ಮೋಹನದಾಸ್ ಪೈ ಟ್ವಿಟ್ಟರ್ ದೂರಿಗೆ ಸಿಎಂ ಸ್ಪಂದನೆ
ಬೆಂಗಳೂರು, ಜು. 21: ನೋ ಪಾರ್ಕಿಂಗ್ ಜಾಗದಲ್ಲಿ ಕಾರು ನಿಲ್ಲಿಸುವುದು, ಕೆಟ್ಟ ರೀತಿಯಲ್ಲಿ ವಾಹನ ಚಾಲನೆ ಮುಂತಾದ ಯಾವುದೇ ಬಗೆಯ ಕಾನೂನು ಬಾಹಿರ ಸಂಗತಿ ಕಂಡುಬಂದರೆ ಸಾಮಾಜಿಕ ತಾಣಗಳ ಮೂಲಕ ದೂರು ಸಲ್ಲಿಕೆ ಮಾಡಬಹುದು ಎಂದು ಬೆಂಗಳೂರು ಪೊಲೀಸರು ಹಿಂದೆಯೇ ತಿಳಿಸಿದ್ದರು.
ಮಣಿಪಾಲ್ ಗ್ಲೋಬಲ್ ಎಜುಕೇಶನ್ ಸಂಸ್ಥೆಯ ಅಧ್ಯಕ್ಷ ಟಿ.ವಿ. ಮೋಹನ್ ದಾಸ್ ಪೈ ಟ್ವಿಟ್ಟರ್ ಮೂಲಕ ಇಂಥದ್ದೇ ಒಂದು ದೂರು ದಾಖಲು ಮಾಡಿದ್ದಾರೆ. ಆದರೆ ಅವರು ತಮ್ಮ ದೂರನ್ನು ಮುಖ್ಯಮಂತ್ರಿ ಟ್ವಿಟ್ಟರ್ ಖಾತೆಯ ಹ್ಯಾಂಡಲ್ ಗೆ ಹಾಕಿದ್ದಾರೆ.[ಬರೋಬ್ಬರಿ 66 ಸಾರಿ ನಿಯಮ ಮುರಿದಿದ್ದ ಬಿಎಂಟಿಸಿ ಬಸ್!]

ಇದಕ್ಕೆ ತಕ್ಷಣ ಪ್ರತಿಕ್ರಿಯೆ ನೀಡಿರುವ ಸಿಎಂ ಖಾತೆ ದೂರನ್ನು ಬೆಂಗಳೂರು ಟ್ರಾಫಿಕ್ ಪೊಲೀಸರಿಗೆ ರವಾನೆ ಮಾಡಿದೆ. ಟ್ರಾಫಿಕ್ ಪೊಲೀಸ್ ಸಹ ಅಷ್ಟೆ ವೇಗವಾಗಿ ಪ್ರತಿಕ್ರಿಯೆ ನೀಡಿದ್ದು ಪಾರ್ಕಿಂಗ್ ನಿಯಮ ಉಲ್ಲಂಘನೆ ದೂರು ದಾಖಲು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದೆ.
ಪೈ ದೂರಿನಲ್ಲಿ ಏನಿತ್ತು?
'ಕೆಎ 51 ಎಂಸಿ 0243 ಸಂಖ್ಯೆ ಬಿಎಂಡ್ಲ್ಯೂ ಕಾರನ್ನು ನೋ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಲಾಗಿತ್ತು. ಇದನ್ನು ಪ್ರಶ್ನಿಸಿದ ನನಗೆ ಬೆದರಿಕೆ ಹಾಕಲಾಯಿತು. ಅಲ್ಲದೇ ನಾನು ಎಂಎಲ್ ಸಿ ಎಂದು ಸಂಬಂಧಿಸಿದ ವ್ಯಕ್ತಿ ಮೈ ಮೇಲೆ ಬಂದರು. ದಯವಿಟ್ಟು ತಕ್ಷಣ ಇಂಥವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಿ' ಎಂದು ಪೈ ಕಾರಿನ ಫೋಟೋ ಹಾಕಿ ಟ್ವೀಟ್ ಮಾಡಿದ್ದರು.[ಕೋರಮಂಗಲದ ಕಪ್ಪು ಸುಂದರ ಹಾರ್ನ್ ಗೆಲ್ಲ ಜಗ್ಗಲ್ಲ!]
ಪೈ ಅವರ ಟ್ವೀಟ್ ಗೆ ಅನೇಕ ಪ್ರತಿಕ್ರಿಯೆಗಳು ಬಂದಿದ್ದು ಬೆಂಗಳೂರು ಪೊಲೀಸರು ಇಂಥವರ ಮೇಲೆ ತಕ್ಷಣ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಸಲಹೆ ನೀಡಿದ್ದಾರೆ. ಅಲ್ಲೆದೇ ಬೆಂಗಳೂರು ಪೊಲೀಸರ ಟ್ವಿಟ್ಟರ್ ಖಾತೆಗೆ ಪೈ ಟ್ವೀಟ್ ನ್ನು ಹಂಚಿಕೆ ಮಾಡಲಾಗಿದೆ.
@CMofKarnataka sir a person owning this car, illegally parked, when I protested he abused,threatened,said MLC.pl act pic.twitter.com/CR6bfr3CI1
— Mohandas Pai (@MDPai05) July 21, 2015 Forwarding to @CPBlr and @blrcitytraffic https://t.co/Irqf1qJJ8Y
— CM of Karnataka (@CMofKarnataka) July 21, 2015 -
CBSE 10ನೇ ತರಗತಿ ಫಲಿತಾಂಶ 2026: ದಕ್ಷಿಣ ಭಾರತದ ವಿದ್ಯಾರ್ಥಿಗಳದ್ದೇ ಮೇಲುಗೈ, ಶೇ. 98.91ರಷ್ಟು ಸಾಧನೆ ಮಾಡಿದ ಬೆಂಗಳೂರು -
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral











Click it and Unblock the Notifications