Deepavali 2024: ಪಟಾಕಿಯಿಂದ 40ಕ್ಕೂ ಹೆಚ್ಚು ಮಂದಿಗೆ ಕತ್ತಲು ತಂದ ಬೆಳಕಿನ ಹಬ್ಬ
ದೀಪಾವಳಿ ಹಬ್ಬದ ಹಿನ್ನೆಲೆ ಎಲ್ಲೆಡೆ ಸಂಭ್ರಮ ಮನೆ ಮಾಡಿದೆ. ಕಳೆದ ಎರಡು ದಿನಗಳಿಂದಲೂ ಬೆಂಗಳೂರು ಸೇರಿದಂತೆ ಹಲವು ಕಡೆ ವಿಜೃಂಭಣೆಯಿಂದ ಹಬ್ಬ ನೆರವೇರಿದೆ. ಮತ್ತೊಂದೆಡೆ ಪಟಾಕಿ ಸಿಡಿತದಿಂದ ಹಲವರು ಗಾಯಗೊಂಡಿರುವ ಘಟನೆಗಳು ವರದಿಯಾಗಿವೆ. ಇವರ ಪಾಲಿಗೆ ಬೆಳಕಿನ ಹಬ್ಬವೇ ಕತ್ತಲು ತಂದಿಟ್ಟಿದೆ.
ರಾಜಧಾನಿ ಬೆಂಗಳೂರಿನಲ್ಲಿ ಪಟಾಕಿ ಸಿಡಿಸಲು ಪ್ರತ್ಯೇಕ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಇದರ ನಡುವೆಯೂ ಹಲವು ಪಟಾಕಿ ಸಿಡಿತದಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಪಟಾಕಿ ಸಿಡಿತದಿಂದಾಗಿ ಬೆಂಗಳೂರಿನಲ್ಲಿ ಮಕ್ಕಳು, ಮಹಿಳೆಯರು ಸೇರಿ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸದ್ಯ ಅವರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಲ್ಲಿ ಪಟಾಕಿ ಸಿಡಿಸಿದವರಿಗಿಂತ ಹೆಚ್ಚಾಗಿ ದೂರದಲ್ಲಿ ನಿಂತು ನೋಡಿದವರಿಗೆ ಹೆಚ್ಚು ಗಾಯಗಳಾಗಿವೆ. ಪಟಾಕಿಯಿಂದ ಹಲವರಿಗೆ ಕಣ್ಣಿಗೆ ಹಾನಿಯಾಗಿದ್ದು, ಮಿಂಟೋ ಆಸ್ಪತ್ರೆ, ಶಂಕರ ಆಸ್ಪತ್ರೆ, ನಾರಾಯಣ ನೇತ್ರಾಲಯ ಸೇರಿದಂತೆ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಹಲವರಿಗೆ ದೇಹದ ವಿವಿಧ ಭಾಗಗಳ ಮೇಲೂ ಸುಟ್ಟ ಗಾಯಗಳು ವರದಿಯಾಗಿವೆ.
ಶಂಕರ್ ಕಣ್ಣಿನ ಆಸ್ಪತ್ರೆಯಲ್ಲಿ ಗಂಭೀರ ಪ್ರಕರಣವೊಂದು ವರದಿಯಾಗಿದೆ. ಹುಡುಗನೊಬ್ಬ ಪಟಾಕಿ ಸಿಡಿಸುವಾಗ ಅದರ ಕಿಡಿ ತಾಗಿ, ಕಣ್ಣಿಗೆ ಗಂಭೀರವಾಗಿ ಗಾಯ ಮಾಡಿಕೊಂಡಿದ್ದಾನೆ. ಕಣ್ಣಿಗೆ ತೀವ್ರ ಗಾಯವಾಗಿರುವುದರಿಂದ ಹುಡುಗ ದೃಷ್ಟಿ ಕಳೆದುಕೊಳ್ಳುವ ಆತಂಕದಲ್ಲಿದ್ದಾನೆ. ಪಟಾಕಿ ದುರಂತದಲ್ಲಿ 20ಕ್ಕೂ ಹೆಚ್ಚು ಮಂದಿ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಎಂಟು ಮಕ್ಕಳಿಗೆ ಕಣ್ಣಿಗೆ ಗಂಭೀರ ಗಾಯಗಳಾಗಿವೆ. ಕೆಲವರಿಗೆ ಆಪರೇಷನ್ ಕೂಡ ಮಾಡಲಾಗಿದ್ದು, ಇನ್ನೂ ಕೆಲವರಿಗೆ ಶೀಘ್ರವೇ ಆಪರೇಷನ್ ಮಾಡಬೇಕಾಗಿದೆ ಎನ್ನಲಾಗಿದೆ.
ಮೂರು ವರ್ಷದ ಹೆಣ್ಣುಮಗುವೊಂದು ಪಟಾಕಿ ಹೊಡೆಯುತ್ತಿರುವುದನ್ನು ನೋಡುತ್ತಿದ್ದಾಗ ಕಿಡಿ ತಗುಲಿದೆ. ಇದರಿಂದ ಮಗುವಿನ ಕಣ್ಣಿಗೆ ಹಾನಿಯಾಗಿದೆ. ಮತ್ತೊಂದೆಡೆ ಅಂಟಿಸಿದ್ದ ಪಟಾಕಿ ಸಿಡಿಯಲಿಲ್ಲ ಎಂದು ನೋಡಲು ಹೋದಾಗ ಅದು ದಿಢೀರ್ ಬ್ಲಾಸ್ಟ್ ಆಗಿ ಕಣ್ಣಿಗೆ ಅಪಾಯ ತಂದುಕೊಂಡಿದ್ದಾನೆ ಎಂದು ವರದಿಯಾಗಿದೆ.

ಆಂಧ್ರಪ್ರದೇಶದ ಒಬ್ಬರಿಗೆ ಪಟಾಕಿಯಿಂದ ಕಣ್ಣಿನ ಕಾರ್ನಿಯಾ ಹಾನಿಗೆ ಒಳಗಾಗಿದೆ. ಹಲವರಿಗೆ ಕಾರ್ನಿಯಾ ಸವೆತ ಉಂಟಾಗಿದೆ. ರೋಗಿಗಳ ಪೈಕಿ ಮಹಿಳೆಯರು ಹಾಗೂ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಮಿಂಟೋ ಆಸ್ಪತ್ರೆಯಲ್ಲಿ ಎಂಟಕ್ಕೂ ಹೆಚ್ಚು ಮಂದಿ ಕಣ್ಣಿನ ಸಮಸ್ಯೆಯಿಂದ ದಾಖಲಾಗಿದ್ದಾರೆ. ಪಟಾಕಿ ಹಚ್ಚುವ ವೇಳೆ ಬಾಲಕನ ಕಣ್ಣಿಗೆ ಗಾಯವಾಗಿದ್ದರೆ, ಪಟಾಕಿ ಕಿಡಿ ತಾಗಿ ಹಿರಿಯ ವ್ಯಕ್ತಿಗೆ ಕಣ್ಣಿನ ಕಾರ್ನಿಯಾಗೆ ಹಾನಿಯಾಗಿದೆ ಎಂದು ಹೇಳಲಾಗಿದೆ.
ವಿವಿಧ ಆಸ್ಪತ್ರೆಗಳಲ್ಲಿ ಪಟಾಕಿ ದುರಂತದಿಂದ ದಾಖಲಾದವರಿಗೆ ಚಿಕಿತ್ಸೆ ಮುಂದುವರಿದಿದ್ದು, ಇನ್ನೂ ಕೆಲವರಿಗೆ ಆಪರೇಷನ್ ಪೂರ್ಣಗೊಂಡಿದೆ. ಕೆಲವರಿಗೆ ಕಣ್ಣಿನ ದೃಷ್ಟಿ ತಾತ್ಕಾಲಿಕವಾಗಿ ಕಳೆದುಕೊಂಡಿದ್ದು, ಆಪರೇಷನ್ ಆದವರಿಗೆ ಇನ್ನು ಎರಡು ವಾರದವರೆಗೆ ಕಣ್ಣಿನ ದೃಷ್ಟಿ ಸರಿಹೋಗುವುದು ತಡವಾಗಲಿದೆ ಎಂದು ವರದಿಯಾಗಿದೆ.
ಇನ್ನು ಪಟಾಕಿ ಸಿಡಿಸುವಾಗ ಮಕ್ಕಳ ಬಗ್ಗೆ ಜೋಪಾನ. ಹೆಚ್ಚು ಸಿಡಿತವಾಗುವ ಪಟಾಕಿಗಳಿಂದ ಮಕ್ಕಳನ್ನು ದೂರವಿರಿಸಿ. ಸಿಡಿಸುವಾಗ ಕಣ್ಣಿಗೆ ಯಾವುದಾದರೂ ಕನ್ನಡಕಗಳನ್ನು ಧರಿಸುವುದು ಒಳ್ಳೆಯದು. ಇದರಿಂದ ಕಣ್ಣಿಗೆ ಹಾನಿಯಾಗುವುದನ್ನು ತಪ್ಪಿಸಬಹುದು ಎಂದು ವೈದ್ಯರು ಕಿವಿಮಾತು ಹೇಳಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications