ಜೈಲಿನಲ್ಲಿದ್ದ ಮಗನಿಗೆ ಡ್ರಗ್ಸ್ ಕೊಡಲು ಹೋದ ತಾಯಿ ಅಂದರ್
ಬೆಂಗಳೂರು, ಜೂನ್ 17: ತಾಯಿ ಮಗನಿಗಾಗಿ ಯಾವ ತ್ಯಾಗಕ್ಕೂ ಸಿದ್ದ. ಮಗನ ಖುಷಿಗಾಗಿ ತಾಯಿ ತನ್ನ ಜೀವನವನ್ನೇ ಮುಡಿಪಾಗಿಡುತ್ತಾಳೆ. ತಾಯಿ ಮಗನ ಸಂಬಂಧ ಜನ್ಮ ಜನ್ಮ ತೀರಿಸಲಾದ ಅನುಬಂಧ ಅಂತೆಲ್ಲಾ ಹೇಳುತ್ತೇವೆ. ಮಗನ ಒಳಿತಿಗಾಗಿ ಇವೆಲ್ಲಾ ಮಾಡಿದ್ರೆ ತಾಯಿಯೊಬ್ಬಳು ಜೈಲು ಸೇರುವ ಸನ್ನಿವೇಶವೇ ಬರ್ತಾ ಇರಲಿಲ್ಲ. ಜೈಲಿನಲ್ಲಿರುವ ಮಗನಿಗೆ ಮಾದಕ ವಸ್ತು ನೀಡಲು ಹೋದ ತಾಯಿಯು ಜೈಲು ಸೇರಿರುವ ವಿಚಿತ್ರ ಕಥೆಯಿದು.
ತನ್ನ ಮಗ ಜೈಲು ಹಕ್ಕಿಯಾಗಿದ್ದ. ಮಗನನ್ನು ಭೇಟಿಯಾಗಿ ಬಟ್ಟೆ ಕೊಡುವ ನೆಪದಲ್ಲಿ ಮಾದಕ ವಸ್ತುವಾದ ಹ್ಯಾಶಿಷ್ ಆಯಿಲ್ ನೀಡಲು ಯತ್ನಿಸಿದ್ದ ತಾಯಿಯನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ. ಪರ್ವೀನ್ ತಾಜ್ ಬಂಧಿತ ಮಹಿಳೆಯಾಗಿದ್ದಾಳೆ. ಈಕೆಯ ಮಗ ಮೊಹಮ್ಮದ್ ಬಿಲಾಲ್ ಎಂಬಾತ ರಾಬರಿ ಸೇರಿದಂತೆ 11 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ಕೋಣನಕುಂಟೆ ಪೊಲೀಸರು ಬಿಲಾನ್ನನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗಟ್ಟಿದ್ದರು.
ತಾಯಿ-ಮಗ ಶಿಕಾರಿಪಾಳ್ಯದಲ್ಲಿ ವಾಸವಾಗಿದ್ದರು. ಮಗನನ್ನು ನೋಡಲು ಆಗಾಗ ಪರ್ವೀನ್ ಜೈಲಿಗೆ ಬರುತ್ತಿದ್ದಳು. ಆದರೆ ಕಳೆದ ಜೂನ್ 13ರಂದು ಪರಪ್ಪನ ಅಗ್ರಹಾರ ಜೈಲಿಗೆ ಬಂದಿದ್ದ ಈಕೆ ಮಗನಿಗೆ ಬಟ್ಟೆ ಕೊಡುವ ನೆಪದಲ್ಲಿ ಊಟದ ಬಾಕ್ಸ್ನಲ್ಲಿ 5 ಲಕ್ಷ ಮೌಲ್ಯದ ಹ್ಯಾಶಿಷ್ ಆಯಿಲ್ ತಂದಿದ್ದಳು.

ಜೈಲು ಸಿಬ್ಬಂದಿ ಪರಿಶೀಲನೆ ವೇಳೆ ಹ್ಯಾಶಿಷ್ ಆಯಿಲ್ ಪತ್ತೆ
ಜೈಲು ಸಿಬ್ಬಂದಿ ಈಕೆಯನ್ನು ಪರಿಶೀಲಿಸಿದ ವೇಳೆ ಬಟ್ಟೆಯ ಜೊತೆಯಲ್ಲಿ ಮಾದಕ ವಸ್ತು ಪತ್ತೆಯಾಗಿತ್ತು. ತಕ್ಷಣ ಜೈಲು ಸಿಬ್ಬಂದಿ ಪರಪ್ಪನ ಅಗ್ರಹಾರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಆರೋಪಿ ತಾಯಿ ಪರ್ವೀನ್ ತಾಜ್ ಹಾಗೂ ಮಗ ಬಿಲಾಲ್ ಮೇಲೆ ಕೇಸ್ ದಾಖಲಿಸಿರುವ ಪರಪ್ಪನ ಅಗ್ರಹಾರ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಬಟ್ಟೆ ಜೊತೆ ಡ್ರಗ್ಸ್ ಇರೋದು ಗೊತ್ತಿರಲಿಲ್ಲ ಎಂದ ತಾಯಿ
ನನಗೆ ಯಾರೋ ಪೋನ್ ಮಾಡಿ ಜೈಲಿನಲ್ಲಿರುವ ವ್ಯಕ್ತಿಗೆ ಮಗನ ಮುಖಾಂತರ ಬಟ್ಟೆಯ ಬ್ಯಾಗ್ ನೀಡಬೇಕೆಂದು ಎಂದು ಪೋನ್ ಮಾಡಿದ್ದರು. ಇದರಂತೆ ನಾನು ಬ್ಯಾಗ್ ನೀಡಲು ಒಪ್ಪಿಕೊಂಡೆ. ಬ್ಯಾಗ್ನಲ್ಲಿ ಡ್ರಗ್ಸ್ ಇರುವುದು ಗೊತ್ತಿರಲಿಲ್ಲ ಎಂದು ಹೇಳಿಕೆ ನೀಡಿದ್ದಾಳೆ. ಈಕೆ ಹೇಳಿಕೆ ಮೇರೆಗೆ ಫೋನ್ ಬಂದಿದ್ದ ಮೊಬೈಲ್ ನಂಬರ್ ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಗನ ಮೇಲಿನ ಅಪಾರ ಪ್ರೀತಿಯಿಂದಲೋ.. ಮಗನಿಗಾಗಿ ಹ್ಯಾಶಿಷ್ ಆಯಿಲ್ ತಂದಿದ್ದ ತಪ್ಪಿಗೆ ತಾಯಿ ಮಗ ಇಬ್ಬರು ಪರಪ್ಪನ ಜೈಲಿನಲ್ಲಿ ಕಂಬಿ ಎಣಿಸುತ್ತಿರುವುದು ವಿಚಿತ್ರವಾದರು ಸತ್ಯವಾದ ವಿಚಾರವಾಗಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications