ಡಿಜಿಟಲ್ ನಲ್ಲಿ ಮಕ್ಕಳ ಲೈಂಗಿಕ ದೌರ್ಜನ್ಯ ತಡೆಗೆ ಸಂಸದ ರಾಜೀವ್ ಆಗ್ರಹ
ಬೆಂಗಳೂರು, ಡಿಸೆಂಬರ್ 24: ಕೇಂದ್ರ ಕಾನೂನು ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಗೆ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಪತ್ರ ಬರೆದು, ಡಿಜಿಟಲ್ ಮೂಲಕ ಹೆಚ್ಚುತ್ತಿರುವ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ನಿಯಂತ್ರಣಕ್ಕೆ ಮನವಿ ಮಾಡಿದ್ದಾರೆ. ಜತೆಗೆ ಮಕ್ಕಳ ಸುರಕ್ಷತೆಗೆ ಮಾರಕವಾದ ಮೊಬೈಲ್ ಅಪ್ಲಿಕೇಶನ್ ಗಳ ಸ್ಥಗಿತಕ್ಕೆ ಕೇಳಿಕೊಂಡಿದ್ದಾರೆ.
ಮಾಧ್ಯಮದ ವರದಿಯೊಂದನ್ನು ಉದಾಹರಣೆಯಾಗಿ ನೀಡಿರುವ ಅವರು, ಸಣ್ಣ ಅವಧಿಯ ವಿಡಿಯೋಗಳನ್ನು ಒಳಗೊಂಡ ಮೊಬೈಲ್ ಅಪ್ಲಿಕೇಷನ್ ಗಳು ಹೆಚ್ಚುತ್ತಿವೆ. ಗೂಗಲ್ ಪ್ಲೇ ಅಥವಾ ಇತರೆ ಅಪ್ಲಿಕೇಷನ್ ಸ್ಟೋರ್ ಮೂಲಕ ಡೌನ್ ಲೋಡ್ ಕೂಡ ಸುಲಭವಾಗಿದೆ. ಕ್ವಾಯ್, ಕ್ಲಿಪ್, ಟಿಕ್ ಟಾಕ್, ನ್ಯೂಸ್ ಡಾಗ್, ಲೈವ್ ಮಿ ಹಾಗೂ ಹಲೋದಂಥ ಅಪ್ಲಿಕೇಷನ್ ಗಳು ಮಕ್ಕಳಿಗೆ ಮಾರಕವಾಗಿವೆ ಎಂದಿದ್ದಾರೆ.
ಮಕ್ಕಳಲ್ಲಿ ಅಶ್ಲೀಲತೆಯನ್ನು ಈ ಅಪ್ಲಿಕೇಷನ್ ಗಳು ಬಿತ್ತುತ್ತಿವೆ ಎಂದು ಆತಂಕ ವ್ಯಕ್ತಪಡಿಸಿರುವ ಅವರು, ಇಂಟರ್ ಪೋಲ್ ಪ್ರಕಾರ ಕಳೆದ ವರ್ಷವೊಂದರಲ್ಲೇ ಭಾರತದಲ್ಲಿ ಆನ್ ಲೈನ್ ಮೂಲಕ ಇಪ್ಪತ್ನಾಲ್ಕು ಲಕ್ಷ ಮಕ್ಕಳ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಅಮೆರಿಕ ಸಂಸ್ಥೆಯೊಂದರ ಪ್ರಕಾರ ಇಪ್ಪತ್ನಾಲ್ಕು ಲಕ್ಷ ಮಕ್ಕಳು ನಾಪತ್ತೆಯಾಗಿದ್ದಾರೆ ಮತ್ತು ಅವರ ಮೇಲೆ ದೌರ್ಜನ್ಯ ಆಗಿದೆ. ಇದು ವರದಿ ಆಗಿರುವ ಲೆಕ್ಕಾಚಾರ ಮಾತ್ರ ಎಂದು ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.

ಡಿಜಿಟಲ್ ಮೂಲಕ ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯವನ್ನು ತಡೆಯುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ವಿಚಾರವಾಗಿ ಕೆಲವು ಪ್ರಮುಖ ಸಲಹೆಗಳನ್ನು ನೀಡಿದ್ದಾರೆ. ಮಕ್ಕಳಿಗೆ ಸೂಕ್ತ ಅಲ್ಲದ ಮಾಹಿತಿ ಒಳಗೊಂಡ ಅಪ್ಲಿಕೇಷನ್ ಗಳನ್ನು ಸ್ಥಗಿತಗೊಳಿಸುವುದು ಸೇರಿದಂತೆ ಇತರ ಕಾನೂನು ನಡಾವಳಿ ತೆಗೆದುಕೊಳ್ಳಲು ಮನವಿ ಮಾಡಿದ್ದಾರೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು?












Click it and Unblock the Notifications