ಮನೆ ಪೂಜೆಗಾಗಿ ಪೂಜಾರಿ ಹುಡುಕಲು ಬಂತು ಮೊಬೈಲ್ ಆ್ಯಪ್
ಬೆಂಗಳೂರು, ಅಕ್ಟೋಬರ್ 29: ಈವರೆಗೆ ದೇವರ ದರ್ಶನಕ್ಕೆ ಆನ್ಲೈನ್ ಟಿಕೆಟ್ ಬುಕ್ ಮಾಡಿಸುವ ಪದ್ಧತಿ ಇರುವುದು ಎಲ್ಲರಿಗೂ ಗೊತ್ತು, ಇನ್ನುಮುಂದೆ ಮನೆಯಲ್ಲಿ ನಡೆಯುವ ಶುಭ ಕಾರ್ಯಗಳು, ಧಾರ್ಮಿಕ ಆಚರಣೆಗೆ ಬೇಕಾಗುವ ಪೂಜಾರಿಗಳು ಆನ್ಲೈನ್ ಮೂಲಕ ಕರೆದರೆ ಮನೆ ಬಾಗಿಲಿಗೆ ಬರುವ ಹೊಸ ಸೇವೆಯೊಂದು ಬೆಂಗಳೂರಲ್ಲಿ ಲೋಕಾರ್ಪಣೆಗೊಳ್ಳಲಿದೆ.
ಎಕ್ಸಲೆಂಟ್ ಎಂಜಿನಿಯರಿಂಗ್ ಅಂಡ್ ಕಾರ್ಪೊರೇಟ್ ಸರ್ವೀಸಸ್ ಎಂಬ ಸಂಸ್ಥೆಯು ಮನೆಬಾಗಿಲಿಗೆ ಪೂಜಾರಿಗಳ್ನು ಕಳುಹಿಸಿಕೊಡಲು ಆನ್ಲೈನ್ ಪೋರ್ಟಲ್ ಹಾಗೂ ಮೊಬೈಲ್ ಅಪ್ಲಿಕೇಷನ್ ಸೇವೆ 'ಪೂಜಾರಿ ಸರ್ವೀಸಸ್' ಅಕ್ಟೋಬರ್ 29ರಂದು ಪರಿಚಯಿಸುತ್ತಿವೆ.
ನ್ನಮುಂದೆ ಯಾವುದೇ ಧಾರ್ಮಿಕ ಕಾರ್ಯಕ್ರಮ ಹಾಗೂ ಶುಭಾರಂಭಗಳಿಗೆ ಪೂಜಾರಿಗಳು ಬೇಕಾದರೆ ಅಲೆದಾಡಿ ಹುಡುಕುವ ಬದಲು ಮೊಬೈಲ್ ಅಪ್ಲಿಕೇಷನ್ ನಲ್ಲಿ ಸರ್ಚ್ ಮಾಡಿ ತಮಗೆ ಬೇಕಾದ ಪೂಜಾರಿಗಳನ್ನು ಮನೆಗೆ ಆಹ್ವಾನಿಸಬಹುದು. ಅದಕ್ಕಾಗಿ ಸಾಕಷ್ಟು ಮೊದಲೇ ಬುಕಿಂಗ್ ಮಾಡಿಕೊಳ್ಳಬಹುದು. ಬುಕಿಂಗ್ ಸಾಧ್ಯವಾಗದಿದ್ದರೆ ಆನ್ಲೈನ್ ಬುಕಿಂಗ್ ಮಾಡಿಕೊಳ್ಳಬಹುದು. ಬೆಂಗಳೂರಿನ ವಿವಿಧೆಡೆ ಲಭ್ಯವಿರುವ ಪೂಜಾರಿಗಳ ವಿವರಗಳನ್ನು ಪಡೆಯಬಹುದಾಗಿದೆ.

ಮನೆಯ ಗೃಹಪ್ರವೇಶ, ಮದುವೆ, ನಾಮಕರಣ, ಉಪನಯನ, ಸತ್ಯನಾರಾಯಣ ಕತೆ ಏನೇ ಶುಭ ಕಾರ್ಯಗಳಿರಲಿ ಸುಲಭವಾಗಿ ಪೂಜಾರಿಗಳನ್ನು ಹುಡುಕಬಹುದಾಗಿದೆ. ಹಳ್ಳಿಗಳಲ್ಲಾದರೆ ಮನೆಯ ಪುರೋಹಿತರು ಇರುತ್ತಾರೆ, ಅಥವಾ ಪರಿಚಯಸ್ತರಿರುತ್ತಾರೆ ಆದರೆ ಬೆಂಗಳೂರಲ್ಲಿ ಪೂಜಾರಿಗಳನ್ನು ಎಲ್ಲಿ ಅಂತಾ ಹುಡುಕೋದು ಎನ್ನುವುದು ಹಲವು ಮಂದಿಯ ಬೇಜಾರದ ಮಾತಾಗಿತ್ತು. ಕೆಲವೊಂದು ಸಲ ಕಾರ್ಯಕ್ಕೆ ಒಪ್ಪಿಕೊಂಡು ಬಳಿಕ ನಾಳೆ ಬೇರೆಡೆ ಕಾರ್ಯಕ್ರಮವಿದೆ ಎಂದು ಕೈಕೊಡುತ್ತಿದ್ದರು. ಆದರೆ ಇನ್ನುಮುಂದೆ ಹಾಗಾಗುವುದಿಲ್ಲ.
ಆಯಾ ಪ್ರದೇಶಕ್ಕೆ ಅನುಸಾರವಾಗಿ ಹತ್ತಿರದಲ್ಲಿರುವ ಪೂಜಾರಿಗಳನ್ನು ಭಕ್ತರು ಆಯ್ಕೆ ಮಾಡಿಕೊಳ್ಳಬಹುದು, ಪೂರ್ವ ನಿಗದಿತ ದಿನಾಂಕ ಹಾಗೂ ಮಾಹಿತಿ ಹಂಚಿಕೊಂಡರೆ ಪೋರ್ಟಲ್ ಸರ್ವೀಸ್ ಮೂಲಕವೇ ಮಾಹಿತಿ ಲಭ್ಯವಾಗಲಿದೆ.
ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಪ್ಲಿಕೇಷನ್ ಲೋಕಾರ್ಪಣೆಗೊಳಿಸಲಿದ್ದಾರೆ. ಹಿರಿಯ ನಟಿ ತಾರಾ ಅನುರಾಧ ಕಾರ್ಯಕ್ರಮಕ್ಕೆ ಮುಖ್ಯ ಅರ್ತಿಗಳಾಗಿ ಆಗಮಿಸಲಿದ್ದಾರೆ. ಶಾರದಾ ಸ್ತ್ರೀ ಸಮಾಜದಲ್ಲಿ ಕಾರ್ಯಕ್ರಮ ನಡೆಯಲಿದೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಸಿಂದಗಿಯ ಗೊಲ್ಲಾಳೇಶ್ವರ ಜಾತ್ರಾ ಮಹೋತ್ಸವ ಶುರು: 70 ಅಡಿ ರಥೋತ್ಸವಕ್ಕೆ ದಿನಗಣನೆ, ಐತಿಹಾಸಿಕ ಹಿನ್ನೆಲೆ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ












Click it and Unblock the Notifications