ರಾಜೀವ್ ಚಂದ್ರಶೇಖರ್ ರಿಂದ ಚೇತನ್ ಕುಮಾರ್ ಸ್ನೇಹಿತರ ಬಗ್ಗೆ ಮೆಚ್ಚುಗೆ
ಬೆಂಗಳೂರು, ಫೆಬ್ರವರಿ 20: ಬೆಂಗಳೂರಿನಲ್ಲಿ ಏರೋ ಇಂಡಿಯಾ ಪ್ರದರ್ಶನಕ್ಕಾಗಿ ತಾಲೀಮು ನಡೆಸುವಾಗ 'ಸೂರ್ಯಕಿರಣ್' ಡಿಕ್ಕಿಯಾಗಿ ವಾಯುಪಡೆಯ ವಿಂಗ್ ಕಮ್ಯಾಂಡರ್ ಸಾಹಿಲ್ ಗಾಂಧಿ ಹುತಾತ್ಮರಾಗಿದ್ದಾರೆ. ಈ ಘಟನೆಗೆ ಸಂತಾಪ ವ್ಯಕ್ತಪಡಿಸಿರುವ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್, ವಿಂಗ್ ಕಮ್ಯಾಂಡರ್ ವಿಜಯ್ ಶೆಲ್ಕೆ ಹಾಗೂ ಸ್ಕ್ವಾಡ್ರನ್ ಲೀಡರ್ ತೇಜೇಶ್ವರ್ ಸಿಂಗ್ ನೆರವಿಗೆ ಧಾವಿಸಿದವರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನವರು ಹಾಗೂ ಕನ್ನಡಿಗರೇ ಆದ ಬಿ.ಎಂ.ಚೇತನ್ ಕುಮಾರ್ ಮತ್ತು ಅವರ ಸ್ನೇಹಿತರು ಕೂಡಲೇ ನೆರವಿಗೆ ಧಾವಿಸಿದ್ದರು. ಈ ಸಹಾಯವನ್ನು ಮನಸಾರೆ ಸ್ಮರಿಸಿರುವ ರಾಜೀವ್ ಚಂದ್ರಶೇಖರ್, ಭಾರತೀಯ ವಾಯು ಸೇನೆಯ ಸದಸ್ಯನಾಗಿ ಧನ್ಯವಾದ ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.
ಮಾಧ್ಯಮಗಳು ಹಾಗೂ ನಮ್ಮ ಬೆಂಗಳೂರು ಫೌಂಡೇಷನ್ ನಂಥವುಗಳಿಂದ ಮೆಚ್ಚುಗೆ ವ್ಯಕ್ತಪಡಿಸಿದರೆ, ಸನ್ಮಾನ ಕಾರ್ಯಕ್ರಮಗಳು ಮಾಡಿದರೆ ಅದೊಂದು ಧನ್ಯವಾದ ತಿಳಿಸುವ ಕಾರ್ಯಕ್ರಮದಂತೆ ಆಗುತ್ತದೆ ಎಂಬ ಅಭಿಪ್ರಾಯ ಪಟ್ಟಿದ್ದಾರೆ.

ನಿಜವಾದ ಕನ್ನಡಿಗರು, ಬೆಂಗಳೂರು, ಭಾರತೀಯ ನಾಗರಿಕರು ಹಾಗೂ ಸ್ಫೂರ್ತಿಯನ್ನು ಚೇತನ್ ಕುಮಾರ್ ಮತ್ತು ಅವರ ಸ್ನೇಹಿತರು ಪ್ರತಿನಿಧಿಸುತ್ತಾರೆ. ನಮ್ಮ ಯೋಧರಿಗೆ ಅಗತ್ಯ ಸಮಯದಲ್ಲಿ ನೆರವಿಗೆ ಮುಂದಾಗಿದ್ದಾರೆ. ನಮಗಾಗಿ ಸೇವೆ ಸಲ್ಲಿಸುವ ಹಾಗೂ ಕಾಪಾಡುವವರ ಸೇವೆಗೆ ಹಾಗೂ ರಕ್ಷಣೆಗೆ ಮುಂದಾಗಿದ್ದಾರೆ ಎಂದು ಹೇಳಿದ್ದಾರೆ.
ಚೇತನ್ ಹಾಗೂ ಅವರ ಸ್ನೇಹಿತರು ತಮ್ಮ ನಿಸ್ವಾರ್ಥ ಸೇವೆಗಾಗಿ ನಿಜಕ್ಕೂ ದೊಡ್ಡ ಗೌರವಕ್ಕೆ ಅರ್ಹರು. ಅವರಿಗಾಗಿ ಭಾರತೀಯ ವಾಯು ಸೇನೆಯ ಘೋಷ ವಾಕ್ಯ "ವೈಭವದೊಂದಿಗೆ ನೀವು ಆಕಾಶವನ್ನು ಸ್ಪರ್ಶಿಸಬಹುದು" ಎಂಬ ಮಾತನ್ನು ಉದಾಹರಿಸಲು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications