ಮಳೆ ಕುಂಠಿತ: ದೇಶ 400ಕ್ಕೂ ಅಧಿಕ ಜಿಲ್ಲೆಗಳಲ್ಲಿ ನೀರಿನ ಅಭಾವ
ಬೆಂಗಳೂರು, ಏಪ್ರಿಲ್ 16: ಕಳೆದ ಅಕ್ಟೋಬರ್ನಿಂದ ಮಾರ್ಚ್ವರೆಗೆ ದೇಶದಲ್ಲಿ ಮಳೆ ಪ್ರಮಾಣ ತೀವ್ರ ಕೊರತೆ ಉಂಟಾದ ಹಿನ್ನೆಲೆಯಲ್ಲಿ ದೇಶಾದ್ಯಂತ 404 ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ನೀರಿನ ಕೊರತೆ ಎದುರಿಸುತ್ತಿವೆ.
ಭಾರತೀಯ ಹವಾಮಾನ ಬಿಡುಗಡೆ ಮಾಡಿರುವ ಅಂಕಿ-ಅಂಶಗಳ ಪ್ರಕಾರ 2017ರ ಅಕ್ಟೋಬರ್ನಿಂದ 2018ರ ಮಾರ್ಚ್ವರೆಗೆ 140 ಜಿಲ್ಲೆಗಳಲ್ಲಿ ತೀವ್ರ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಉಳಿದ 109 ಜಿಲ್ಲೆಗಳಲ್ಲಿ ಮಧ್ಯಮ ಪ್ರಮಾಣದ ಹಾಗೂ 156 ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ನೀರಿನ ತೊಂದರೆ ಎದುರಿಸುತ್ತಿವೆ.
ಜನವರಿಯಿಂದ ಮಾರ್ಚ್ ತಿಂಗಳ ಅವಧಿಯಲ್ಲಿ ದೇಶದ 153 ಜಿಲ್ಲೆಗಳು ತೀವ್ರ ನೀರಿನ ಕೊರತೆ ಅನುಭವಿಸಿದ್ದು, ಭಾರತೀಯ ಹವಾಮಾನ ಇಲಾಖೆ ಒಟ್ಟು 588 ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸಿದ್ದು, ವಿಶೇಷವಾಗಿ ದೇಶದ ಈಶಾನ್ಯ ಭಾಗಗಳಲ್ಲಿ ಮಳೆ ಕೊರತೆ ಹೆಚ್ಚಾಗಿ ಕಂಡುಬಂದಿದೆ.

ಕಳೆದ 2017ರ ಮಾನ್ಸೂನ್ ನಿಂದ ಈತನಕ ದೇಶದಲ್ಲಿನ ಮಳೆಗಾತ್ರದ ಪರಿವಿಡಿ (ಎಸ್ಪಿಐ) ಅವಲೋಕಿಸಿದರೆ ಒಟ್ಟು 368 ಜಿಲ್ಲೆಗಳು ಹಗುರದಿಂದ ಭಾರಿ ಪ್ರಮಾಣದ ನೀರಿನ ಕೊರತೆ ಎದುರಿಸುತ್ತಿರುವುದು ಗೊತ್ತಾಗಿದೆ. ಇದು ದೇಶದ ಬಹುತೇಕ ಜಿಲ್ಲೆಗಳಲ್ಲಿ ತೀವ್ರ ನೀರಿನ ಕೊರತೆ ಎದುರಿಸುತ್ತಿರುವುದು ಸೂಚಕವಾಗಿದೆ.
ಜಗತ್ತಿನಲ್ಲಿ ಎಸ್ಪಿಐ ಆಧರಿಸಿ ಆಯಾ ರಾಷ್ಟ್ರಗಳ ಮಳೆ ಪ್ರಮಾಣವನ್ನು ಅಂದಾಜು ಮಾಡಲಾಗುತ್ತದೆ. ಈಗ ನಮ್ಮ ಮುಂದಿರುವ ಅಂಶಗಳನ್ನು ಗಮನಿಸಿದರೆ ದೇಶದಲ್ಲಿ ಮಳೆ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಕುಸಿದಿರುವುದು ಗೊತ್ತಾಗುತ್ತದೆ. ಇದು ಸಾಮಾನ್ಯ ಮಳೆ ಪ್ರಮಾಣಕ್ಕಿಂತ ತೀರಾ ಕಡಿಮೆ ಎಂದು ಭಾರತೀಯ ಹವಾಮಾನ ಇಲಾಖೆಯ ಕ್ಲೆಮೆಟ್ ಡೇಟಾ ಮ್ಯಾನೇಜ್ಮೆಂಟ್ ವಿಭಾಗದ ಮುಖ್ಯಸ್ಥ ಪುಲಕ್ ಗುಹತಕುರ್ತಾ ವಿಶ್ಲೇಷಿಸಿದ್ದಾರೆ.
ಪ್ರಸಕ್ತ ವರ್ಷದ ಜನವರಿ ಅವಧಿಯಲ್ಲಿ ದೇಶದಲ್ಲಿ ಸಾಮಾನ್ಯ ಪ್ರಮಾಣಕ್ಕಿಂತ ಶೇ.63ರಷ್ಟು ಕಡಿಮೆ ಮಳೆ ಬಿದ್ದಿದೆ. ಮಾರ್ಚ್ನಿಂದ ಏಪ್ರಿಲ್ 11ರ ಅವಧಿಯಲ್ಲಿ ವಾಡಿಕೆ ಮಳೆಗಿಂತ ಶೇ.31ರಷ್ಟು ಮಳೆ ಕಡಿಮೆ ದಾಖಲಾಗಿದೆ. ದೇಶದ 472 ಜಿಲ್ಲೆಗಳು ಹಗುರದಿಂದ ಕೂಡಿದ ಭಾರಿ ನೀರಿನ ಕೊರತೆ ಹಾಗೂ 153 ಜಿಲ್ಲೆಗಳು ಭಾರಿ ಕೊರತೆ ಎದುರಿಸುತ್ತಿವೆ. ಉತ್ತರ, ಮಧ್ಯ, ಪಶ್ಚಿಮ ಭಾರತದ ಜಿಲ್ಲೆಗಳಲ್ಲಿ ಭಾರಿ ಮಳೆ ಕೊರತೆ ಎದುರಾಗಿದೆ.
ಕಳೆದ ತಿಂಗಳು, ಅಂದರೆ ಮಾರ್ಚ್ನಲ್ಲಿ ಅತ್ಯಂತ ಕಡಿಮೆ ಮಳೆ ಬಿದ್ದಿದ್ದು, ಪಂಜಾಬ್, ಜಾರ್ಖಂಡ್, ಒಡಿಶಾ, ಗುಜರಾತ್, ಉತ್ತರಪ್ರದೇಶ, ಮಧ್ಯಪ್ರದೇಶ, ಛತ್ತಿಸಗಡ ಹಾಗೂ ತೆಲಂಗಾಣ ರಾಜ್ಯಗಳಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ಜಲಾಶಯಗಳಲ್ಲಿ ನೀರಿನ ಕೊರತೆ ತೀವ್ರ ಕುಗ್ಗಿದೆ.
-
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ












Click it and Unblock the Notifications