ಆಧುನಿಕ ಮಹಿಳೆಯರು ಒಂಟಿಯಾಗಿರುತ್ತಾರೆ, ಮದುವೆಯಾದರೂ ಮಗುವಿಗೆ ಜನ್ಮ ನೀಡಲು ಇಚ್ಛಿಸಲ್ಲ: ಸುಧಾಕರ್
ಬೆಂಗಳೂರು, ಅಕ್ಟೋಬರ್ 10: "ಆಧುನಿಕ ಭಾರತೀಯ ಮಹಿಳೆಯರು ಈಗ ಸಾಮಾನ್ಯವಾಗಿ ಒಬ್ಬಂಟಿಯಾಗಿರಲು ಇಷ್ಟ ಪಡುತ್ತಾರೆ, ಒಂದು ವೇಳೆ ಮದುವೆಯಾದರೂ ಕೂಡಾ ಮಗುವಿಗೆ ಜನ್ಮ ನೀಡಲು ಇಚ್ಛಿಸಲ್ಲ. ಬಾಡಿಗೆ ತಾಯಿಯ ಮೂಲಕ ಮಗುವನ್ನು ಪಡೆಯುತ್ತಾರೆ," ಎಂದು ಕರ್ನಾಟಕ ರಾಜ್ಯ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಭಾನುವಾರ ಹೇಳಿದ್ದಾರೆ.
ವಿಶ್ವ ಮಾನಸಿಕ ಆರೋಗ್ಯ ದಿನದ ಹಿನ್ನೆಲೆ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವೈಜ್ಞಾನಿಕ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ನಲ್ಲಿ ನಡೆದ ಸಭಾರಂಭದಲ್ಲಿ ಮಾತನಾಡಿದ ರಾಜ್ಯ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಈ ಮಾತನ್ನು ಹೇಳಿದ್ದಾರೆ.
"ನಾನು ಇಂದು ಈ ಮಾತನ್ನು ಹೇಳಲು ಬೇಸರ ಪಡುತ್ತೇನೆ, ನನ್ನನ್ನು ಕ್ಷಮಿಸಿ, ಈಗ ಹಲವಾರು ಆಧುನಿಕ ಭಾರತೀಯ ಮಹಿಳೆಯರು ಒಬ್ಬಂಟಿಯಾಗಿಯೇ ಇರಲು ಇಷ್ಟ ಪಡುತ್ತಾರೆ. ಒಂದು ವೇಳೆ ಮದುವೆಯಾದರೂ ಕೂಡಾ ಮಗುವಿಗೆ ಜನ್ಮ ನೀಡಲು ಬಯಸುವುದಿಲ್ಲ. ಅವರಿಗೆ ಬಾಡಿಗೆ ತಾಯಿ ಬೇಕು," ಎಂದು ಅಭಿಪ್ರಾಯಿಸಿದ್ದಾರೆ.

"ಇಂದಿನ ಆಧುನಿಕ ಮಹಿಳೆಯರು ಹೆಚ್ಚಾಗಿ ಈ ರೀತಿಯ ಮನೋಭಾವವನ್ನು ಹೊಂದಿದ್ದಾರೆ. ಇದು ಪಾಶ್ಚತ್ಯ ಸಂಸ್ಕೃತಿಯ ಪಾಲನೆ. ಈ ಬದಲಾವಣೆ ಒಳ್ಳೆಯದಲ್ಲ. ಹಾಗೆಯೇ ಈಗಿನ ಜನರು ತಮ್ಮ ಪೋಷಕರು ತಮ್ಮ ಜೊತೆ ಜೀವಿಸಬೇಕು ಎಂಬುವುದನ್ನು ಕೂಡಾ ಒಪ್ಪಲ್ಲ," ಎಂದು ತಿಳಿಸಿದ್ದಾರೆ.
"ಈ ಬದಲಾವಣೆ ಉತ್ತಮವಲ್ಲ ಆದರೂ ನಾವು ಇಂದು ಪಾಶ್ಚತ್ಯ ಸಂಸ್ಕೃತಿಯೆಡೆ ವಾಲುತ್ತಿದ್ದೇವೆ. ನಮ್ಮ ಪೋಷಕರು ನಮ್ಮ ಜೊತೆ ಜೀವಿಸುವುದು ನಮ್ಮ ಈಗಿನ ಯುವ ಜನರಿಗೆ ಬೇಡ. ಹಾಗಿರುವಾಗ ನಮ್ಮ ತಾತ, ಅಜ್ಜಿ ನಮ್ಮ ಜೊತೆ ಇರುವ ವಿಚಾರವನ್ನೇ ಮರೆತುಬಿಡಿ," ಎಂದು ಕೂಡಾ ರಾಜ್ಯ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಉಲ್ಲೇಖ ಮಾಡಿದ್ದಾರೆ.
ಇನ್ನು ಈ ಸಂದರ್ಭದಲ್ಲಿ ದೇಶದಲ್ಲಿ ಇರುವ ಮಾನಸಿಕ ಆರೋಗ್ಯದ ಬಗ್ಗೆ ಮಾತನಾಡಿದ ಸಚಿವರು, "ನಮ್ಮ ದೇಶದ ಪ್ರತಿ ಏಳನೇ ಭಾರತೀಯನಿಗೆ ಕೆಲವೊಂದು ಮಾನಸಿಕ ಸಮಸ್ಯೆಗಳು ಇದೆ. ಆ ಮಾನಸಿಕ ಸಮಸ್ಯೆಗಳು ಗಂಭೀರ ಮಟ್ಟದ್ದು ಆಗಿರಬಹುದು ಅಥವಾ ಸಣ್ಣ ಮಟ್ಟದು ಆಗಿರಬಹುದು," ಎಂದಿದ್ದಾರೆ. ಇನ್ನು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಪ್ರಕಾರ "ಒತ್ತಡವನ್ನು ನಿರ್ವಹಣೆ ಮಾಡುವುದು ಒಂದು ಕಲೆ. ಈ ಬಗ್ಗೆ ಭಾರತೀಯರು ಕಲಿಯಬೇಕಾಗಿಲ್ಲ. ಆದರೆ ಒತ್ತಡವನ್ನು ಹೇಗೆ ನಿರ್ವಹಣೆ ಮಾಡುವುದು ಎಂದು ಇಡೀ ವಿಶ್ವಕ್ಕೆ ಭಾರತ ಭೋದಿಸಬೇಕು," ಎಂದು ಹೇಳಿದರು.
ಇನ್ನು ಕೊರೊನಾ ವೈರಸ್ ಸೋಂಕು ಹಾಗೂ ಮಾನಸಿಕ ಆರೋಗ್ಯದ ವಿಚಾರದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಆರೋಗ್ಯ ಸಚಿವ ಡಾ. ಕೆ ಸುಧಾಕರ್, "ಕುಟುಂಬಸ್ಥರು ತಮ್ಮ ಪ್ರೀತಿಯ ಕುಟುಂಬ ಸದಸ್ಯರ ಮೃತ ದೇಹವನ್ನು ಮುಟ್ಟುವ ಅವಕಾಶವನ್ನು ಕೂಡಾ ಹೊಂದಿರುವುದಿಲ್ಲ. ಇದರಿಂದಾಗಿ ಭಾರತದಲ್ಲಿ ಹಲವಾರು ಮಂದಿಗೆ ಮಾನಸಿಕ ಆಘಾತ ಅಥವಾ ಸಂಕಟ ಉಂಟಾಗಿದೆ," ಎಂದರು.
"ಕೊರೊನಾ ವೈರಸ್ ಸೋಂಕು ಸಂದರ್ಭದಲ್ಲಿ ಸರ್ಕಾರವು ಕೋವಿಡ್ ರೋಗಿಗಳ ಮಾನಸಿಕ ಆರೋಗ್ಯದ ಬಗ್ಗೆಯೂ ಒತ್ತು ನೀಡಿದೆ. ನಾವು ರೋಗಿಗಳೊಂದಿಗೆ ಸಮಾಲೋಚನೆ ನಡೆಸಿದ್ದೇವೆ. ಈವರೆಗೆ ನಾವು ಸುಮಾರು 24 ಲಕ್ಷ ಕೋವಿಡ್ ಸೋಂಕಿತರ ಸಮಾಲೋಚನೆ ಮಾಡಿದ್ದೇವೆ. ಆದರೆ ಈ ರೀತಿಯ ಕಾರ್ಯವನ್ನು ಭೇರೆ ಯಾವುದೇ ರಾಜ್ಯಗಳು ಮಾಡಿದೆಯೇ ಎಂದು ನನಗೆ ತಿಳಿದಿಲ್ಲ," ಎಂದು ಹೇಳಿದರು.
ಇನ್ನು ಈ ಸಂದರ್ಭದಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಅವರಿಗೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಕೃತಜ್ಞತೆ ಸಲ್ಲಿಸಿದ್ದಾರೆ. "ಕರ್ನಾಟಕ ರಾಜ್ಯಕ್ಕೆ ಸೆಪ್ಟೆಂಬರ್ವರೆಗೆ ಪ್ರತಿ ತಿಂಗಳು 1.5 ಕೋಟಿ ಕೋವಿಡ್ ಲಸಿಕೆಯನ್ನು ನೀಡಿದ ನಿಮಗೆ ಕೃತಜ್ಞತೆ. ಇದರಿಂದಾಗಿ ರಾಜ್ಯದಲ್ಲಿ ಕೋವಿಡ್ ವಿರುದ್ಧ ಲಸಿಕೆ ನೀಡುವ ಕಾರ್ಯವನ್ನು ಹೆಚ್ಚಿಸಲು ಸಾಧ್ಯವಾಗಿದೆ," ಎಂದು ತಿಳಿಸಿದರು. ಇನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಕೂಡಾ ಶ್ಲಾಘಿಸಿದರು.
(ಒನ್ಇಂಡಿಯಾ ಸುದ್ದಿ)
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications