ಉದಾಸಿ, ಬಿಎವೈ ರಾಘವೇಂದ್ರಗೆ ಬಿಜೆಪಿಯಿಂದ ಮಾಫಿ

ಆದರೆ, ಈ ಬಗ್ಗೆ ಇದ್ದ ಗೊಂದಲಗಳನ್ನು ನಿವಾರಿಸಲು ಸುದ್ದಿಗೋಷ್ಠಿ ಕರೆದ ಬಿಜೆಪಿ ವಕ್ತಾರ ಹಾಗೂ ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್ ಅವರು ಶಿವಮೊಗ್ಗದ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಹಾವೇರಿ ಸಂಸದ ಶಿವಕುಮಾರ ಉದಾಸಿ ಅವರ ಅಮಾನತು ಆದೇಶ ಸದ್ಯದಲ್ಲೇ ಹಿಂಪಡೆಯಲಾಗುತ್ತದೆ. ಇಬ್ಬರಿಗೂ ಬಿಜೆಪಿ ಪುನರ್ ಪ್ರವೇಶಕ್ಕೆ ರತ್ನಗಂಬಳಿ ಹಾಸಲಾಗುತ್ತದೆ ಎಂದಿದ್ದಾರೆ.
ಅಲ್ಲದೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೆಜೆಪಿಯನ್ನು ಬಿಜೆಪಿಯಲ್ಲಿ ವಿಲೀನಗೊಳಿಸಿರುವುದರಿಂದ ಈ ಸಂಸದರು ಮತ್ತೆ ಬಿಜೆಪಿಗೆ ವಾಪಾಸಾಗಿದ್ದಾರೆ. ಆದ್ದರಿಂದ ಇವರಿಬ್ಬರ ಮೇಲಿನ ಅಮಾನತು ಆದೇಶ ಹಿಂದಕ್ಕೆ ಪಡೆಯಲಾಗುವುದು ಎಂದಿದ್ದಾರೆ. ಕೆಜೆಪಿ ವಕ್ತಾರ ಧನಂಜಯ್ ಕುಮಾರ್ ಅವರು ಬಿಜೆಪಿ ಪುನರ್ ಪ್ರವೇಶದ ಬಗ್ಗೆ ಸ್ಪಷ್ಟನೆ ಹೊರಬಿದ್ದಿಲ್ಲ. ಬಿಜೆಪಿ ಮತ್ತೆ ಸೇರ್ಪಡೆಗೊಳ್ಳಲು ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅವರ ಕ್ಷಮೆಯಾಚನೆಗೂ ಸಿದ್ಧ ಎಂದು ಧನಂಜಯ್ ಕುಮಾರ್ ಅವರು ಬಹಿರಂಗವಾಗಿ ಘೋಷಿಸಿದ್ದಾರೆ. ಆದರೂ, ಬಿಜೆಪಿ ನಾಯಕರಿಂದ ಇನ್ನೂ ಧನಂಜಯ್ ಅವರಿಗೆ ಆಹ್ವಾನ ಪತ್ರಿಕೆ ತಲುಪಿಲ್ಲ.
ಹಾವೇರಿ ಸಂಸದ ಶಿವಕುಮಾರ ಉದಾಸಿ ಅವರು ಬೆಳಗಾವಿ ಸುವರ್ಣ ವಿಧಾನಸೌಧ ನಿರ್ಮಾಣ, ಸೇರಿದಂತೆ ಲೋಕೋಪಯೋಗಿ ಇಲಾಖೆಯಲ್ಲಿ ನಡೆದ ಅನೇಕ ಅವ್ಯವಹಾರಗಳ ಆರೋಪ ಹೊತ್ತಿದ್ದಾರೆ. ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಅವರು ಅನೇಕ ಭೂ ಹಗರಣಗಳ ಆರೋಪದಿಂದ ಇನ್ನೂ ಮುಕ್ತರಾಗಿಲ್ಲ ಎಂಬುದನ್ನು ಇಲ್ಲಿ ಸ್ಮರಿಸಬಹುದು.
ಯಡಿಯೂರಪ್ಪ ಬೆಂಬಲಿತ ಶಾಸಕ(ವಿಧಾನಪರಿಷತ್ ಸದಸ್ಯ) ಲೆಹರ್ ಸಿಂಗ್ ಅವರು ತಮ್ಮ ಭವಿಷ್ಯದ ಬಗ್ಗೆ ಮಾತನಾಡಿ, ಕೆಜೆಪಿ ಹಾಗೂ ಬಿಜೆಪಿ ವಿಲೀನವಾದ ಮೇಲೆ ನಾನು ಬಿಜೆಪಿ ಪರ ಎಂದರ್ಥ. ಹೀಗಾಗಿ ಅಮಾನತು ಆದೇಶ ಹಿಂಪಡೆಯುವ ಪ್ರಶ್ನೆ ನಿರರ್ಥಕ ಎಂದಿದ್ದಾರೆ.
ಈ ನಡುವ ಅಳಂದದ ಕೆಜೆಪಿ ಶಾಸಕ ಬಿಆರ್ ಪಾಟೀಲ್ ಅವರು ಇನ್ನೂ ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ನಿರ್ಧರಿಸಿಲ್ಲ. ಜ.16ರ ನಂತರ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ. ಒಂದು ಕಾಲದಲ್ಲಿ ಯಡಿಯೂರಪ್ಪ ಬಣದಲ್ಲಿದ್ದ ತುಮಕೂರು ಸಂಸದ ಜಿಎಸ್ ಬಸವರಾಜ್ ಅವರು ಕೆಜೆಪಿ ಹಾಗೂ ಬಿಕೆಪಿ ಸಹವಾಸ ಸಾಕು ಎಂದು ಹೇಳಿ ಕಾಂಗ್ರೆಸ್ ಕಚೇರಿ ಕದ ತಟ್ಟುತ್ತಿದ್ದಾರೆ. ಈ ನಡುವೆ ಬಿಎಸ್ಸಾರ್ ಕಾಂಗ್ರೆಸ್ ದ ಬಗ್ಗೆ ಬಿಜೆಪಿ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ. ಶ್ರೀರಾಮುಲು ಅವರ ಪಕ್ಷ ನಾಲ್ಕು ಶಾಸಕರನ್ನು ಹೊಂದಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications