'ಏಪ್ರಿಲ್ 1ಕ್ಕೆ ಜನರು ಮೂರ್ಖರಾಗಿದ್ದನ್ನು ನೆನಪಿಸಿದ ರಾಜ್ಯ ಸರ್ಕಾರ'
ಬೆಂಗಳೂರು, ಏಪ್ರಿಲ್ 01: ಕರ್ನಾಟಕ ರಾಜ್ಯ ಸರ್ಕಾರ ಇಂದು ಏಪ್ರಿಲ್ 1ರಿಂದ ಹಾಲಿನ ದರ, ವಿದ್ಯುತ್ ಪ್ರತಿ ಯೂನಿಟ್ ದರ ಏರಿಕೆ ಮಾಡಿದೆ. ಇದಲ್ಲದೇ ಬೆಂಗಳೂರಿನ ಜನರ ಮೇಲೆ ಕಸದ ಸೆಸ್ ವಿಧಿಸಿದೆ. ಕನಿಷ್ಠ 10 ರಿಂದ 400 ರೂಪಾಯಿ ವಿಧಿಸಲು ಮುಂದಾಗಿದೆ. ಇದಕ್ಕೆ ವಿಪಕ್ಷ ನಾಯಕರು ಸೇರಿದಂತೆ ಅನೇಕರು ಆಕ್ಷೇಪಿಸಿದ್ದಾರೆ. ಕಸದ ಸೆಸ್ ವಿಧಿಸಲು ಸರ್ಕಾರ ಏಪ್ರಿಲ್ ಮೊದಲ ದಿನ ಆಯ್ಕೆ ಮಾಡಿಕೊಂಡಿದೆ ಎಂದು ಬಿಜೆಪಿ ಸಂಸದ ಪಿಸಿ ಮೋಹನ್ ವ್ಯಂಗ್ಯವಾಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಟ್ವಿಟ್ ಮಾಡಿರುವ ಸಂಸದ ಪಿಸಿ ಮೋಹನ್ ಅವರು, ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಬೆಂಗಳೂರಿನ ಮೇಲೆ ಹೊಸ ಕಸದ ಸೆಸ್ ವಿಧಿಸಲು ಏಪ್ರಿಲ್ ಮೂರ್ಖರ ದಿನವನ್ನು ಆರಿಸಿಕೊಂಡಿದೆ. ಏಕೆಂದರೆ ಜನರು ಮತ್ತೊಮ್ಮೆ ಮೂರ್ಖರಾಗಿದ್ದೇವೆ ಎಂದು ನೆನಪಿಸಲು ಸರ್ಕಾರ ಹೀಗೆ ಮಾಡಿದೆ ಎಂದು ಅವರು ದೂರಿದ್ದಾರೆ.

ಕಟ್ಟಡಗಳ ವಿಸ್ತೀರ್ಣ ಆದಾರದಲ್ಲಿ ಕಸ ನಿರ್ವಹಣೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು (ಬಿಬಿಎಂಪಿ) ಶುಲ್ಕ ವಿಧಿಸಿದೆ. ಇದರಿಂದ ವರ್ಷಕ್ಕೆ ₹600 ಕೋಟಿ ಸಂಗ್ರಹಿಸುವ ಗುರಿಯನ್ನು ಹೊಂದಿದೆ ಎಂದು ಸಂಸದರು ಸರ್ಕಾರ ನಡೆಯನ್ನು ಖಂಡಿಸಿದರು.
ಇದೇ ವಿಚಾರವಾಗಿ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರು, ರಾಜ್ಯದಲ್ಲಿ ದರ ಬೀಜಾಸುರ ಸರ್ಕಾರ ಇದೆ. ದಿನಕ್ಕೊಂದು ಸುಳ್ಳು ಹೇಳಿಕೊಂಡು ಅಗತ್ಯ ವಸ್ತುಗಳ ದರ ಏರಿಕೆ ಮಾಡುತ್ತಿದೆ. ಈಸ್ಟ್ ಇಂಡಿಯಾ ಕಂಪನಿಯಂತೆ ಕಾಂಗ್ರೆಸ ಕಂಪನಿಯು ಕಸ ನಿರ್ವಹಣೆ ಹೆಸರಿನಲ್ಲಿ ಸೆಸ್ ವಿಧಿಸುತ್ತಾ, ಕೋಟಿ ಕೋಟಿ ಸುಲಿಗೆಗೆ ಮುಂದಾಗಿದೆ. ಪಂಚ ಯೋಜನೆಗಳನ್ನು ಜಾರಿಗೆ ತಂದ ಸರ್ಕಾರವು ಅದನ್ನು ಮುಂದಿಟ್ಟುಕೊಂಡು ದರ ಏರಿಕೆ ಮಾಡುತ್ತಿದೆ ಎಂದರು.

2025ರ ಆರ್ಥಿಕ ವರ್ಷದಿಂದ ಹಾಲಿನ ದರ ಪ್ರತಿ ಲೀಟರ್ 4ರೂಪಾಯಿ ಏರಿಕೆ ಆಗಿದೆ. ಇದರಿಂದ ಮೊಸರಿನ ಬೆಲೆ ಸಹ ಅದರಷ್ಟೇ ದುಬಾರಿಯಾಗಿದೆ. ಇದರೊಂದಿಗೆ ಹಾಲಿನ ಇತರ ಎಲ್ಲ ಉತ್ಪನ್ನಗಳ ದರ ಏರಿಕೆ ಆಗಿದ್ದು, ಗ್ರಾಹಕರಿಗೆ ಬೆಲೆ ಏರಿಕೆ ಬರೆ ದೊರೆತಿದೆ.
ಒಂದು ಕೈಲಿ ಕೊಟ್ಟು, ಮತ್ತೆ ಕಿತ್ತುಕೊಳ್ಳುವ ಸರ್ಕಾರ
ವಿದ್ಯುತ್ ದರ ಏರಿಕೆ ಮಾಡಿರುವ ಸರ್ಕಾರ ಅನುಷ್ಠಾನಕ್ಕೆ ತಂದಿದೆ. ಪ್ರತಿ ಯೂನಿಟ್ ದರ ಮುಂದಿನ ಮೂರು ವರ್ಷಕ್ಕೆ ಹೆಚ್ಚಿಸಿದ ಆದೇಶಿಸಿದೆ. ಈ ವರ್ಷ ಪ್ರತಿ ಯೂನಿಟ್ಗೆ 36 ಪೈಸೆ ಹೆಚ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಕುಡಿಯುವ ನೀರಿನ ದರ ಏರಿಕೆಗೆ ಸರ್ಕಾರ ಮುಂದಾಗಿದೆ. ಒಟ್ಟಾರೆ, ಪಂಚ ಗ್ಯಾರೆಂಟಿ ಯೋಜನೆಗಳಿಗೆ, ನೌಕರರ ಗ್ಯಾಚುಟಿ, ವೇತನ ಮುಂದಾದವುಗಳಿಗೆ ಹಣ ಹೊಂದಿಸಲು ಸರ್ಕಾರ ಮುಂದಾಗಿದೆ. ಒಂದು ಕೈಲಿ ಕೊಟ್ಟು, ಮತ್ತೊಂದು ಕೈಲಿ ದರ ಹೆಚ್ಚಿಸಿ ಕಿತ್ತುಕೊಳ್ಳುತ್ತಿದೆ ಎಂದು ಮಹಿಳೆಯರು ದೂರಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications