ನಮೋ ಸಮಾವೇಶಕ್ಕೆ ನಾವು ಸಿದ್ಧ, ನೀವು ಬನ್ನಿ
ಬೆಂಗಳೂರು, ನ. 15 : ನರೇಂದ್ರ ಮೋದಿ ಅವರ ಭಾರತ ಗೆಲ್ಲಿಸಿ ಸಮಾವೇಶಕ್ಕಾಗಿ ರಾಜ್ಯ ಬಿಜೆಪಿ ಘಟಕ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಇದೊಂದು ಐತಿಹಾಸಿಕ ಸಮಾವೇಶವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಸಮಾವೇಶಕ್ಕಾಗಿ ಕೂಪನ್ ಮೂಲಕ ಸಂಗ್ರಹಿಸಿದ ಹಣವನ್ನು ಸರ್ದಾರ್ ಪಟೇಲ್ ಪ್ರತಿಮೆ ನಿರ್ಮಾಣಕ್ಕೆ ನೀಡಲು ಬಿಜೆಪಿ ನಿರ್ಧರಿಸಿದೆ.
ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಪ್ರಹ್ಲಾದ್ ಜೋಶಿ, ಭಾರತ ಗೆಲ್ಲಿಸಿ ಸಮಾವೇಶಕ್ಕಾಗಿ ಮಾಡಿಕೊಂಡಿರುವ ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು. ಸಮಾವೇಶ ನಡೆಯುವ ಅರಮನೆ ಮೈದಾನದಲ್ಲಿ 16 ಅಡಿ ಎತ್ತರದ ವೇದಿಕೆ ನಿರ್ಮಿಸಲಾಗಿದ್ದು, 10*80 ವಿಸ್ತೀರ್ಣವನ್ನು ಅದು ಹೊಂದಿದೆ ಎಂದರು.

ಸಮಾವೇಶಕ್ಕಾಗಿ 3.5 ಲಕ್ಷ ಕೂಪನ್ ಗಳನ್ನು ಮಾರಾಟ ಮಾಡಲಾಗಿದ್ದು, ಇದರಿಂದ ಸಂಗ್ರಹಿಸಲಾದ 35 ಲಕ್ಷ ರೂ.ಗಳನ್ನು ಗುಜರಾತಿನಲ್ಲಿ ನಿರ್ಮಿಸಲಾಗುತ್ತಿರುವ ಸರ್ದಾರ್ ವಲ್ಲಭಬಾಯಿ ಪಟೇಲ್ ಯುನಿಟಿ ಪ್ರತಿಮೆಗಾಗಿ ನೀಡಲಾಗುವುದು. ನರೇಂದ್ರ ಮೋದಿ ಅವರಿಗೆ ಈ ಹಣವನ್ನು ಸಮಾವೇಶದಲ್ಲಿ ಹಸ್ತಾಂತರಿಸಲಾಗುವುದು ಎಂದು ಮಾಹಿತಿ ನೀಡಿದರು. (ನಮೋ ಭಾಷಣದಲ್ಲಿ ಏನಿರುತ್ತೆ?)
ಕೂಪನ್ ಪಡೆದವರಿಗೆ ಮಾತ್ರ ಸಮಾವೇಶಕ್ಕೆ ಪ್ರವೇಶ ಎಂಬ ಕಲ್ಪನೆ ಬೇಡ, ಎಲ್ಲರಿಗೂ ಸಮಾವೇಶಕ್ಕೆ ಪ್ರವೇಶ ನೀಡಲಾಗುತ್ತದೆ ಎಂದರು. ಹಿರಿಯ ಸಾಹಿತಿಗಳು, ಸ್ವಾಮೀಜಿಗಳು ಸಮಾವೇಶಕ್ಕೆ ಆಗಮಿಸಲಿದ್ದು, ಅವರಿಗಾಗಿ ಪ್ರತ್ಯೇಕ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ಸಮಾವೇಶಕ್ಕೆ ಬೆಂಗಳೂರಿಗೆ ಆಗಮಿಸುವ ಕಾರ್ಯಕರ್ತರಿಗಾಗಿ 2,500 ಬಸ್, 10 ರೈಲು, 250 ಇತರ ವಾಹನಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಹುಬ್ಭಳ್ಳಿ, ಬೀದರ್, ಶಿವಮೊಗ್ಗ, ಬಾಗಲಕೋಟೆ ಮುಂತಾದ ಜಿಲ್ಲೆಯಗಳಿಂದ ವಿಶೇಷ ರೈಲು ಆಗಮಿಸಲಿದೆ ಎಂದು ಜೋಶಿ ತಿಳಿಸಿದರು.
ವೇದಿಕೆಯ ಕಾರ್ಯಕ್ರಮ ಎಲ್ಲರಿಗೂ ಕಾಣುವಂತೆ ವ್ಯವಸ್ಥೆ ಮಾಡಲಾಗಿದೆ. 40 ಎಲ್ ಇಡಿ ಸ್ಕ್ರೀನ್ ಗಳನ್ನು ಅಳವಡಿಸಲಾಗಿದೆ. ಸಮಾವೇಶಕ್ಕೆ ಬರುವ ಜನರ ಊಟದ ವ್ಯವಸ್ಥೆಗಾಗಿ 300 ಕೌಂಟರ್ ತೆರೆಯಲಾಗಿದೆ. ಪೊಲೀಸರು ಅಗತ್ಯ ವ್ಯವಸ್ಥೆಗಳನ್ನು ಕೈಗೊಂಡಿದ್ದು, ಸಮಾವೇಶದ ಭದ್ರತೆ ಬಗ್ಗೆ ಯಾರಿಗೂ ಆತಂಕ ಬೇಡ ಎಂದು ಜೋಶಿ ಮನವಿ ಮಾಡಿದರು.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ












Click it and Unblock the Notifications