ಸಾರಕ್ಕಿ ಕೆರೆ ಅಭಿವೃದ್ದಿಗೆ ಇನ್ನೂ 10 ಕೋಟಿ ರೂಪಾಯಿಗಳ ಅನುದಾನ ಅಗತ್ಯ: ಶಾಸಕ ಸತೀಶ್ ರೆಡ್ಡಿ
ಬೆಂಗಳೂರು ಜನವರಿ 24: 9 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ದಿಯಾಗುತ್ತಿರುವ ಸಾರಕ್ಕಿ ಕೆರೆಗೆ ಇನ್ನೂ 10 ಕೋಟಿ ರೂಪಾಯಿಗಳ ಹೆಚ್ಚಿನ ಅನುದಾನವನ್ನು ಕೇಳಲಾಗಿದೆ ಎಂದು ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಹೇಳಿದ್ದಾರೆ.
ಅಧಿಕಾರಿಗಳೊಂದಿಗೆ ಜೆಪಿ ನಗರದ ಸಾರಕ್ಕಿ ಕೆರೆಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪರಿವೀಕ್ಷಣೆ ನಡೆಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಜೆಪಿ ನಗರದ ಹೃದಯ ಭಾಗದಲ್ಲಿರುವ ಸಾರಕ್ಕಿ ಕೆರೆ ಒತ್ತುವರಿ ಹಾಗೂ ಕಲುಷಿತ ನೀರಿನಿಂದ ತನ್ನ ಸೌಂದರ್ಯವನ್ನು ಕಳೆದುಕೊಂಡಿತ್ತು.
ಈ ಭಾಗದ ಜನತೆಗೆ ಒಳ್ಳೆಯ ಪರಿಸರ ನೀಡುವುದು ಹಾಗೂ ಅಂತರ್ಜಲ ಅಭಿವೃದ್ದಿಗೊಳಿಸುವ ನಿಟ್ಟಿನಲ್ಲಿ 9 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕಾಮಗಾರಿಯನ್ನು ಪ್ರಾರಂಭಿಸಲಾಗಿದೆ. ಕೊಳಚೆ ನೀರಿನಿಂದ ತುಂಬಿದ್ದ ಕೆರೆಯನ್ನು ಸ್ವಚ್ಚಗೊಳಿಸುವ ನಿಟ್ಟಿನಲ್ಲಿ ಕೊಳಚೆ ನೀರು ಕೆರೆಗೆ ಹರಿದು ಬರುವುದನ್ನು ಸಂಪೂರ್ಣ ನಿಯಂತ್ರಿಸಲಾಗಿದೆ.

ಅಲ್ಲದೆ, ಮುಂದಿನ ದಿನಗಳಲ್ಲಿ ಮಳೆ ನೀರು ಕೆರೆಗೆ ಹರಿದು ಬರುವಂತಹ ವ್ಯವಸ್ಥೆಯನ್ನೂ ಮಾಡಲಾಗಿದೆ. ಕಾಮಗಾರಿಗಳು ಕಳೆದ ಒಂದು ವರ್ಷದಿಂದ ನಡೆಯುತ್ತಿವೆ. ಈ ಕಾಮಗಾರಿಗಳು ಇನ್ನು 2 ತಿಂಗಳಲ್ಲಿ ಮುಗಿಯಬೇಕಾಗಿದೆ. ಅದಕ್ಕಾಗಿ 10 ಕೋಟಿ ರೂಪಾಯಿಗಳ ಹೆಚ್ಚಿನ ಅನುದಾನದ ಕೋರಿಕೆಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಿದ್ದೇವೆ ಎಂದರು.

ಪರಿವೀಕ್ಷಣೆಯಲ್ಲಿ ಬೊಮ್ಮನಹಳ್ಳಿ ವಾರ್ಡ್ ಬಿಬಿಎಂಪಿ ಸದಸ್ಯ ರಾಮ್ ಮೋಹನ್ ರಾಜ್, ಜರಗನಹಳ್ಳಿ ವಾರ್ಡ್ ಬಿಬಿಎಂಪಿ ಸದಸ್ಯೆ ಬಿ ಎಂ ಶೋಭಾ ಮುನಿರಾಮ್ ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದ್ದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications