ಡ್ರಗ್ಸ್ ಮಾಫಿಯಾ: ಚಿಕ್ಕಮಗಳೂರಿನ ರೂಪದರ್ಶಿ ಬಂಧನ
ಬೆಂಗಳೂರು, ಜೂನ್ 23: ಮಾದಕ ದ್ರವ್ಯ ಮಾರಾಟ ಹಾಗೂ ಡ್ರಗ್ಸ್ ಮಾಫಿಯಾದಲ್ಲಿ ತೊಡಗಿರುವ ಆರೋಪದ ಮೇಲೆ ಚಿಕ್ಕಮಗಳೂರು ಮೂಲದ 26 ವರ್ಷದ ರೂಪದರ್ಶಿಯೊಬ್ಬರನ್ನು ಆರ್ ಟಿ ನಗರದಲ್ಲಿ ಎಸ್ ಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಂಗಳವಾರ ರಾತ್ರಿ ಕಾರ್ಯಾಚರಣೆ ನಡೆಸಿದ ಮಾದಕ ವಸ್ತು ಕಳ್ಳಸಾಗಣೆ ನಿಯಂತ್ರಣ ದಳದ (ಎನ್ಸಿಬಿ) ಪೊಲೀಸರು, 26 ವರ್ಷ ವಯಸ್ಸಿನ ದರ್ಶಿತ್ಮಿತಾ ಜಿ ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. [ಬೆಂಗ್ಳೂರು ಈಗ ಡ್ರಗ್ ಮಾಫಿಯಾ ಡೀಲ್ ಗೆ ತಂಗುದಾಣ!]
ದರ್ಶಿತ್ಮಿತಾ ಅವರಿದ್ದ ಆರ್ ಟಿ ನಗರದ ಅಪಾರ್ಟ್ಮೆಂಟ್ ವೊಂದರ ಮೇಲೆ ನವೆಂಬರ್ 2015ರಲ್ಲಿ ದಾಳಿ ನಡೆಸಿ 110 ಗ್ರಾಮ್ ಕೊಕೈನ್, 19 ಗ್ರಾಮ್ ಹಶೀಶ್, 1.2 ಗ್ರಾಮ್ ಎಂಡಿಎಂ ಹಾಗೂ 1 ಎಲ್ ಎಸ್ ಡಿ ವಶ ಪಡಿಸಿಕೊಳ್ಳಲಾಗಿತ್ತು. ಆ ಸಮಯದಲ್ಲಿ ದರ್ಶಿಶ್ಮಿತಾ ವಿರುದ್ಧ ಯಾವುದೇ ಸಾಕ್ಷಿ ಸಿಕ್ಕಿರಲಿಲ್ಲ.

ಬೆಂಗಳೂರು, ಮಂಗಳೂರು ಹಾಗೂ ಗೋವಾದಲ್ಲಿ ಗ್ರಾಹಕರನ್ನು ಹೊಂದಿದ್ದಾನೆ. ಈತನಿಗೆ ದರ್ಶಿತ್ಮಿತಾ ಪೂರ್ಣ ಬೆಂಬಲ ನೀಡುತ್ತಿದ್ದಾಳೆ ಎಂದು ಆರೋಪಿಸಲಾಗಿದೆ.[ಬೆಂಗಳೂರು ರೇವ್ ಪಾರ್ಟಿಗೆ ದಕ್ಷಿಣ ಅಮೆರಿಕಾದ ನಂಟು]
ಇಬ್ಬರೂ ಗೋವಾದಿಂದ ಹಾಗೂ ವಿದೇಶದಿಂದ ಮಾದಕ ವಸ್ತುಗಳನ್ನು ತಂದು, ನಗರದಲ್ಲಿ ಮಾರಾಟ ಮಾಡುತ್ತಿದ್ದರು. ಬೆಂಗಳೂರು, ಮಂಗಳೂರು ಹಾಗೂ ಗೋವಾದಲ್ಲಿ ವಿದ್ಯಾರ್ಥಿಗಳು ಹಾಗೂ ಇನ್ನಿತರೆ ಗ್ರಾಹಕರಿಗೆ ಮಾರುತ್ತಿದ್ದರು ಎನ್ನಲಾಗಿದೆ. ಆದರೆ, ಆರೋಪವನ್ನು ಅಲ್ಲಗೆಳೆದಿರುವ ದರ್ಶಿತ್ಮಿತಾ, ಗೆಳೆಯನ ಅವ್ಯವಹಾರಕ್ಕೂ ನನಗೂ ಸಂಬಂಧವಿಲ್ಲ, ಇಬ್ಬರು ಒಂದೆ ಕಡೆ ವಾಸ ಮಾಡುತ್ತಿದ್ದದ್ದು ನಿಜ ಎಂದಿದ್ದಾರೆ.
1985ರ ನಾರ್ಕೊಟಿಕ್ ಡ್ರಗ್ಸ್ ಹಾಗೂ ಸೈಕೋಟ್ರೋಪಿಚ್ ಸಬ್ಟೆಸಸ್ ಕಾಯಿದೆ ಪ್ರಕಾರ ಈಗ ದರ್ಶಿತ್ಮಿತಾರನ್ನು ಬಂಧಿಸಿ, ವಿಚಾರಣೆಗೊಳಪಡಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿ ತನಕ ಐವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications