ಬೆಳಗ್ಗೆ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದ ಬಿಜೆಪಿ ನಾಯಕರು ಸಂಜೆ ಮನೆಗೆ
Recommended Video

ಬೆಂಗಳೂರು, ಏ.4: ಬಿಜೆಪಿಯಿಂದ ಬಂದು ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದ ಯಾದಗಿರಿ ಮೂಲದ ಕೆಲ ಬಿಜೆಪಿ ನಾಯಕರ ಸೇರ್ಪಡೆ ರದ್ದುಗೊಳಿಸಿರುವ ಘಟನೆ ನಡೆದಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಯಾದಗಿರಿ ಮೂಲದ ಕೆಲ ಬಿಜೆಪಿ ನಾಯಕರನ್ನು ಬುಧವಾರ ಬೆಳಗ್ಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ಥಳೀಯ ಕಾಂಗ್ರೆಸ್ ನಾಯಕರ ವಿರೋಧದ ಹಿನ್ನೆಲೆಯಲ್ಲಿ ಸಂಜೆ ವೇಳೆಗೆ ಸೇರ್ಪಡೆ ರದ್ದುಗೊಳಿಸಿರುವ ಘಟನೆ ನಡೆದಿದೆ.
ಬುಧವಾರ ಬೆಳಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಕೆಲ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆಗೊಂಡರು. ಈ ಬಗ್ಗೆ ಸ್ಥಳೀಯ ಕಾಂಗ್ರೆಸ್ ನಾಯಕರಿಂದ ವಿರೋಧ ವ್ಯಕ್ತವಾಗುತ್ತಿರುವುದನ್ನು ಯಾದಗಿರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ದಿನೇಶ್ ಗುಂಡೂರಾವ್ ಗಮನಕ್ಕೆ ತಂದರು.
ಯಾರು ಕುಬೇರರು, ಯಾರು ಕುಚೇಲರು? ಆಸ್ತಿಪಾಸ್ತಿ ವಿವರ ಬೇಕೆ?

ಇದರ ಬೆನ್ನಲ್ಲೇ ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಡಾ. ಭೀಮಾಮೇಟಿ, ದೇವೇಂದ್ರಪ್ಪ ಮನಮಟ್ಟು, ಸಿದ್ದಪ್ಪ ಗುಂಡಳ್ಳಿ, ಭೀಮಾರೆಡ್ಡಿ ಜಟ್ನಳ್ಳಿ, ಮಲ್ಲಿಕಾರ್ಜುನ್ ತಡಿಬಡಿ, ಮಹಾಲಿಂಗರಾವ್ ಖಾನಾಪುರ್ ಸೇರಿ ಹಲವರ ಸೇರ್ಪಡೆಯನ್ನು ರದ್ದುಗೊಳಿಸಲಾಗಿದೆ.












Click it and Unblock the Notifications