DSS vs RSS : ಮೀಸಲಾತಿ ಹೇಳಿಕೆ ಸಮರ್ಥನೆ, ಖಂಡನೆ, ವಿವರಣೆ
ನವದೆಹಲಿ, ಆಗಸ್ಟ್ 21: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ದೆಹಲಿಯ ಕಾರ್ಯಕ್ರಮವೊಂದರಲ್ಲಿ ಮಾಡಿರುವ ಭಾಷಣದ ತುಣುಕೊಂದು ಮೀಸಲಾತಿ ಪರ ವಿರೋಧ ಚರ್ಚೆಗೆ ನಾಂದಿ ಹಾಡಿತು. ಈ ಬಗ್ಗೆ ಅನಗತ್ಯ ವಿವಾದ ಸೃಷ್ಟಿಯಾಗುತ್ತಿದೆ ಎಂಬುದನ್ನು ಅರಿತ ಆರೆಸ್ಸೆಸ್ ಸ್ಪಷ್ಟನೆಯನ್ನು ನೀಡಿದೆ. ಆದರೆ, ಭಾಗವತ್ ಅವರ ಹೇಳಿಕೆ ದಲಿತ ವಿರೋಧಿ ಎಂದು ದಲಿತ ಹಕ್ಕುಗಳ ಸಮಿತಿ ಖಂಡಿಸಿದೆ.
ಮನುವಾದಿ ಗುಂಗಿನಲ್ಲಿ ಮಾತನಾಡುವ ಆರ್.ಎಸ್.ಎಸ್. ಮುಖಂಡರಾದ ಮೋಹನ್ ಭಾಗವತ್ರವರ ದಲಿತ ವಿರೋಧಿ ಹೇಳಿಕೆಯನ್ನು ದಲಿತ ಹಕ್ಕುಗಳ ಸಮಿತಿ(ಡಿ.ಹೆಚ್.ಎಸ್.) ರಾಜ್ಯ ಸಂಚಾಲಕರಾದ ಗೋಪಾಲಕೃಷ್ಣ ಹರಳಹಳ್ಳಿ ತೀವ್ರವಾಗಿ ಖಂಡಿಸಿದ್ದಾರೆ.
ಜಾತಿಪದ್ಧತಿ, ಅಸ್ಪೃಶ್ಯತೆ ನಿರ್ಮೂಲನೆ ಜೀವಂತವಾಗಿರುವಾಗ ದಲಿತರಿಗೆ 'ಮೀಸಲಾತಿ' ಸವಲತ್ತು ವಿರೋಧಿಸುವುದು ಅಮಾನವೀಯ ಕೃತ್ಯವಾಗುತ್ತದೆ. ಶತಮಾನಗಳಿಂದಲೂ ಭೂಮಿ, ವಿದ್ಯೆಯಿಂದ ವಂಚಿಸಿ ಊರಾಚೆಯಿಟ್ಟ ದಲಿತರಿಗೆ ಮೀಸಲಾತಿ ನೀಡಿರುವುದು ಮೋಹನ್ ಭಾಗವತರವರಿಗೆ ಅರಗಿಸಿಕೊಳ್ಳಲಾಗದ ಚರ್ಚೆಯ ವಿಷಯವಾಗಿದೆ.

'ಮೀಸಲಾತಿ' ಜಾರಿಯಿಂದ ಎಷ್ಟು ದಲಿತರು ಸೌಲಭ್ಯ ಪಡೆದಿದ್ದಾರೆ, ಎಷ್ಟು ಅಭಿವೃದ್ಧಿ ಹೊಂದಿದ್ದಾರೆ ಎಂಬ ಸತ್ಯ ಮೋಹನ್ ಭಾಗವತ್ ರವರಿಗೆ ಅರ್ಥವಾಗುವುದಿಲ್ಲವೇಕೆ? ಇಲ್ಲಿ ದಲಿತರ ಮೇಲೆ ದೌರ್ಜನ್ಯ, ಕ್ರೂರ ಅಸ್ಪೃಶ್ಯತೆ ಆಚರಣೆ, ಸಾಮಾಜಿಕ ಬಹಿಷ್ಕಾರ ನಡೆಯುತ್ತಿರುವ ಬಗ್ಗೆ ಆರ್.ಎಸ್ಎಸ್. ಮುಖಂಡರು ಮಾತನಾಡುವುದಿಲ್ಲವೇಕೆ. ಇಂದಿಗೂ ಶೇ. 30% ರಷ್ಟು ದಲಿತರು ಕೇವಲ 2 ಎಕರೆ ಗಿಂತ ಕಡಿಮೆ ಭೂಮಿ ಉಳ್ಳವರಾಗಿದ್ದಾರೆ. ಶೇ. 52% ದಲಿತರಿಗೆ ಭೂಮಿಯೇ ಇಲ್ಲ. ಶೇ. 80% ದಲಿತರು ಕೃಷಿ ಕೂಲಿಕಾರರಾಗಿದ್ದಾರೆ. ವಿಧ್ಯೆಯಿಂದ ವಂಚಿತರಾದ ದಲಿತರ ಸಂಖ್ಯೆ ಶೇ. 60%.
ದಿನನಿತ್ಯ ದಲಿತರ ಮೇಲೆ ಜಾತಿ ದೌರ್ಜನ್ಯ ನಡೆಯುತ್ತಿದೆ. ದಲಿತರ ಬದುಕು ಇಂತಹ ಕಷ್ಟಕರ ಪರಿಸ್ಥಿತಿಯಲ್ಲಿರುವಾಗ ಖಾಸಗೀಕರಣ ನೀತಿಯಿಂದ ಮೀಸಲಾತಿ ಸಿಗದೇ ಇರುವಾಗ, ನಿರುದ್ಯೋಗದಿಂದ ಬಳಲುತ್ತಿರುವಾಗ ಮಾನವೀಯತೆ ಇಲ್ಲದ ಇಂತಹ ಕ್ರೂರ ಹಿಂದುತ್ವವಾದಿಗಳ 'ಮೀಸಲಾತಿ' ವಿರೋಧಿ ಹೇಳಿಕೆಯನ್ನು ದಲಿತ ಹಕ್ಕುಗಳ ಸಮಿತಿ (ಡಿ.ಹೆಚ್.ಎಸ್.) ಉಗ್ರವಾಗಿ ಖಂಡಿಸುತ್ತದೆ. ಜಾತಿ ಪದ್ಧತಿ, ಅಸ್ಪೃಶ್ಯತೆ ನಿರ್ಮೂಲನೆ ಆಗುವವರೆಗೂ ಮೀಸಲಾತಿ ಇರಬೇಕಾಗುತ್ತದೆ. ಎಲ್ಲಾ ಬ್ಲಾಕ್ ಲಾಗ್ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಬೇಕೆಂದು ದಲಿತ ಹಕ್ಕುಗಳ ಸಮಿತಿ ಒತ್ತಾಯಿಸುತ್ತದೆ.
ಆರೆಸ್ಸೆಸ್ ಸ್ಪಷ್ಟೀಕರಣ
ಸರಸಂಘಚಾಲಕ ಮೋಹನ್ ಭಾಗವತಜೀಯವರ ದೆಹಲಿಯ ಕಾರ್ಯಕ್ರಮವೊಂದರಲ್ಲಿ ಮಾಡಿರುವ ಭಾಷಣದ ತುಣುಕೊಂದರ ಮೇಲೆ ಅನಾವಶ್ಯಕ ವಿವಾದವೆದ್ದಿರುವುದರ ಕುರಿತು ಅಖಿಲ ಭಾರತೀಯ ಪ್ರಚಾರ ಪ್ರಮುಖ ಅರುಣ್ ಕುಮಾರ್ ಜೀಯವರ ಸ್ಪಷ್ಟನೆ:
"ಸರಸಂಘಚಾಲಕ ಮೋಹನ್ ಭಾಗವತಜೀಯವರ ದೆಹಲಿಯ ಕಾರ್ಯಕ್ರಮವೊಂದರಲ್ಲಿ ಮಾಡಿರುವ ಭಾಷಣದ ತುಣುಕೊಂದರ ಮೇಲೆ ಅನಾವಶ್ಯಕ ವಿವಾದವೆಬ್ಬಿಸುವ ಪ್ರಯತ್ನ ಮಾಡಲಾಗುತ್ತಿದೆ. ಸಮಾಜದಲ್ಲಿ ಸದ್ಭಾವನಾಪೂರ್ಣವಾಗಿ ಪರಸ್ಪರರ ಮಧ್ಯೆ ಮಾತುಕತೆಯ ಆಧಾರದಲ್ಲಿ ಎಲ್ಲ ಪ್ರಶ್ನೆಗಳ ಸಮಾಧಾನದ ಮಹತ್ವವನ್ನು ತಿಳಿಯಪಡಿಸುತ್ತ ಅವರು ಆರಕ್ಷಣೆಯಂತಹ ಸಂವೇದನಾಶೀಲ ವಿಷಯದ ಕುರಿತು ವಿಚಾರ ಮಾಡುವಂತೆ ಆಹ್ವಾನ ನೀಡಿದರು. ಆರಕ್ಷಣೆಯ ಕುರಿತಾಗಿ ಸಂಘದ ನಿಲುವಿನ ವಿಷಯದಲ್ಲಿ ಅನೇಕ ಬಾರಿ ನೀಡಲಾಗಿರುವಸ್ಪಷ್ಟನೆಯಂತೆ , ಅನುಸೂಚಿತ ಜಾತಿ ,ಜನಜಾತಿ,ಓಬಿಸಿ ಮತ್ತು ಆರ್ಥಿಕ ಆಧಾರದಲ್ಲಿ ಹಿಂದುಳಿದವರ ಆರಕ್ಷಣೆಗೆ ಸಂಪೂರ್ಣ ಸಮರ್ಥನೆ ಮಾಡುತ್ತದೆ"
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications