ರೂಪಾ-ಸಿಂಧೂರಿ ರಂಪ: ಮೋದಿ, ಅಮಿತ್ ಶಾಗೆ ನಟ ಜಗ್ಗೇಶ್ ಮನವಿ
ಇಬ್ಬರು ಮಹಿಳಾ ಅಧಿಕಾರಿಗಳ ಸಂಘರ್ಷ ಮುಂದುವರಿದೆ. ಈ ಸಂಬಂಧ ಬಿಜೆಪಿ ಸಂಸದ ನವರಸನಾಯಕ ಜಗ್ಗೇಶ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಮೊರೆ ಹೋಗಿದ್ದಾರೆ.
ಬೆಂಗಳೂರು, ಫೆಬ್ರವರಿ 21: ಐಎಎಸ್ ಮತ್ತು ಐಪಿಎಸ್ನ ಇಬ್ಬರು ಮಹಿಳಾ ಅಧಿಕಾರಿಗಳ ಬಹಿರಂಗ ಕಿತ್ತಾಟ ರಾಜ್ಯದಿಂದ ಬಿಜೆಪಿ ಹೈಕಮಾಂಡ್ ಅಂಗಳ ತಲುಪಿದೆ.
ಹೌದು, ನಟ ಹಾಗೂ ಬಿಜೆಪಿ ಸಂಸದರಾದ ನವರಸನಾಯಕ ಜಗ್ಗೇಶ್ ಅವರು ಇಬ್ಬರು ಮಹಿಳಾ ಅಧಿಕಾರಿಗಳ ಬಹಿರಂಗ ಸಂಘರ್ಷ, ಆರೋಪ ಪ್ರತ್ಯಾರೋಪ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಮಾಡಿದ್ದಾರೆ.
ಉನ್ನತ ಹುದ್ದೆಯಲ್ಲಿರುವ ಜನರಿಗೆ ಮಾರ್ಗದರ್ಶನ ಮಾಡಬೇಕಾದ ಐಪಿಎಸ್ ಅಧಿಕಾರಿ ರೂಪಾ ಡಿ. ಮೌದ್ಗಿಲ್ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವೈಯಕ್ತಿಕ ದ್ವೇಷ ಮಾಧ್ಯಮಗಳ ಮುಂದೆ ತರಬಾರದು. ಐಎಎಸ್ ಮತ್ತು ಐಪಿಎಸ್ ಹುದ್ದೆಗಳು ಸಾರ್ವಜನಿಕರಿಗೆ ಮಾರ್ಗದರ್ಶನ ನೀಡಬೇಕಾದ ಜವಾಬ್ದಾರಿಯುತ ಸ್ಥಾನಗಳಾಗಿವೆ.

ಸರ್ಕಾರ ಹಾಗೂ ಜನಸಾಮಾನ್ಯರ ಮಧ್ಯೆ ಸೇತುವೆಯಂತೆ ಕಾರ್ಯ ನಿರ್ವಹಿಸುವ ಹುದ್ದೆಗಳಾಗಿವೆ. ಸಾರ್ವಜನಿಕವಾಗಿ ಘನತೆ ಕಾಪಾಡಿಕೊಳ್ಳಲು ಈ ಇಬ್ಬರು ಅಧಿಕಾರಿಗಳಿಗೆ ಗೆ ಪ್ರಧಾನಮಂತ್ರಿಗಳು ಮತ್ತು ಗೃಹ ಸಚಿವರು ಸಲಹೆ ನೀಡಬೇಕೆಂದು ನಾನು ಕೋರುತ್ತೇನೆ ಎಂದು ಸಂಸದರು ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಅನ್ನು ನರೇಂದ್ರ ಮೋದಿ, ಅಮಿತ್ ಶಾ ಮತ್ತು ರೂಪಾ ಅವರಿಗೆ ಟ್ಯಾಗ್ ಮಾಡಿದ್ದಾರೆ.
ಅಧಿಕಾರಿಗಳಾ ರೂಪಾ ಡಿ ಮೌದ್ಗಿಲ್ ಮತ್ತು ರೋಹಿಣಿ ಸಿಂಧೂರಿ ಅವರ ಬಹಿರಂಗ ಕಿತ್ತಾಟ, ಆರೋಪ ಪ್ರತ್ಯಾರೋಪಗಳು ಮುಂದುವರಿಯುತ್ತಲೇ ಇವೆ. ಸುದ್ದಿಗೋಷ್ಠಿ ನಡೆಸುವ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಎಚ್ಚರಿಕೆ, ಫೋಸ್ಟ್ ಹಾಕುವುದು ಮುಂದುವರಿದಿದೆ. ಈ ಸಂಘರ್ಷ ಬೇರೆಯದ್ದೆ ಆಯಾಮಗಳಿಗೆ ತಿರುಗುತ್ತಿದೆ. ಎಲ್ಲೆಡೆ ಇವರ ಸಂಘರ್ಷ ಬಗ್ಗೆ ತೀವ್ರ ಚರ್ಚೆಗಳಾಗುತ್ತವೆ. ರಾಜಕೀಯ ನಾಯಕರು ಸೇರಿದಂತೆ ಅನೇಕರು ಇವರ ವಿರುದ್ಧ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ವಿವಿಧ ಆರೋಪಗಳ ಕುರಿತಾಗಿ ಸುದ್ದಿಯಾಗುತ್ತಿದ್ದ ರೋಹಿಣಿ ಸಿಂಧೂರಿಯವರು ಶಾಸಕ ಸಾ.ರಾ. ಮಹೇಶ್ ಜೊತೆಗೆ ಸಂಧಾನ ಯತ್ನ ನಡೆಸುತ್ತಿದ್ದಾರೆ ಎಂಬ ವಿಚಾರವನ್ನು ರೂಪಾ ಡಿ. ಮೌದ್ಗಿಲ್ ಪ್ರಸ್ತಾಪಿಸಿದರು. ಅಲ್ಲಿಂದ ತೀವ್ರ ವಾಗ್ದಾಳಿ ನಡೆಯಿತಿ. ಪ್ರತಿ ಆರೋಪಗಳು ಶುರುವಾದರು. ರೋಹಿಣಿಯವರ ಕೆಲವು ಖಾಸಗಿ ಫೋಟೊಗಳು ವೈರಲ್ ಆದವು. ನಂತರ ಇದು ನಗ್ನ ಚಿತ್ರ ಹಂಚಿಕೆಯಾಗಿರುವ ಮಟ್ಟಕ್ಕೆ ಬಂದು ನಿಂತಿದೆ.
ಮುಖ್ಯಮಂತ್ರಿಗಳು ಅಧಿಕಾರಿಗಳ ಬಳಿ ಸ್ಪಷ್ಟನೆಗಾಗಿ ನೋಟಿಸ್ ಜಾರಿ ಮಾಡುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದರು. ಮಂಗಳವಾರ ಇಬ್ಬರು ಅಧಿಕಾರಿಗಳು ನೋಟಿಸ್ ಸಹ ನೀಡಲಾಗಿದೆ. ಅಧಿಕಾರಿಗಳ ಶಿಸ್ತು ಉಲ್ಲಂಘನೆ, ದುರ್ನಡತೆ, ಸೇವಾ ನಿಯಮಗಳ ಉಲ್ಲಂಘನೆ ಆಗಿದೆ. ಸೂಕ್ತ ಕ್ರಮಕ್ಕೆ ಸರ್ಕಾರ ಸೂಚನೆ ನೀಡಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications