ಬೆಂಗಳೂರಲ್ಲಿ 3 ಲಕ್ಷ ಬಾಂಗ್ಲಾದೇಶದ ಅಕ್ರಮ ವಲಸಿಗರು: ಭಾಸ್ಕರ್ ರಾವ್
ಬೆಂಗಳೂರು, ಜನವರಿ 30: ನಗರದಲ್ಲಿ ಸುಮಾರು ಮೂರು ಲಕ್ಷ ಜನ ಬಾಂಗ್ಲಾದೇಶದ ಅಕ್ರಮ ವಲಸಿಗರು ನೆಲೆಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ.
ನಗರದಲ್ಲಿ ಬುಧವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, 'ಬಹುತೇಕ ಬಾಂಗ್ಲಾದೇಶಿ ಅಕ್ರಮ ವಲಸಿಗರು ಕಟ್ಟಡ ನಿರ್ಮಾಣ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ಅವರ ಸಂಖ್ಯೆ ದಿನೇ-ದಿನೇ ಹೆಚ್ಚಾಗುತ್ತಿದೆ' ಎಂದಿದ್ದಾರೆ.
'ಬಾಂಗ್ಲಾದೇಶ ಅಕ್ರಮ ವಲಸಿಗರು ದಿನಕ್ಕೆ ಕೇವಲ 150-200 ರೂಪಾಯಿ ಕೂಲಿಗೆ ಕೆಲಸ ಮಾಡಲು ಸಿದ್ಧರಿದ್ದಾರೆ. ಸ್ಥಳೀಯ ಕೂಲಿ ಕಾರ್ಮಿಕರು 500-600 ಕೂಲಿ ಕೇಳುತ್ತಾರೆ. ಹಾಗಾಗಿ ಬಿಲ್ಡರ್ಗಳು ಸಹ ಬಾಂಗ್ಲಾ ಅಕ್ರಮ ವಲಸಿಗರನ್ನೇ ನೆಚ್ಚಿಕೊಂಡಿದ್ದಾರೆ' ಎಂದು ಅವರು ಹೇಳಿದರು.

'ನಗರದಲ್ಲಿ ಕಟ್ಟಡ ನಿರ್ಮಾಣ ವೇಳೆ ಅವಘಡಕ್ಕೆ ತುತ್ತಾಗಿ 365 ಮಂದಿ ಅಸುನೀಗಿದ್ದಾರೆ. ಈ ಪ್ರಕರಣಗಳಲ್ಲಿ ಗುತ್ತಿಗೆದಾರರು, ಮನೆ ಮಾಲೀಕರ ಮೇಲೆ ಪ್ರಕರಣ ದಾಖಲಾಗಿವೆ. ಕಾರ್ಮಿಕರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕಿದೆ' ಎಂದರು.
ಕಾರ್ಮಿಕರು ನೆಲೆಸಿರುವ ಸ್ಥಳಗಳಲ್ಲಿ ಕಳ್ಳತನ-ಕೊಲೆ-ಸುಲಿಗೆಗಳ ಪ್ರಕರಣಗಳು ಹೆಚ್ಚಾಗುತ್ತಿವೆ. ಜಗಳಗಳು ಕೊಲೆಯಲ್ಲಿ ಅಂತ್ಯವಾಗುತ್ತಿವೆ ಅವರಿಗೆ ಸೂಕ್ತ ರಕ್ಷಣೆಯ ಜೊತೆಗೆ ಸಾಕ್ಷರರನ್ನಾಗಿ ಮಾಡಬೇಕಿದೆ' ಎಂದು ಅವರು ಹೇಳಿದರು.
ಇದೇ ಕಾರ್ಯಕ್ರಮದಲ್ಲಿದ್ದ ಕಾರ್ಮಿಕ ಸಚಿವರೂ ಆಗಿರುವ ಸುರೇಶ್ ಕುಮಾರ್ ಮಾತನಾಡಿ, 'ಅಪಘಾತ, ಅವಘಡಗಳು ಆದಾಗ ಕಾರ್ಮಿಕರಿಗೆ ಸೂಕ್ತ ನ್ಯಾಯ ಒದಗಿಸುವ ಕಾರ್ಯ ಮಾಡಲಾಗುವುದು. ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲಾಗುವುದು' ಎಂದರು.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bangladesh Bus Tragedy: ನದಿಗೆ ಉರಳಿದ 50 ಪ್ರಯಾಣಿಕರಿದ್ದ ಬಸ್, ಹಲವರು ಸಾವು; ಎದೆ ನಡುಗಿಸೋ ವಿಡಿಯೋ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್










Click it and Unblock the Notifications