ದೇವನಹಳ್ಳಿಯ ಕ್ವಾರಿಯಲ್ಲಿ ಹುತಾತ್ಮ ಸೈನಿಕರ ವೀರಗಲ್ಲಿಗೆ ಗೌರವ ನಮನ
ದೇವನಹಳ್ಳಿ, ಮೇ 29 : ರಾಷ್ಟ್ರೀಯ ಸೇನಾ ಸ್ಮಾರಕ ಬೆಂಗಳೂರಿನಲ್ಲಿದೆ. ಬೆಂಗಳೂರಿನ ಹೃದಯ ಭಾಗದಲ್ಲಿ ಇಂಥದ್ದೊಂದು ಸ್ಮಾರಕ ನಿರ್ಮಾಣಕ್ಕೆ ಶ್ರಮ ಹಾಕಿದವರು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಹಾಗೂ ಅವರ ತಂದೆ ಏರ್ ಕಮ್ಯಾಂಡರ್ ಎಂ.ಕೆ.ಚಂದ್ರಶೇಖರ್. ಈ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದವರ ಸ್ಮರಣಾರ್ಥ ಕರ್ನಾಟಕದಲ್ಲಿ ಸ್ಮಾರಕ ನಿರ್ಮಿಸಬೇಕು ಎಂಬ ಉದ್ದೇಶ ಇದರ ಹಿಂದಿತ್ತು.
ಇಲ್ಲಿ ಅಡಿಗಲ್ಲು ಹಾಕಿದ ದಿನದಿಂದ ಅಂತಿಮ ರೂಪ ಪಡೆಯುವ ದಿನದ ತನಕ ಆ ಸ್ಥಳ ಪ್ರವಾಸಿಗರ ಆಕರ್ಷಣೆಯೇ. ಆದರೆ ವೀರಗಲ್ಲು ಇಲ್ಲದೆ ಅದು ಅಪೂರ್ಣ. ಸಂತೋಷದ ಸುದ್ದಿ ಏನೆಂದರೆ, ಬುಧವಾರದಂದು ದೇವನಹಳ್ಳಿಯ ಕ್ವಾರಿಯಲ್ಲಿ ವೀರಗಲ್ಲಿಗೆ ಅಂತಿಮ ರೂಪ ಸಿಕ್ಕಿದೆ. ರಾಷ್ಟ್ರೀಯ ಸ್ಮಾರಕ ಇರುವೆಡೆಗೆ ಶಾಶ್ವತವಾಗಿ ಸ್ಥಳಾಂತರಿಸಲು ಎಲ್ಲ ಸಿದ್ಧವಾಗಿದೆ.
ಎಂಬತ್ತು ಅಡಿಯಷ್ಟು ದೊಡ್ಡದಾದ, ಹತ್ತಿರ ಹತ್ತಿರ ನಾನೂರೈವತ್ತು ಟನ್ ತೂಕದ ಹಾಗೂ ಇಪ್ಪತ್ತೆರಡು ಸಾವಿರದ ಆರು ನೂರು ಹುತಾತ್ಮರ ಹೆಸರನ್ನು ಒಳಗೊಂಡ ವೀರಗಲ್ಲು ಸದ್ಯಕ್ಕೆ ಬೆಂಗಳೂರಿನಿಂದ ನಲವತ್ತೈದು ಕಿ.ಮೀ. ದೂರದ ದೇವನಹಳ್ಳಿ ಕ್ವಾರಿಯಲ್ಲಿದೆ. ರಾಷ್ಟ್ರೀಯ ಸ್ಮಾರಕ ಸ್ಥಳಕ್ಕೆ ತಲುಪಲು ಎಂಟು ವರ್ಷಗಳ ಸುದೀರ್ಘ ಕಾಯುವಿಕೆಯಲ್ಲಿದೆ.

ಸಣ್ಣದೊಂದು ಕಾರ್ಯಕ್ರಮದಲ್ಲಿ ಧ್ವಜ ವಂದನೆ ಮಾಡಲಾಯಿತು. ಯುದ್ಧದಲ್ಲಿ ಭಾಗಿಯಾಗಿದ್ದ ನಿವೃತ್ತ ಸೈನಿಕರು, ಸರಕಾರಿ ಅಧಿಕಾರಿಗಳು ದೇವನಹಳ್ಳಿ ಸಮೀಪ ಭೇಟಿ ನೀಡಿದ್ದರು. ಎಪ್ಪತ್ತೈದು ಅಡಿ ಎತ್ತರದ ಸ್ತೂಪದ ಪರಿಶೀಲನೆ ನಡೆಸಲಾಯಿತು. ನಾನೂರಾ ಐವತ್ತು ಅಡಿ ತೂಕದ ವೀರಗಲ್ಲನ್ನು ಮೇ ಮೂವತ್ತನೇ ತಾರೀಕಿನಂದು ಸಾಗಿಸಿ, ಜುಲೈ ಮೊದಲ ವಾರದಲ್ಲಿ ರಾಷ್ಟ್ರೀಯ ಸ್ಮಾರಕದಲ್ಲಿ ಸ್ಥಾಪಿಸಲಾಗುತ್ತದೆ.

ನಮ್ಮ ಹುತಾತ್ಮ ಸೈನಿಕರ ಗುರುತು ಈ ವೀರಗಲ್ಲು. ಗ್ರಾನೈಟ್ ನಿಂದ ಮಾಡಲಾಗಿದೆ. ಹುತಾತ್ಮರ ಕುಟುಂಬದವರು ಬಂದು ರಾಷ್ಟ್ರೀಯ ಸ್ಮಾರಕದಲ್ಲಿ ಗೌರವ ಸಲ್ಲಿಸಬಹುದು. ಬಿಡಿಎನವರು ಈ ವೀರಗಲ್ಲನ್ನು ಇಲ್ಲಿಂದ ಸ್ಥಳಾಂತರ ಮಾಡುವ ಮುನ್ನ ಒಂದು ಗೌರವ ಸಲ್ಲಿಸುವ ಸಲುವಾಗಿ ನಾವೆಲ್ಲ ಇಲ್ಲಿದ್ದೇವೆ ಎಂದು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಮಾಧ್ಯಮಗಳಿಗೆ ಹೇಳಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications