀಟಿಯನ್ನು ತೋರಿಸಿದರೂ ಸಿಬ್ಬಂದಿ ಅವರನ್ನು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ಬಗ್ಗೆ ಪ್ರಶ್ನಿಸಲು ಕಾರಿನಿಂದ ಇಳಿದ ನಾರಾಯಣ ಸ್ವಾಮಿ ಮತ್ತು ಅವರ ಪುತ್ರನ ಮೇಲೆ ಸಿಬ್ಬಂದಿಗಳು ಹಲ್ಲೆ ನಡೆಸಿದ್ದಾರೆ. [ಓಕಳಿಪುರದಲ್ಲಿ ಟ್ರಾಫಿಕ್ ಜಾಮ್ ಇನ್ಮುಂದೆ ಕನಸು]
ಟೋಲ್ ಬೂತ್ಗೆ ಬೆಂಕಿ : ನಾರಾಯಣ ಸ್ವಾಮಿ ತಕ್ಷಣ ಗ್ರಾಮಸ್ಥರಿಗೆ ಕರೆ ಮಾಡಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಗ್ರಾಮದ ಜನರು ಟೋಲ್ ಗೇಟ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. 8 ಟೋಲ್ ಬೂತ್ಗಳನ್ನು ಕೆಡವಿ ಹಾಕಿದ್ದಾರೆ, ಮೂರು ಟೋಲ್ ಬೂತ್ಗೆ ಬೆಂಕಿ ಹಚ್ಚಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಲಘು ಲಾಠಿ ಜಾರ್ಜ್ ನಡೆಸಿ ಸ್ಥಳೀಯರನ್ನು ಚದುರಿಸಿದರು. ಟೋಲ್ಗೇಟ್ನಲ್ಲಿ ನಡೆದ ಗಲಾಟೆ ಬಗ್ಗೆ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಬೆಂಗಳೂರು ಎಸ್ಪಿ ರಮೇಶ್ ಭಾನೋತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹಿಂದೆಯೂ ಟೋಲ್ ಬೂತ್ ಸಿಬ್ಬಂದಿ ಸ್ಥಳೀಯರ ಮೇಲೆ ದಾಳಿ ಮಾಡಿದ್ದಾರೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಗಲಾಟೆಯಲ್ಲಿ ಗಾಯಗೊಂಡ ನಾಯರಾಯಣ ಸ್ವಾಮಿ ಪುತ್ರ ಮಂಜುನಾಥ್ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications