ಟೀಂ ಇಂಡಿಯಾದಂತೆ ನಾವೆಲ್ಲ ಜನಪ್ರತಿನಿಧಿಗಳು: ಅನಂತ್
ಬೆಂಗಳೂರು, ಡಿ.14: ಆನೇಕಲ್ ತಾಲೂಕು ಜಿಗಣಿ ಹೋಬಳಿಯ ರಾಗಿಹಳ್ಳಿ ಗ್ರಾಮ ಪಂಚಾಯತ್ ಸಮಗ್ರ ಅಭಿವೃದ್ಧಿಗಾಗಿ ನಾವೆಲ್ಲ ಕೆಲಸ ಮಾಡಬೇಕಿದೆ. ಭಾರತದ ಕ್ರಿಕೆಟ್ ತಂಡದಂತೆ ನಾವೆಲ್ಲ ಜನಪ್ರತಿನಿಧಿಗಳು ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೇಳಿದ್ದಾರೆ.
ಸಂಸದರ ಆದರ್ಶ ಗ್ರಾಮ ಯೋಜನೆಯಡಿ ರಾಗಿಹಳ್ಳಿ ಗ್ರಾಮ ಪಂಚಾಯತ್ ದತ್ತು ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಯೋಜನೆ ಪಕ್ಷಾತೀತ ಯೋಜನೆ. ನಾವೆಲ್ಲ ಜನಪ್ರತಿನಿಧಿಗಳು ಪಕ್ಷಾತೀತವಾಗಿ ಕೆಲಸ ಮಾಡುತ್ತೇವೆ. ಸಂಸದರಿಂದ ಗ್ರಾಮ ಪಂಚಾಯತ್ ಸದಸ್ಯರವರೆಗೆ ನಾವುಗಳು ಈ ಗ್ರಾಮಾಭಿವೃದ್ಧಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಲು ಗ್ರಾಮಸ್ಥರು ಮತ್ತು ಸಂಘ ಸಂಸ್ಥೆಗಳವರು ಕೂಡ ಕೈ ಜೋಡಿಸಬೇಕೆಂದು ಮನವಿ ಮಾಡಿದರು. [ಆಂಧ್ರದ ಗ್ರಾಮ ದತ್ತು ಪಡೆದ ಸಚಿನ್ ತೆಂಡೂಲ್ಕರ್]
ಅಧಿಕಾರಿಗಳು ಯೋಜನೆಯನ್ನು ಕಾಲಬದ್ಧವಾಗಿ ಮತ್ತು ಪಾರದರ್ಶಕವಾಗಿ ಜಾರಿಗೊಳಿಸಬೇಕೆಂದು ಸೂಚಿಸಿದರು. ನೆರೆದ ಜನರಿಗೆ ನಾನು ಈ ಗ್ರಾಮ ಪಂಚಾಯತ್ ದತ್ತು ತೆಗೆದುಕೊಂಡಿದ್ದರೂ ನೀವೇ ನನ್ನನ್ನು ದತ್ತು ತೆಗೆದುಕೊಂಡಂತಾಗಿದೆ ಎಂದು ನುಡಿದರು.
ದತ್ತು ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ಡಿ.ಕೆ.ಸುರೇಶ್, ಅನಂತಕುಮಾರ್ ಅವರು ನನ್ನ ಲೋಕಸಭಾ ಕ್ಷೇತ್ರದಡಿಯ ರಾಗಿಹಳ್ಳಿ ಗ್ರಾಮ ಪಂಚಾಯತ್ ನ ಆದರ್ಶಗ್ರಾಮ ಯೋಜನೆಗೆ ಆಯ್ಕೆ ಮಾಡಿಕೊಂಡಿರುವದಕ್ಕಾಗಿ ಅವರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ ಎಂದು ಹೇಳಿದರು.

ಗ್ರಾಮದ ಸಮಸ್ಯೆಗಳತ್ತ ಗಮನ ಹರಿಸಲಾಗುವುದು : ಅನಂತ್
ಚರಂಡಿ ವ್ಯವಸ್ಥೆ, ಪ್ರತಿ ಮನೆಗೆ ಶೌಚಾಲಯ, ಸೂಕ್ತ ಕುಡಿಯುವ ನೀರು ವ್ಯವಸ್ಥೆ, ರೈತ ಸಲಹಾ ಕೇಂದ್ರ ಮೊದಲಾದ ಬೇಡಿಕೆಗಳು ಗಮನಕ್ಕೆ ಬಂದಿದ್ದು, ಪ್ರತಿ ಮನೆಗೆ ಶೌಚಾಲಯಕ್ಕಾಗಿ ತಕ್ಷಣ ಯೋಜನೆ ರೂಪಿಸಲಾಗುವುದು ಮತ್ತು ಶಿವನಹಳ್ಳಿ ಹಾಗು ರಾಗಿಹಳ್ಳಿ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಘಟಕ ಸ್ಥಾಪನೆ ಶೀಘ್ರದಲ್ಲೇ ಮಾಡಲಾಗುವುದು.

ಜನಧನ್ ಯೋಜನೆಯನ್ನು ಜಾರಿ
ಪ್ರತಿ ಬಡಕುಟುಂಬಕ್ಕೆ ಬ್ಯಾಂಕ್ ಖಾತೆ ಒದಗಿಸುವ ಪ್ರಧಾನಮಂತ್ರಿ ಜನಧನ್ ಯೋಜನೆಯನ್ನು ಜಾರಿಮಾಡಲಾಗುವುದು, ಗ್ರಾಮೀಣ ಭಾರತ ಅಭಿವೃದ್ಧಿಗಾಗಿ ಇರುವ ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಅನಂತಕುಮಾರ್ ಹೇಳಿದರು.

ಗಣ್ಯರ ಉಪಸ್ಥಿತಿ
ಕಾರ್ಯಕ್ರಮದಲ್ಲಿ ಶಾಸಕ ಎಂ.ಕೃಷ್ಣಪ್ಪ, ಜಿಲ್ಲಾಪಂಚಾಯತ್ ಅಧ್ಯಕ್ಷ ರಾಮಚಂದ್ರ, ಜಿಲ್ಲಾಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಬೆಟ್ಟಸ್ವಾಮಿ ಮಾತನಾಡಿದರು. ಜಿಲ್ಲಾಪಂಚಾಯತ್ ಸದಸ್ಯರು, ತಾಲೂಕ್ ಪಂಚಾಯತ್ ಸದಸ್ಯರುಗಳು ಮತ್ತು ಗ್ರಾಮ ಪಂಚಾಯತ್ ಸದಸ್ಯರುಗಳು ಹಾಗು ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಶಿವನಹಳ್ಳಿ ರಾಮಕೃಷ್ಣ ಮಿಶನ್ ಶಾಲೆಗೆ ಭೇಟಿ
ಶಿವನಹಳ್ಳಿ ರಾಮಕೃಷ್ಣ ಮಿಶನ್ ಶಾಲೆಯ ಆವರಣದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಸೌರ ವಿದ್ಯುತ್ ದೀಪಗಳನ್ನು ವಿತರಣೆ ಮಾಡಲಾಯಿತು.

ಶಿವನಹಳ್ಳಿ ರಾಮಕೃಷ್ಣ ಮಿಶನ್ ಶಾಲೆಯಲ್ಲಿ ಗಣ್ಯರು
ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ.ಸುರೇಶ್, ಶಾಸಕ ಎಂ.ಕೃಷ್ಣಪ್ಪ, ಜಿಲ್ಲಾಪಂಚಾಯತ್ ಅಧ್ಯಕ್ಷ ರಾಮಚಂದ್ರ, ಜಿಲ್ಲಾಪಂಚಾಯತ್ ಸದಸ್ಯರು, ತಾಲೂಕ್ ಪಂಚಾಯತ್ ಸದಸ್ಯರುಗಳು ಮತ್ತು ಗ್ರಾಮ ಪಂಚಾಯತ್ ಸದಸ್ಯರುಗಳು, ರಾಮಕೃಷ್ಣ ಆಶ್ರಮದ ವಿಷ್ಣುವiಯಾನಂದ ಸ್ವಾಮೀಜಿ, ಸೌಖ್ಯಾನಂದ ಸ್ವಾಮೀಜಿ, ಅದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥೆ ತೇಜಸ್ವಿನಿ ಅನಂತಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ












Click it and Unblock the Notifications