ಡ್ರಗ್ಸ್ ಮಾಫಿಯಾ: ಚಿಕ್ಕಮಗಳೂರಿನ ರೂಪದರ್ಶಿ ಬಂಧನ
ಬೆಂಗಳೂರು, ಜೂನ್ 23: ಮಾದಕ ದ್ರವ್ಯ ಮಾರಾಟ ಹಾಗೂ ಡ್ರಗ್ಸ್ ಮಾಫಿಯಾದಲ್ಲಿ ತೊಡಗಿರುವ ಆರೋಪದ ಮೇಲೆ ಚಿಕ್ಕಮಗಳೂರು ಮೂಲದ 26 ವರ್ಷದ ರೂಪದರ್ಶಿಯೊಬ್ಬರನ್ನು ಆರ್ ಟಿ ನಗರದಲ್ಲಿ ಎಸ್ ಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಂಗಳವಾರ ರಾತ್ರಿ ಕಾರ್ಯಾಚರಣೆ ನಡೆಸಿದ ಮಾದಕ ವಸ್ತು ಕಳ್ಳಸಾಗಣೆ ನಿಯಂತ್ರಣ ದಳದ (ಎನ್ಸಿಬಿ) ಪೊಲೀಸರು, 26 ವರ್ಷ ವಯಸ್ಸಿನ ದರ್ಶಿತ್ಮಿತಾ ಜಿ ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. [ಬೆಂಗ್ಳೂರು ಈಗ ಡ್ರಗ್ ಮಾಫಿಯಾ ಡೀಲ್ ಗೆ ತಂಗುದಾಣ!]
ದರ್ಶಿತ್ಮಿತಾ ಅವರಿದ್ದ ಆರ್ ಟಿ ನಗರದ ಅಪಾರ್ಟ್ಮೆಂಟ್ ವೊಂದರ ಮೇಲೆ ನವೆಂಬರ್ 2015ರಲ್ಲಿ ದಾಳಿ ನಡೆಸಿ 110 ಗ್ರಾಮ್ ಕೊಕೈನ್, 19 ಗ್ರಾಮ್ ಹಶೀಶ್, 1.2 ಗ್ರಾಮ್ ಎಂಡಿಎಂ ಹಾಗೂ 1 ಎಲ್ ಎಸ್ ಡಿ ವಶ ಪಡಿಸಿಕೊಳ್ಳಲಾಗಿತ್ತು. ಆ ಸಮಯದಲ್ಲಿ ದರ್ಶಿಶ್ಮಿತಾ ವಿರುದ್ಧ ಯಾವುದೇ ಸಾಕ್ಷಿ ಸಿಕ್ಕಿರಲಿಲ್ಲ.

ಬೆಂಗಳೂರು, ಮಂಗಳೂರು ಹಾಗೂ ಗೋವಾದಲ್ಲಿ ಗ್ರಾಹಕರನ್ನು ಹೊಂದಿದ್ದಾನೆ. ಈತನಿಗೆ ದರ್ಶಿತ್ಮಿತಾ ಪೂರ್ಣ ಬೆಂಬಲ ನೀಡುತ್ತಿದ್ದಾಳೆ ಎಂದು ಆರೋಪಿಸಲಾಗಿದೆ.[ಬೆಂಗಳೂರು ರೇವ್ ಪಾರ್ಟಿಗೆ ದಕ್ಷಿಣ ಅಮೆರಿಕಾದ ನಂಟು]
ಇಬ್ಬರೂ ಗೋವಾದಿಂದ ಹಾಗೂ ವಿದೇಶದಿಂದ ಮಾದಕ ವಸ್ತುಗಳನ್ನು ತಂದು, ನಗರದಲ್ಲಿ ಮಾರಾಟ ಮಾಡುತ್ತಿದ್ದರು. ಬೆಂಗಳೂರು, ಮಂಗಳೂರು ಹಾಗೂ ಗೋವಾದಲ್ಲಿ ವಿದ್ಯಾರ್ಥಿಗಳು ಹಾಗೂ ಇನ್ನಿತರೆ ಗ್ರಾಹಕರಿಗೆ ಮಾರುತ್ತಿದ್ದರು ಎನ್ನಲಾಗಿದೆ. ಆದರೆ, ಆರೋಪವನ್ನು ಅಲ್ಲಗೆಳೆದಿರುವ ದರ್ಶಿತ್ಮಿತಾ, ಗೆಳೆಯನ ಅವ್ಯವಹಾರಕ್ಕೂ ನನಗೂ ಸಂಬಂಧವಿಲ್ಲ, ಇಬ್ಬರು ಒಂದೆ ಕಡೆ ವಾಸ ಮಾಡುತ್ತಿದ್ದದ್ದು ನಿಜ ಎಂದಿದ್ದಾರೆ.
1985ರ ನಾರ್ಕೊಟಿಕ್ ಡ್ರಗ್ಸ್ ಹಾಗೂ ಸೈಕೋಟ್ರೋಪಿಚ್ ಸಬ್ಟೆಸಸ್ ಕಾಯಿದೆ ಪ್ರಕಾರ ಈಗ ದರ್ಶಿತ್ಮಿತಾರನ್ನು ಬಂಧಿಸಿ, ವಿಚಾರಣೆಗೊಳಪಡಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿ ತನಕ ಐವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications