ಹುಡುಗರಿಗೂ ತೆರೆದುಕೊಂಡ ಮೌಂಟ್ ಕಾರ್ಮೆಲ್ ಬಾಗಿಲು!
ಬೆಂಗಳೂರು ಜುಲೈ 16: ನಗರದ ಜನಪ್ರಿಯ ಮಹಿಳಾ ಕಾಲೇಜುಗಳಲ್ಲಿ ಒಂದೆನಿಸಿರುವ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಹುಡುಗರಿಗೂ ವ್ಯಾಸಂಗ ಮಾಡುವ ಅವಕಾಶ ಲಭ್ಯವಾಗುವ ಕಾಲ ಬಂದಿದೆ. ಸ್ನಾತಕೋತ್ತರ ಪದವಿ ಮಾಡಬಯಸುವ ವಿದ್ಯಾರ್ಥಿಗಳಿಗೆ ಕಾಲೇಜು ಬಾಗಿಲು ತೆರೆಯುವ ಸಾಧ್ಯತೆಗಳಿವೆ.
ಮುಂಬರುವ ಶೈಕ್ಷಣಿಕ ವರ್ಷದಿಂದ ಸ್ನಾತಕೋತ್ತವರ ಪದವಿ ವಿಷಯಕ್ಕೆ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು ಬಯಸಿದ್ದು, ಇದಕ್ಕಾಗಿ ಬೆಂಗಳೂರು ವಿಶ್ವವಿದ್ಯಾಲಯದ ಉಪ ಕುಲಪತಿಗಳ ಅನುಮತಿ ಕೋರಲಾಗಿದೆ ಎಂದು ಕಾಲೇಜಿನ ಅರ್ಪಣಾ ಹೇಳಿದ್ದಾರೆ.
ಈ ಬಗ್ಗೆ ಅನುಮತಿ ಕೋರಿ ಉನ್ನತ ಶಿಕ್ಷಣ ಪ್ರಧಾನ ಕಾರ್ಯದರ್ಶಿ, ಬೆಂಗಳೂರು ವಿವಿ ಕುಲಪತಿಗಳಿಗೆ ಮನವಿ ಪತ್ರವನ್ನು ಮಾರ್ಚ್ ತಿಂಗಳಲ್ಲಿ ಕಳಿಸಲಾಗಿದೆ. ವಿವಿಗಳ ಕೌನ್ಸಿಲ್ ಸಭೆಯಲ್ಲೂ ಇದಕ್ಕೆ ಅನುಮತಿ ಸಿಕ್ಕಿದೆ. ಎಲ್ಲವೂ ಸರಿಯಾಗಿ ಕೂಡಿ ಬಂದರೆ 1948ರ ನಂತರ ಇದೇ ಮೊದಲ ಬಾರಿಗೆ ಮುಂಬರುವ ಶೈಕ್ಷಣಿಕ ವರ್ಷದಿಂದ ಹುಡುಗಿಯರ ಕಾಲೇಜಿನಲ್ಲಿ ಹುಡುಗರು ವಿದ್ಯಾಭ್ಯಾಸ ನಾಂದಿ ಹಾಡಲಾಗುತ್ತದೆ. [ಮಾಯವಾಗಲಿದೆ ಪುಟಗಟ್ಟಲೇ ಬರೆಯುವ ಪರಿಪಾಠ]

ವಿದ್ಯಾರ್ಥಿಗಳ ಪ್ರವೇಶಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಪ್ರವೇಶಾತಿ ಅನುಪಾತ ಬಗ್ಗೆ ಕಾಲೇಜು ಮಂಡಳಿ ನಿರ್ಧರಿಸಲಿದೆ. ಈ ಬಗ್ಗೆ ವಿವಿ ಕೂಡಾ ಅನುಮತಿ ನೀಡಿದೆ. ವಸಂತ ನಗರ ಕ್ಯಾಂಪಸ್ ನಲ್ಲಿ ತರಗತಿಗಳು ನಡೆಯಲಿವೆ. ಕಾಲೇಜಿಗೆ ಸ್ವಾಯುತ್ತತೆ ಇದ್ದರೂ ವಿವಿಯ್ ಪೂರ್ವಾನುಮತಿ ಪಡೆಯಬೇಕಾಗುತ್ತದೆ ಎಂದು ಪ್ರಿನಿಸಿಪಾಲ್ ಅರ್ಪಣಾ ಹೇಳಿದ್ದಾರೆ.
ಪ್ರವೇಶಾತಿ ಅನುಪಾತದಲ್ಲಿ ವಿದ್ಯಾರ್ಥಿನಿಗಳಿಗೆ ಹೆಚ್ಚಿನ ಪಾಲು ಸಿಕ್ಕರೆ ಸಾಕು, ವಿದ್ಯಾರ್ಥಿಗಳ ಜೊತೆ ವ್ಯಾಸಂಗದಿಂದ ನಮಗೇನೂ ತೊಂದರೆಯಿಲ್ಲ ಎಂದು ಕಾಲೇಜಿನ ವಿದ್ಯಾರ್ಥಿನಿ ಸೌಮ್ಯ ತಮ್ಮ ಅಭಿಪ್ರಾಯ ಹೇಳಿದ್ದಾರೆ.
ಇಲ್ಲಿ ತನಕ ಕಾಲೇಜಿನ ಗೇಟ್ ಹೊರಗೆ ಸುತ್ತುತ್ತಿದ್ದ ಬೈಕುಗಳು ಹಾಗೂ ಅದರ ಸವಾರರು ಕಾಲೇಜಿನೊಳಗೆ ಅಧಿಕೃತವಾಗಿ ಎಂಟ್ರಿ ಕೊಡಬಹುದು. ಮೌಂಟ್ ಕಾರ್ಮೆಲ್ ಕಾಲೇಜಿನ ಬಗ್ಗೆ ಇನ್ನಷ್ಟು ವಿವರಗಳಿಗೆ ವೆಬ್ ಸೈಟ್ ನೋಡಿ (ಒನ್ ಇಂಡಿಯಾ ಸುದ್ದಿ)
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ












Click it and Unblock the Notifications