ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯಶವಂತಪುರ-ತುಮಕೂರು ನಡುವೆ ಓಡಲಿವೆ ಹೆಚ್ಚುವರಿ ರೈಲು

|
Google Oneindia Kannada News

ಬೆಂಗಳೂರು, ಅಕ್ಟೋಬರ್ 22; ವಿದ್ಯುದೀಕರಣಗೊಂಡಿರುವ ಬೆಂಗಳೂರಿನ ಯಶವಂತಪುರ ಮತ್ತು ತುಮಕೂರು ನಡುವಿನ ರೈಲು ಮಾರ್ಗ ರೈಲ್ವೆ ಸುರಕ್ಷತಾ ಆಯುಕ್ತರ ಪರಿಶೀಲನೆಗೆ ಸಿದ್ಧವಾಗಿದೆ. ಪರಿಶೀಲನೆ ಪೂರ್ಣಗೊಂಡ ಬಳಿಕ ಯಶವಂತಪುರ- ತುಮಕೂರು ನಡುವೆ ಹೆಚ್ಚುವರಿ ರೈಲುಗಳು ಸಂಚಾರ ನಡೆಸಲಿವೆ.

ಯಶವಂತಪುರ-ತುಮಕೂರು ನಡುವಿನ 69.47 ಕಿ. ಮೀ. ವಿದ್ಯುದೀಕರಣಗೊಂಡಿರುವ ಮಾರ್ಗದಲ್ಲಿ ರೈಲ್ವೆ ಸುರಕ್ಷತಾ ಆಯುಕ್ತರು ಶೀಘ್ರದಲ್ಲೇ ಪರಿಶೀಲನೆ ನಡೆಸಲಿದ್ದಾರೆ. ನೈಋತ್ಯ ರೈಲ್ವೆ ಇದಕ್ಕೆ ಅಗತ್ಯವಿರುವ ದಾಖಲೆಗಳನ್ನು ಸಲ್ಲಿಕೆ ಮಾಡಿದೆ.

ತುಮಕೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ ತುಮಕೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ

ನೈಋತ್ಯ ರೈಲ್ವೆ ವಿದ್ಯುದೀಕರಣ ಕಾಮಗಾರಿ ಪೂರ್ಣಗೊಂಡ ಬಳಿಕ ಕಳೆದ ತಿಂಗಳಿನಿಂದ ಮಾರ್ಗದಲ್ಲಿ ಪ್ರಾಯೋಗಿಕ ಸಂಚಾರವನ್ನು ನಡೆಸಿದೆ. ಬಳಿಕ ರೈಲ್ವೆ ಸುರಕ್ಷತಾ ಆಯುಕ್ತರಿಗೆ ಸಿಆರ್‌ಎಸ್ ಪರಿಶೀಲನೆಗಾಗಿ ಅಗತ್ಯ ದಾಖಲೆಗಳ ಜೊತೆಗೆ ಆಹ್ವಾನ ನೀಡಲಾಗಿದೆ.

ಧಾರವಾಡ-ಬೆಳಗಾವಿ ನೇರ ರೈಲು ಮಾರ್ಗ ಮತ್ತಷ್ಟು ವಿಳಂಬ? ಧಾರವಾಡ-ಬೆಳಗಾವಿ ನೇರ ರೈಲು ಮಾರ್ಗ ಮತ್ತಷ್ಟು ವಿಳಂಬ?

More Train To Run Between Yeshwantpur Tumakuru Rail Line

ನೈಋತ್ಯ ರೈಲ್ವೆ ಮುಖ್ಯ ಸಂಪರ್ಕಾಧಿಕಾರಿ ಅನೀಶ್ ಹೆಗಡೆ ಈ ಕುರಿತು ಮಾಹಿತಿ ನೀಡಿದ್ದಾರೆ, "ನಾವು ಸಿಆರ್‌ಎಸ್ ಪರಿಶೀಲನೆಗೆ ಅಗತ್ಯ ದಾಖಲೆಗಳನ್ನು ಸಲ್ಲಿಕೆ ಮಾಡಿದ್ದು, ಅವರ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇವೆ" ಎಂದು ಹೇಳಿದ್ದಾರೆ.

 ಕರ್ನಾಟಕದಲ್ಲಿ ಶೀಘ್ರವೇ ಓಡಲಿದೆ; ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಕರ್ನಾಟಕದಲ್ಲಿ ಶೀಘ್ರವೇ ಓಡಲಿದೆ; ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು

ಯಶವಂತಪುರ-ತುಮಕೂರು ಮಾರ್ಗದಲ್ಲಿನ ತುಮಕೂರು-ಹಿರೇಹಳ್ಳಿ ಮಾರ್ಗದ ಸಿಆರ್‌ಎಸ್ ಪರಿಶೀಲನೆ ಈಗಾಗಲೇ ಪೂರ್ಣಗೊಂಡಿದೆ. ಕೆಲವು ಬದಲಾವಣೆಗಳನ್ನು ಸೂಚಿಸಿದ್ದು, ಅವುಗಳನ್ನು ಪೂರ್ಣಗೊಳಿಸಲಾಗಿದೆ.

ಓಡಲಿದೆ ಹೆಚ್ಚುವರಿ ರೈಲು; ನವೆಂಬರ್ ತಿಂಗಳಿನಲ್ಲಿ ರೈಲ್ವೆ ಸುರಕ್ಷತಾ ಆಯುಕ್ತರ ಪರಿಶೀಲನೆ ಪೂರ್ಣಗೊಳ್ಳಬಹುದು ಎಂಬ ವಿಶ್ವಾಸದಲ್ಲಿ ಅಧಿಕಾರಿಗಳು ಇದ್ದಾರೆ. ಪರಿಶೀಲನೆ ಪೂರ್ಣಗೊಂಡು ವಾಣಿಜ್ಯ ಸಂಚಾರಕ್ಕೆ ಒಪ್ಪಿಗೆ ನೀಡಿದರೆ ಬೆಂಗಳೂರು-ತುಮಕೂರು ನಡುವಿನ ರೈಲು ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ಮಾರ್ಗದಲ್ಲಿ ವಾಣಿಜ್ಯ ಸಂಚಾರಕ್ಕೆ ಒಪ್ಪಿಗೆ ಸಿಕ್ಕಿದರೆ ನೈಋತ್ಯ ರೈಲ್ವೆ ಈ ಮಾರ್ಗದಲ್ಲಿ ಹೆಚ್ಚುವರಿ ರೈಲುಗಳನ್ನು ಓಡಿಸಲಿದೆ. ಅದರಲ್ಲಿಯೂ ಮೆಮು ರೈಲುಗಳನ್ನು ಓಡಿಸಲಾಗುತ್ತದೆ. ಆಗ ಪ್ರತಿದಿನ ಉಭಯ ನಗರಗಳ ನಡುವೆ ಸಂಚಾರ ನಡೆಸುವ ಜನರಿಗೆ ಸಹಾಯಕವಾಗಲಿದೆ.

ಇನ್ನು ಕಾಯಬೇಕಿದೆ; ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ರೈಲು ಮಾರ್ಗದ ವಿದ್ಯುದೀಕರಣ ಕಾಮಗಾರಿಯ ಗಡುವು ವಿಸ್ತರಣೆಯಾಗಿದೆ. ಇನ್ನು ಆರು ತಿಂಗಳಿನಲ್ಲಿ ಕಾಮಗಾರಿ ಪೂರ್ಣಗೊಳ್ಳುವ ಗುರಿ ಹೊಂದಲಾಗಿದೆ.

ಯಲಹಂಕ-ದೇವನಹಳ್ಳಿ-ಚಿಕ್ಕಬಳ್ಳಾಪುರ ರೈಲು ಮಾರ್ಗದ ವಿದ್ಯುದೀಕರಣ ಯೋಜನೆಯಲ್ಲಿ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗ ಸೇರಿದೆ. ಈ ಯೋಜನೆಯ ವಿದ್ಯುದೀಕರಣ ಕಾಮಗಾರಿ ಪೂರ್ಣಗೊಳ್ಳುವ ಗುಡುವು 6 ತಿಂಗಳು ಮುಂದೂಡಲಾಗಿದೆ.

ಚಿಕ್ಕಬಣಾವರ-ಹುಬ್ಬಳ್ಳಿ ನಡುವಿನ ಮಾರ್ಗದ ವಿದ್ಯುದೀಕರಣದ ಭಾಗವಾಗಿ ಬೆಂಗಳೂರು-ತುಮಕೂರು ನಡುವಿನ ರೈಲು ಮಾರ್ಗವನ್ನು ವಿದ್ಯುದೀಕರಣ ಮಾಡಲಾಗಿದೆ. ಕಾಮಗಾರಿ ಪೂರ್ಣಗೊಂಡಿದ್ದು, ಪ್ರಾಯೋಗಿಕ ಸಂಚಾರ ನಡೆಯುತ್ತಿದೆ. ಕಾಮಗಾರಿ ಪೂರ್ಣಗೊಂಡ ಬಳಿಕ ಎಲೆಕ್ಟ್ರಿಕ್ ಲೋಕೋಮೋಟಿವ್ ಮೂಲಕ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲಾಗಿದೆ.

ಒಟ್ಟು 856.76 ಕೋಟಿ ಅನುದಾನದಲ್ಲಿ ಚಿಕ್ಕಬಣಾವರ-ಹುಬ್ಬಳ್ಳಿ ರೈಲ್ವೆ ಮಾರ್ಗದ ವಿದ್ಯುದೀಕರಣ ಕಾಮಗಾರಿ ನಡೆಯುತ್ತಿದೆ. ರೈಲ್ವೆ ವಿಕಾಸ ನಿಗಮ ಸೇರಿದಂತೆ ವಿವಿಧ ಸಂಸ್ಥೆಗಳು ವಿದ್ಯುದೀಕರಣ ಕಾಮಗಾರಿಯನ್ನು ಕೈಗೊಂಡಿವೆ.

2022ರ ಮಾರ್ಚ್ ವೇಳೆಗೆ ಬೀರೂರು-ಚಿಕ್ಕಜಾಜೂರು, ತುಮಕೂರು-ಕರಡಿ ಸೆಕ್ಷನ್ ವಿದ್ಯುದೀಕರಣ ಪೂರ್ಣಗೊಳ್ಳಲಿದೆ ಎಂದು ಅಂದಾಜಿಸಲಾಗಿದೆ. ಚಿಕ್ಕಜಾಜೂರು-ಹುಬ್ಬಳ್ಳಿ ನಡುವಿನ ಕಾಮಗಾರಿ ಇನ್ನೂ ನಡೆಯುತ್ತಿದೆ. 2022ರ ಡಿಸೆಂಬರ್ ವೇಳೆಗೆ ಎಲ್ಲಾ ಕಾಮಗಾರಿ ಪೂರ್ಣಗೊಳ್ಳುವ ಸಾಧ್ಯತೆ ಇದೆ.

ಹೆಚ್ಚುವರಿ ರೈಲಿನ ಬೇಡಿಕೆ; ತುಮಕೂರು-ಬೆಂಗಳೂರು ನಡುವೆ ಹೆಚ್ಚುವರಿ ರೈಲು ಓಡಿಸಬೇಕು ಎಂದು ಹಿಂದೆಯೂ ಅನೇಕ ಬಾರಿ ಮನವಿ ಮಾಡಲಾಗಿತ್ತು. ಬೆಳಗ್ಗೆ ಮತ್ತು ಸಂಜೆ ಹೆಚ್ಚು ರೈಲು ಓಡಿಸಬೇಕು ಎಂಬುದು ಬೇಡಿಕೆಯಾಗಿತ್ತು.

Recommended Video

Narendra Modi ಅವರನ್ನು ಟೀಕಿಸಿ , ಪ್ರಶ್ನಿಸಿದ Siddaramaiah | Oneindia Kannada

ಹೆಚ್ಚುವರಿ ರೈಲು ಓಡಿಸಬೇಕು ಎಂಬ ಬೇಡಿಕೆ ನಮ್ಮ ಗಮನಕ್ಕೂ ಬಂದಿದೆ. ರೈಲ್ವೆ ಸುರಕ್ಷತಾ ಆಯುಕ್ತರ ಪರಿಶೀಲನೆ ಪೂರ್ಣಗೊಂಡ ಬಳಿಕ ಈ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ನೈಋತ್ಯ ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.

English summary
South Western Railway will run more trains between Yeshwantpur-Tumakuru line after CRS inspection of electrified line.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X