ಸೌಂದರ್ಯಲಹರೀ ಮಹಾಸಮರ್ಪಣೆ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ
ಬೆಂಗಳೂರು, ಅಕ್ಟೋಬರ್ 29 : ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಯಡತೊರೆಮಠದ ವೇದಾಂತ ಭಾರತಿ ಸಂಸ್ಥೆಯು ಆಯೋಜಿಸಿರುವ ಸೌಂದರ್ಯಲಹರೀ ಮಹಾಸಮರ್ಪಣೆ ಕಾರ್ಯಕ್ರಮದಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ದೂರದ ಊರುಗಳಿಂದ ಬಂದಿರುವ ಸಾವಿರಾರು ಮಹಿಳೆಯರು ಮತ್ತು ಕಾರ್ಯಕರ್ತರು ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಮಹಿಳೆಯರು ಹಸಿರು ಬಣ್ಣದ ಸೀರೆ ಉಟ್ಟಿದ್ದಾರೆ. ಅರಿಷಣ, ಕುಂಕುಮ ಕೆಂಪು, ಗಾಢ ನೀಲಿ ಬಣ್ಣದ ಸೀರೆಗಳನ್ನು ಹಲವರು ಉಟ್ಟಿದ್ದು, ಮೋದಿ ಸ್ವಾಗತಕ್ಕಾಗಿ ಕಾದು ಕುಳಿತಿದ್ದಾರೆ.

ಮೋದಿ ಸ್ವಾಗತಕ್ಕೆ ಸಜ್ಜು : ಅರಮನೆ ಮೈದಾನಕ್ಕೆ ಸಂಪ್ರದಾಯಿಕ ಉಡುಗೆ ತೊಟ್ಟು ಆಗಮಿಸಿರುವ ಮಹಿಳೆಯರು ನರೇಂದ್ರ ಮೋದಿ ಸ್ವಾಗತಕ್ಕಾಗಿ ಕಾಯುತ್ತಿದ್ದಾರೆ. ಬಹುತೇಕರು ಸಡಿಲ ಹೆರಳು ಹಾಕಿ, ಮಲ್ಲಿಗೆ ಮುಡಿದಿದ್ದಾರೆ. ಮಾಗಿದ ಅನುಭವ ಬಿಂಬಿಸುವಂತಿರುವ ಕೆಲ ಹಿರಿಯರ ಬಿಳಿಗೂದಲಿನಲ್ಲಿ ಕನಕಾಂಬರ ನಗುತಿದೆ.
ಕಾರ್ಯಕ್ರಮಕ್ಕೆ ಆಗಮಿಸಿರುವ ಹಲವರು, ವೇದಾಂತ ಭಾರತಿ ಪ್ರಕಟಣೆಯ ತತ್ವಶಾಸ್ತ್ರದ ಪುಸ್ತಕಗಳು ಮತ್ತು ಇಸ್ಕಾನ್ ಪ್ರಕಟಣೆಯ ಧಾರ್ಮಿಕ ಪುಸ್ತಕಗಳನ್ನು ಗಮನಿಸುತ್ತಿದ್ದಾರೆ. ಸಂಸ್ಥೆಗಳ ಪ್ರತಿನಿಧಿಗಳು ಆಸಕ್ತರಿಗೆ ಲೇಖಕರು ಮತ್ತು ಗ್ರಂಥಗಳ ಪ್ರಾಮುಖ್ಯತೆ ವಿವರಿಸುತ್ತಿದ್ದಾರೆ.
ಕಾರ್ಯಕ್ರಮದಲ್ಲಿ ಪಾಲ್ಗೊಂಡವರಿಗೆ ಅದಮ್ಯ ಚೇತನ ಸಂಸ್ಥೆ ವತಿಯಿಂದ ಶುಚಿ-ರುಚಿಯಾದ ಊಟದ ವ್ಯವಸ್ಥೆ ಮಾಡಲಾಗಿಎ. ಮಹಿಳೆಯರಿಗೆ ಸಿಹಿಪೊಂಗಲ್, ಬಿಸಿಬೇಳೆಬಾತ್ ಮತ್ತು ಮೊಸರನ್ನಗಳನ್ನು ಅಡಿಕೆ ತಟ್ಟೆಗಳಲ್ಲಿ ವಿತರಿಸಲಾಗುತ್ತಿದೆ.
-
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್












Click it and Unblock the Notifications