ರಮೇಶ್ ಕುಮಾರ್ ಆದೇಶ ಕಾನೂನುಬಾಹಿರ: ಸಂಸದ ರಾಜೀವ್
ಬೆಂಗಳೂರು, ಜುಲೈ 29: ರಾಜೀನಾಮೆ ನೀಡಿದ್ದ 17 ಮಂದಿ ಅತೃಪ್ತ ಶಾಸಕರ ರಾಜೀನಾಮೆ ಬಗ್ಗೆ ಇತ್ಯರ್ಥ ಮಾಡದೆ ಎಲ್ಲರನ್ನು ಅನರ್ಹಗೊಳಿಸಿದ್ದರ ಬಗ್ಗೆ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
"ಸಭಾಧ್ಯಕ್ಷ ರಮೇಶ್ ಕುಮಾರ್ ಅವರ ಆದೇಶ ಕಾನೂನುಬಾಹಿರ, ದುರುದ್ದೇಶಪೂರಿತ ಮತ್ತು ಅವರ ಅಧಿಕಾರವನ್ನು ಮೀರಿದ್ದಾಗಿದೆ"
ಎಂದು ಬಿಜೆಪಿ ರಾಜ್ಯಸಭಾ ಸದಸ್ಯರಾದ ರಾಜೀವ್ ಚಂದ್ರಶೇಖರ್ ಅಭಿಪ್ರಾಯಪಟ್ಟಿದ್ದಾರೆ.

"ಸಾಂವಿಧಾನಿಕ ಹುದ್ದೆಗಳಲ್ಲಿ ಇರುವವರು ಅತ್ಯಂತ ಜವಾಬ್ದಾರಿಯಿಂದ ತಮ್ಮ ಅಧಿಕಾರವನ್ನು ಬಳಸಬೇಕು ಎನ್ನುವುದು ಸಂವಿಧಾನದ ಆಶಯವಾಗಿದೆ. ಆದರೆ, ಸ್ವಾರ್ಥ ರಾಜಕೀಯ ಮೇಲಾಟಕ್ಕಾಗಿ, ಸಂವಿಧಾನ ಮತ್ತು ನಿಯಮಗಳನ್ನು ದುರ್ಬಳಕೆ ಮಾಡಿಕೊಳ್ಳುವ ಕಾಂಗ್ರೆಸ್ ಏಜೆಂಟರಂತೆ ವರ್ತಿಸುವವರು, ಸಾಂವಿಧಾನಾತ್ಮಕ ಹುದ್ದೆಗಳಲ್ಲಿದ್ದರೆ ಆಗುವ ಅಪಾಯವನ್ನು ರಮೇಶಕುಮಾರ್ ರಂಥವರು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಬಂಡಾಯ ಶಾಸಕರನ್ನು ಅನರ್ಹಗೊಳಿಸುವ ರಮೇಶ್ ಕುಮಾರ್ ಅವರ ಆದೇಶ ಕಾನೂನುಬಾಹಿರವಷ್ಟೇ ಅಲ್ಲದೇ ಅವರ ಅಧಿಕಾರವನ್ನು ಮೀರಿದ್ದಾಗಿದೆ" ಎಂದು ರಾಜೀವ್ ಹೇಳಿದರು.
"ಇದು ಭ್ರಷ್ಟ ಸರ್ಕಾರದ ವಿರುದ್ಧ ಬಂಡಾಯ ಎದ್ದ ಶಾಸಕರ ವಿರುದ್ಧ, ತಮ್ಮ ನಾಯಕ ಸಿದ್ದರಾಮಯ್ಯನವರ ಪರವಾಗಿ, ರಮೇಶ್ ಕುಮಾರ್ ತೆಗೆದುಕೊಂಡ ಕೀಳು ಪ್ರತೀಕಾರದ ಕ್ರಮವಾಗಿದೆ ಎನ್ನದೇ ವಿಧಿಯಿಲ್ಲ.
ಇಂಥ ಅಧಿಕಾರದ ದುರ್ಬಳಕೆ ಮತ್ತು ಸರ್ವಾಧಿಕಾರಿತನವನ್ನು ಪ್ರಶ್ನಿಸದೇ ಇರಲು ಸಾಧ್ಯವಿಲ್ಲ. ಕುದುರೆ ವ್ಯಾಪಾರಕ್ಕೆ ಅನುವು ಮಾಡಿಕೊಟ್ಟದ್ದಲ್ಲದೆ, ಸಂವಿಧಾನ ಮತ್ತು ಸರ್ವೋಚ್ಛ ನ್ಯಾಯಾಲಯಕ್ಕೆ ಅಗೌರವ ತೋರಿ, ದುರುದ್ದೇಶದಿಂದ ಬಂಡಾಯ ಶಾಸಕರ ವಿರುದ್ಧ ಕಾನೂನು ಬಾಹಿರವಾಗಿ ತೆಗೆದುಕೊಂಡ ಕ್ರಮಗಳಿಗಾಗಿ ರಮೇಶ್ ಕುಮಾರ್ ಉತ್ತರದಾಯಿಗಳಾಗಲೇಬೇಕು." ಎಂದು ಸಂಸದ ರಾಜೀವ್ ಆಗ್ರಹಿಸಿದ್ದಾರೆ.
"ಭಾನುವಾರದಂದು 14 ಶಾಸಕರು ಹಾಗೂ ಗುರುವಾರದಂಡು ಮೂವರು ಶಾಸಕರನ್ನು ಅನರ್ಹಗೊಳಿಸಿ, 15ನೇ ವಿಧಾನಸಭೆ ಅವಧಿ ಮುಗಿಯುವವರೆಗೂ(2023) ಅನರ್ಹರಾಗಿರುತ್ತಾರೆ, ಉಪಚುನಾವಣೆಗೂ ಅವರಿಗೆ ಸ್ಪರ್ಧಿಸಲು ಅವಕಾಶ ಇಲ್ಲ" ಸ್ಪೀಕರ್ ರಮೇಶ್ ಕುಮಾರ್ ಆದೇಶಿಸಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications