ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಣ್ಣೆ ಬಂದ್; ಒಂದೇ ವಾರದಲ್ಲಿ ಸರ್ಕಾರಕ್ಕೆ ಆದ ನಷ್ಟ ಎಷ್ಟು ಗೊತ್ತಾ?

|
Google Oneindia Kannada News

ಬೆಂಗಳೂರು, ಮಾರ್ಚ್ 31: ಕೊರೊನಾ ಮಹಾಮಾರಿಯಿಂದ ದೇಶ ಸಂಪೂರ್ಣ ಲಾಕ್‌ಡೌನ್ ಆಗಿದೆ. ಮದ್ಯಮಾರಾಟಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಿರುವುದರಿಂದ ಸರ್ಕಾರಕ್ಕೆ ಭಾರೀ ಪ್ರಮಾಣದ ಆದಾಯ ಖೋತಾ ಆಗಿದೆ.

ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಎಲ್ಲ ರೀತಿಯ ಬಾರ್ ರೆಸ್ಟೊರೆಂಟ್, ವೈನ್‌ ಸ್ಟೋರ್‌, ಪಬ್ , ಬಾರ್, ಸರ್ಕಾರಿ ಮದ್ಯಮಾರಾಟ ಮಳಿಗೆಗಳನ್ನು ಬಂದ್ ಮಾಡಲಾಗಿದೆ. ಇದರಿಂದ ಪ್ರತಿದಿನ ಅಬಕಾರಿ ಇಲಾಖೆಗೆ ಸುಮಾರು 15 ರಿಂದ 60 ಕೋಟಿ ರುಪಾಯಿ ನಷ್ಟವುಂಟಾಗುತ್ತಿದೆ. ಒಟ್ಟಾರೆ ಕಳೆದ 15 ದಿನಗಳಿಂದ ಕರ್ನಾಟಕದ ಅಬಕಾರಿ ಇಲಾಖೆ ಕೊರೊನಾ ಹೊಡೆತಕ್ಕೆ ತತ್ತರಿಸಿ ಹೋಗಿದ್ದು, 500 ಕೋಟಿ ರುಪಾಯಿ ಆದಾಯ ಕಳೆದುಕೊಂಡಿದೆ.

ಕೊರೊನಾಕ್ಕಿಂತ ಕುಡಿಯೋದಕ್ಕೆ ಹೋಗ್ತಿದೆ ಪ್ರಾಣ: ಉಡುಪಿ ಯಾಕೆ ಫಸ್ಟ್?ಕೊರೊನಾಕ್ಕಿಂತ ಕುಡಿಯೋದಕ್ಕೆ ಹೋಗ್ತಿದೆ ಪ್ರಾಣ: ಉಡುಪಿ ಯಾಕೆ ಫಸ್ಟ್?

2019-20 ನೇ ಸಾಲಿನಲ್ಲಿ 21 ಸಾವಿರ ಕೋಟಿ ರುಪಾಯಿ ಆದಾಯ ನಿರೀಕ್ಷಿಸಲಾಗಿತ್ತು. ಆರ್ಥಿಕ ವರ್ಷ ಮುಗಿಲಯ ಬಂದಿರುವುದರಿಂದ ನಿರೀಕ್ಷೆಯಂತೆ 21 ಸಾವಿರ ಕೋಟಿ ರುಪಾಯಿ ಸಂಗ್ರಹ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

More Than 500 crore rupees loss For Karnataka Excise Department At LockDown Time

Fact Check: ಕರ್ನಾಟಕದಲ್ಲಿ ಮದ್ಯದಂಗಡಿ ಓಪನ್‌ಗೆ ಆದೇಶ?Fact Check: ಕರ್ನಾಟಕದಲ್ಲಿ ಮದ್ಯದಂಗಡಿ ಓಪನ್‌ಗೆ ಆದೇಶ?

ಆದರೆ, ಲಾಕ್‌ಡೌನ್‌ ಸಂದರ್ಭದಲ್ಲಿ ಮದ್ಯದ ಅಂಗಡಿಗಳನ್ನು ಕೇರಳದ ರೀತಿ ಕರ್ನಾಟಕದಲ್ಲೂ ತೆರೆಯಬೇಕು ಎಂಬ ಒತ್ತಾಯ ಕೇಳಿ ಬಂದಿದೆ. ಈ ಕುರಿತು ಮಾತನಾಡಿದ ಅಬಕಾರಿ ಸಚಿವ ನಾಗೇಶ್ ಅವರು, ಕೇರಳದ ರೀತಿ ಮದ್ಯ ಮಾರಾಟಕ್ಕೆ ಅನುವು ಮಾಡಿಕೊಡಬೇಕು ಎಂಬ ಬೇಡಿಕೆಗಳು ಬಂದಿವೆ. ಆದರೆ, ಪ್ರಸ್ತುತ ಈ ವಿಚಾರದಲ್ಲಿ ನಾನೂ ಏನೂ ಮಾತನಾಡುವುದಿಲ್ಲ ಎಂದಿದ್ದಾರೆ. ಮದ್ಯ ಮಾರಾಟಕ್ಕೆ ಅನುವು ಮಾಡಿಕೊಡಬೇಕೋ ಬೇಡವೋ ಎಂಬುದರ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ನಿರ್ಧಾರ ತೆಗೆದುಕೊಳ್ಳುತ್ತಾರೆ. ನಾನು ಏನನ್ನೂ ಹೇಳುವುದಿಲ್ಲ ಆ ವಿಚಾರದಲ್ಲಿ ಎಂದು ಹೇಳಿದ್ದಾರೆ.

English summary
More Than 500 crore rupees loss For Karnataka Excise Department At LockDown Time. everyday 55 crore rupees loss.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X