ನೈಋತ್ಯ ರೈಲ್ವೆಯಲ್ಲಿ ಕಾಯ್ದಿರಿಸದ ಟಿಕೇಟ್ ಬುಕ್ ಮಾಡಲು ಆ್ಯಪ್
ಬೆಂಗಳೂರು, ಫೆಬ್ರವರಿ 13: ಕಾಯ್ದಿರಿಸದ ಮತ್ತು ಪ್ಲ್ಯಾಟ್ ಫಾರಂ ಟಿಕೆಟ್ ಗಳನ್ನು ಬುಕ್ ಮಾಡಲು ರೈಲ್ವೆ ಇಲಾಖೆ ನೈಋತ್ಯ ರೈಲ್ವೆ ವಲಯದಲ್ಲಿ ಮೊಬೈಲ್ ಅಪ್ಲಿಕೇಷನ್ ಸೇವೆ ಆರಂಭಿಸಿದೆ.
ಈಗಾಗಲೇ ಹುಬ್ಬಳ್ಳಿ, ಮೈಸೂರು ರೈಲ್ವೆ ವಿಭಾಗ, ಬೆಂಗಳೂರಿನಲ್ಲಿ ಕಾರ್ಯಾರಂಭಿಸಿದೆ ಎಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಆರ್.ಎಸ್. ಸಕ್ಸೇನಾ ತಿಳಿಸಿದ್ದಾರೆ. ಆಂಡ್ರ್ಯಾಯ್ಡ್ ಮತ್ತು ವಿಂಡೊ ಫೋನ್ ಗಳಲ್ಲಿ ಅಪ್ಲಿಕೇಷನ್ ಡೌನ್ ಲೋಡ್ ಮಾಡಿಕೊಂಡರೆ ಕಾಯ್ದಿರಿಸಿದ ಟಿಕೆಟ್ ಗಳನ್ನು ಉಚಿತವಾಗಿ ಪಡೆದುಕೊಳ್ಳಬಹುದು.
ನೈಋತ್ಯ ರೈಲ್ವೆ ವಲಯದ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರು ಟಿಕೇಟ್ ತೆಗೆದುಕೊಳ್ಳಲು ಸಾಲಿನಲ್ಲಿ ಗಂಟೆಗಟ್ಟಲೆ ನಿಂತುಕೊಳ್ಳಬೇಕಾಗುತ್ತದೆ. ಇದರಿಂದ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಲು ಈ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.

ಟಿಕೇಟ್ ದರವನ್ನು ಪಾವತಿ ಮಾಡಲು ಪ್ರಯಾಣಿಕರು ರೈಲ್ವೆ ವಾಲೆಟ್ ನ್ನು ರಿಚಾರ್ಜ್ ಮಾಡಿಕೊಳ್ಳಬೇಕು. ಟಿಕೇಟ್ ಬುಕ್ ಮಾಡಲು ಅಪ್ಲಿಕೇಷನ್ ಬಳಸಿಕೊಳ್ಳಬಹುದು. ಅಪ್ಲಿಕೇಷನ್ ನಲ್ಲಿ ಶೋ ಟಿಕೇಟ್ ಆಯ್ಕೆ ಮೂಲಕ ಪ್ರಯಾಣಿಕರು ಈ ಟಿಕೇಟ್ ತೋರಿಸಬಹುದು ಎಂದಿದ್ದಾರೆ.
ಮೊಬೈಲ್ ವಾಲೆಟ್ ಗಳ ಮಾದರಿಯಲ್ಲಿ ಆರ್ ವಾಲೆಟ್ ಗಳಿದ್ದು ಕನಿಷ್ಟ 100 ರೂ ಹಾಗೂ ಗರಿಷ್ಠ 5 ಸಾವಿರ ರೂಗಳ ವರೆಗೆ ರೀಚಾರ್ಜ್ ಮಾಡಿಕೊಳ್ಳಬಹುದು. ಕಾಗದ ಟಿಕೇಟ್ ಬೇಕೆಂದು ಬಯಸುವವರು ರೈಲ್ವೆ ನಿಲ್ದಾಣಗಳಲ್ಲಿರುವ ವೆಂಡಿಂಗ್ ಮೆಶಿನ್ ಗಳಿಂದ ಪಡೆಯಬಹುದು.
ಪ್ಲಾಟ್ ಫಾರಂ ಟಿಕೇಟ್ ಗಳು ಕೇವಲ 2 ಗಂಟೆಯವರೆಗೆ ಅದರ ಬಳಕೆ ಕಾಲಾವಧಿಯನ್ನು ಹೊಂದಿರುತ್ತದೆ. ಕಾಯ್ದಿರಿಸದ ಟಿಕೇಟ್ ಅಪ್ಲಿಕೇಷನ್ ನಲ್ಲಿ ಮಾಡಿಕೊಳ್ಳುವವರು ಅಪ್ಲಿಕೇಷನ್ ಅಥವಾ ವೆಬ್ ಸೈಟ್ ವಿಳಾಸ www.utsonmobile.indianrail.gov.in ಮೂಲಕ ದಾಖಲು ಮಾಡಿಕೊಳ್ಳಬೇಕು
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications