ಸಂದೀಪ್ ಉನ್ನಿಕೃಷ್ಣನ್ ಸ್ಮಾರಕಫಲಕ ಧ್ವಂಸ: ಸಂಸದ ರಾಜೀವ್ ಆಕ್ರೋಶ
ಬೆಂಗಳೂರು, ಸೆಪ್ಟೆಂಬರ್ 17: ಯಲಹಂಕದಲ್ಲಿರುವ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಸ್ಮಾರಕ ಫಲಕವನ್ನು ದುಷ್ಕರ್ಮಿಗಳು ರಾತ್ರೋರಾತ್ರಿ ಧ್ವಂಸಗೊಳಿಸಿದ್ದಾರೆ, ಅದನ್ನು ಕೂಡಲೇ ಮರುಸ್ಥಾಪನೆಗೊಳಿಸಿ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ ಅವರನ್ನು ಆಗ್ರಹಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಎಂಪಿ ರಾಜೀವ್ ಚಂದ್ರಶೇಖರ್ ಮುಂಬೈ ದಾಳಿ ವೇಳೆ ದೇಶಕ್ಕಾಗಿ ಪ್ರಾಣತೆತ್ತ ಮೇಜರ್ ಸಂದೀಪ್ ಉನ್ನಿಕೃಷ್ಣನ್ ತ್ಯಾಗ, ಬಲಿದಾನದ ದಿನಕ್ಕೆ ಇನ್ನು ಕೆಲವೇ ದಿನಗಳು ಇರುವ ಸಂದರ್ಭದಲ್ಲಿ ಇಂತಹ ದುರ್ಘಟನೆ ನಡೆದಿರುವುದು ವಿಷಾದಕರ.
Dear @DrParameshwara @hd_kumaraswamy - This is shameful treatmnt of sacrifice of #Namma #Bengaluru braveheart #SandipUnnkkrishnan tht too just a few days bfr 26/11 😡
— Rajeev Chandrasekhar (@rajeev_mp) September 17, 2018
Urge u promptly restore this bfr 26th n track dwn crimnls bhnd this act.@CPBlr @FlagsOfHonour @Namma_Bengaluru https://t.co/RRN4MtP8gr
ಸಂದೀಪ್ ಅವರಿಗೆ ಅಪಮಾನ ಮಾಡುವಂತಹ ಕೃತ್ಯ ಎಸಗಿದ್ದರೂ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ, ಆದ್ದರಿಂದ ಕೂಡಲೇ ಯಲಹಂಕದಲ್ಲಿರುವ ಸಂದೀಪ್ ನಾಮಫಲಕವನ್ನು ಮರು ಸ್ಥಾಪನೆಗೊಳಿಸಿಸಿ ದೇಶಭಕ್ತರಿಗೆ ಆಗಿರುವ ನೋವನ್ನು ಸರಿಪಡಿಸಬೇಕು ಎಂದು ಮನವಿ ಮಾಡಿದ್ದಾರೆ.

ಯಲಹಂಕದ ರಸ್ತೆಯೊಂದರಲ್ಲಿ ಮೇಜರ್ ಸಂದೀಪ್ ಅವರ ಸ್ಮಾರಕ ಫಲಕ ಗ್ರಾನೈಟ್ ನಿಂದ ನಿರ್ಮಿಸಿದ ಕಟ್ಟೆಯೊಂದರಲ್ಲಿ ಅಳವಡಿಸಲಾಗಿತ್ತು. ರಾತ್ರೋರಾತ್ರಿ ದುಷ್ಕರ್ಮಿಗಳು ಗ್ರಾನೈಟ್ ನಾಮಫಲಕ ಹಾಗೂ ಇಟ್ಟಿಗೆಯಿಂದ ನಿರ್ಮಿಸಿದ ಕಟ್ಟೆಯನ್ನು ಒಡೆದುಹಾಕಿ ಸಂಪೂರ್ಣ ನೆಲಸಮಗೊಳಿಸಿದ್ದಾರೆ.
ಈ ಘಟನೆ ಕುರಿತು ಸೋಲ್ಜರಿಂಗ್ ಎಂಬ ಮಾಜಿ ಸೇನಾಧಿಕಾರಿಗಳ ವೇದಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದೆ. ಆ ಮಾಹಿತಿಯನ್ನು ರೀಟ್ವೀಟ್ ಮಾಡಿರುವ ರಾಜೀವ್ ಚಂದ್ರಶೇಖರ್ ಸರ್ಕಾರ ಕೂಡಲೇ ಪುನರ್ ನಿರ್ಮಾಣ ಮಾಡುವಂತೆ ಒತ್ತಾಯಿಸಿದ್ದಾರೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications