ಮೋಹನದಾಸ್ ಪೈ ಟ್ವಿಟ್ಟರ್ ದೂರಿಗೆ ಸಿಎಂ ಸ್ಪಂದನೆ
ಬೆಂಗಳೂರು, ಜು. 21: ನೋ ಪಾರ್ಕಿಂಗ್ ಜಾಗದಲ್ಲಿ ಕಾರು ನಿಲ್ಲಿಸುವುದು, ಕೆಟ್ಟ ರೀತಿಯಲ್ಲಿ ವಾಹನ ಚಾಲನೆ ಮುಂತಾದ ಯಾವುದೇ ಬಗೆಯ ಕಾನೂನು ಬಾಹಿರ ಸಂಗತಿ ಕಂಡುಬಂದರೆ ಸಾಮಾಜಿಕ ತಾಣಗಳ ಮೂಲಕ ದೂರು ಸಲ್ಲಿಕೆ ಮಾಡಬಹುದು ಎಂದು ಬೆಂಗಳೂರು ಪೊಲೀಸರು ಹಿಂದೆಯೇ ತಿಳಿಸಿದ್ದರು.
ಮಣಿಪಾಲ್ ಗ್ಲೋಬಲ್ ಎಜುಕೇಶನ್ ಸಂಸ್ಥೆಯ ಅಧ್ಯಕ್ಷ ಟಿ.ವಿ. ಮೋಹನ್ ದಾಸ್ ಪೈ ಟ್ವಿಟ್ಟರ್ ಮೂಲಕ ಇಂಥದ್ದೇ ಒಂದು ದೂರು ದಾಖಲು ಮಾಡಿದ್ದಾರೆ. ಆದರೆ ಅವರು ತಮ್ಮ ದೂರನ್ನು ಮುಖ್ಯಮಂತ್ರಿ ಟ್ವಿಟ್ಟರ್ ಖಾತೆಯ ಹ್ಯಾಂಡಲ್ ಗೆ ಹಾಕಿದ್ದಾರೆ.[ಬರೋಬ್ಬರಿ 66 ಸಾರಿ ನಿಯಮ ಮುರಿದಿದ್ದ ಬಿಎಂಟಿಸಿ ಬಸ್!]

ಇದಕ್ಕೆ ತಕ್ಷಣ ಪ್ರತಿಕ್ರಿಯೆ ನೀಡಿರುವ ಸಿಎಂ ಖಾತೆ ದೂರನ್ನು ಬೆಂಗಳೂರು ಟ್ರಾಫಿಕ್ ಪೊಲೀಸರಿಗೆ ರವಾನೆ ಮಾಡಿದೆ. ಟ್ರಾಫಿಕ್ ಪೊಲೀಸ್ ಸಹ ಅಷ್ಟೆ ವೇಗವಾಗಿ ಪ್ರತಿಕ್ರಿಯೆ ನೀಡಿದ್ದು ಪಾರ್ಕಿಂಗ್ ನಿಯಮ ಉಲ್ಲಂಘನೆ ದೂರು ದಾಖಲು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದೆ.
ಪೈ ದೂರಿನಲ್ಲಿ ಏನಿತ್ತು?
'ಕೆಎ 51 ಎಂಸಿ 0243 ಸಂಖ್ಯೆ ಬಿಎಂಡ್ಲ್ಯೂ ಕಾರನ್ನು ನೋ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಲಾಗಿತ್ತು. ಇದನ್ನು ಪ್ರಶ್ನಿಸಿದ ನನಗೆ ಬೆದರಿಕೆ ಹಾಕಲಾಯಿತು. ಅಲ್ಲದೇ ನಾನು ಎಂಎಲ್ ಸಿ ಎಂದು ಸಂಬಂಧಿಸಿದ ವ್ಯಕ್ತಿ ಮೈ ಮೇಲೆ ಬಂದರು. ದಯವಿಟ್ಟು ತಕ್ಷಣ ಇಂಥವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಿ' ಎಂದು ಪೈ ಕಾರಿನ ಫೋಟೋ ಹಾಕಿ ಟ್ವೀಟ್ ಮಾಡಿದ್ದರು.[ಕೋರಮಂಗಲದ ಕಪ್ಪು ಸುಂದರ ಹಾರ್ನ್ ಗೆಲ್ಲ ಜಗ್ಗಲ್ಲ!]
ಪೈ ಅವರ ಟ್ವೀಟ್ ಗೆ ಅನೇಕ ಪ್ರತಿಕ್ರಿಯೆಗಳು ಬಂದಿದ್ದು ಬೆಂಗಳೂರು ಪೊಲೀಸರು ಇಂಥವರ ಮೇಲೆ ತಕ್ಷಣ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಸಲಹೆ ನೀಡಿದ್ದಾರೆ. ಅಲ್ಲೆದೇ ಬೆಂಗಳೂರು ಪೊಲೀಸರ ಟ್ವಿಟ್ಟರ್ ಖಾತೆಗೆ ಪೈ ಟ್ವೀಟ್ ನ್ನು ಹಂಚಿಕೆ ಮಾಡಲಾಗಿದೆ.
@CMofKarnataka sir a person owning this car, illegally parked, when I protested he abused,threatened,said MLC.pl act pic.twitter.com/CR6bfr3CI1
— Mohandas Pai (@MDPai05) July 21, 2015 Forwarding to @CPBlr and @blrcitytraffic https://t.co/Irqf1qJJ8Y
— CM of Karnataka (@CMofKarnataka) July 21, 2015 -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು











Click it and Unblock the Notifications