ಪಾಕ್ ವಿರುದ್ಧದ ಮಸೂದೆಗೆ ಸಂಸದರ ಬೆಂಬಲ ಕೋರಿದ ರಾಜೀವ್ ಚಂದ್ರಶೇಖರ್
ಪಾಕಿಸ್ತಾನವನ್ನು ಉಗ್ರ ಪೋಷಕ ರಾಷ್ಟ್ರವೆಂದು ಘೋಷಿಸುವಂತೆ ಸಂಸದ ರಾಜೀವ್ ಚಂದ್ರಶೇಖರ್ ಅವರಿಂದ ಖಾಸಗಿ ಮಸೂದೆ ಮಂಡನೆ. ಮಸೂದೆಗೆ ಬೆಂಬಲ ನೀಡುವಂತೆ ಎಲ್ಲಾ ರಾಜ್ಯ ಸಭಾ ಸದಸ್ಯರಿಗೆ ಪತ್ರ ಬರೆದು ಕೋರಿದ ರಾಜೀವ್ ಚಂದ್ರಶೇಖರ್.
ಬೆಂಗಳೂರು, ಜುಲೈ 21: ಪಾಕಿಸ್ತಾನ ದೇಶವನ್ನು ಉಗ್ರ ರಾಷ್ಟ್ರವೆಂದು ಘೋಷಿಸಬೇಕೆಂದುಆಗ್ರಹಿಸಿ ಇದೇ ತಿಂಗಳ 28ರಂದು ಸಂಸತ್ತಿನಲ್ಲಿ ತಾವು ಮಂಡಿಸಲಿರುವ ಖಾಸಗಿ ಮಸೂದೆಗೆ ಬೆಂಬಲ ನೀಡಬೇಕೆಂದು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರು, ರಾಜ್ಯಸಭೆಯ ಎಲ್ಲಾ ಸದಸ್ಯರಿಗೆ ಪತ್ರ ಬರೆದಿದ್ದಾರೆ.
ಪತ್ರದಲ್ಲಿ, ಪಾಕಿಸ್ತಾನ ದೇಶವನ್ನು ಉಗ್ರ ಪೋಷಕ ರಾಷ್ಟ್ರವೆಂದು ಘೋಷಿಸಲು ಇದು ಸಕಾಲಎಂದು ಒತ್ತಿ ಹೇಳಿರುವ ಅವರು, ದೇಶದ ಸುರಕ್ಷತೆಯ ದೃಷ್ಟಿಯಲ್ಲಿ ಎಲ್ಲಾ ಸಂಸದರೂ ಒಗ್ಗಟ್ಟಾಗಿ ದನಿಯೆತ್ತಬೇಕೆಂದು ಮನವಿ ಮಾಡಿದ್ದಾರೆ.

ಇದೇ ವರ್ಷ, ಇದೇ ಉದ್ದೇಶದೊಂದಿಗೆ ಫೆಬ್ರವರಿ 3 ಹಾಗೂ ಮಾರ್ಚ್ 10ರಂದು ರಾಜೀವ್ ಚಂದ್ರಶೇಖರ್ ಅವರು ರಾಜ್ಯಸಭೆಯಲ್ಲಿ ಎರಡು ಬಾರಿ ಮಸೂದೆ ಮಂಡಿಸಿದ್ದರು. ಪಾಕಿಸ್ತಾನ ರಾಷ್ಟ್ರವನ್ನು ಉಗ್ರವಾದಿ ರಾಷ್ಟ್ರವೆಂದು ಘೋಷಿಸಲು ವಿಶೇಷ ಠರಾವನ್ನು ಕೇಂದ್ರ ಸರ್ಕಾರ ಜಾರಿಗೊಳಿಸಬೇಕೆಂದು ಒತ್ತಾಯಿಸಿದ್ದರು.

ಇದಕ್ಕೆ ಉತ್ತರ ನೀಡಿದ್ದ ಕೇಂದ್ರ ಸರ್ಕಾರ, ಪಾಕಿಸ್ತಾನವನ್ನು ಉಗ್ರವಾದ ಪೋಷಕ ರಾಷ್ಟ್ರವೆಂದು ಘೋಷಿಸಲು ಯಾವುದೇ ಠರಾವಿನ ಅಗತ್ಯವಿಲ್ಲ ಎಂದು ಸಮಜಾಯಿಷಿ ನೀಡಿದ್ದರಿಂದಾಗಿ, ಚಂದ್ರಶೇಖರ್ ಅವರು ಆ ಮಸೂದೆಗಳನ್ನು ಹಿಂಪಡೆದಿದ್ದರು.

ಈ ವಿಚಾರವನ್ನು ಪತ್ರದಲ್ಲಿ ಉಲ್ಲೇಖಿಸಿರುವ ಅವರು, ಈ ಹಿಂದೆ ತಮ್ಮ ಖಾಸಗಿ ಮಸೂದೆಯನ್ನು ಮಂಡಿಸಿದಾಗ ನಡೆದ ಚರ್ಚೆಗಳಲ್ಲಿ ತಮ್ಮನ್ನು ಬೆಂಬಲಿಸಿದಂತೆ, ಜುಲೈ 28ರಂದು ತಾವು ಎರಡನೇ ಬಾರಿಗೆ ಮಂಡಿಸಲಿರುವ ಮಸೂದೆಗೂ ಬೆಂಬಲ ನೀಡಬೇಕೆಂದು ಕೋರಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications