ಬನ್ನೇರುಘಟ್ಟದಲ್ಲಿ ಗಣಿಗಾರಿಕೆ ನಿರ್ಬಂಧಿಸುವಂತೆ ರಾಜೀವ್ ಮನವಿ
ಬೆಂಗಳೂರು, ಡಿಸೆಂಬರ್ 21: ಬನ್ನೇರುಘಟ್ಟ ಜೈವಿಕ ಅರಣ್ಯದ ಸುತ್ತಲೂ ನಡೆಯುತ್ತಿರುವ ಗಣಿಗಾರಿಕೆಯನ್ನು ನಿರ್ಬಂಧಿಸುವಂತೆ ಒತ್ತಾಯಿಸಿ ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್ ಶುಕ್ರವಾರ ಕೇಂದ್ರ ಸಚಿವ ಹರ್ಷವರ್ದನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ರಾಜೀವ್ ಅವರ ಮನವಿಗೆ ಸ್ಪಂದಿಸಿರುವ ಸಚಿವರು ಗಣಿಗಾರಿಕೆ ನಿರ್ಬಂಧದ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಸೇವ್ ಬನ್ನೇರುಘಟ್ಟ ಎಂಬ ಶೀರ್ಷಿಕೆಯಡಿ ನಮ್ಮ ಬೆಂಗಳೂರು ಪ್ರತಿಷ್ಠಾನ ಹಾಗೂ ಯುನೈಟೆಡ್ ಬೆಂಗಳೂರು ಸಂಸ್ಥೆಯು ನಿರಂತರ ಹೋರಾಟ ಮಾಡುತ್ತಿದೆ. ಬನ್ನೇರುಘಟ್ಟ ಅರಣ್ಯದ ಸುತ್ತಮುತ್ತಲ ಪ್ರದೇಶದಲ್ಲಿ ಗಣಿಗಾರಿಕೆ ಮಾಡುವುದರಿಂದ ಅರಣ್ಯದಲ್ಲಿರುವ ಪ್ರಾಣಿಗಳಿಗೆ ತೊಂದರೆಯುಂಟಾಗುತ್ತಿದೆ ಎನ್ನುವುದು ಅವರ ವಾದವಾಗಿದೆ.
ಗಣಿಗಾರಿಕೆ ಹೆಚ್ಚಳದಿಂದ ಕಾಡು ನಾಶವಾಗುತ್ತಿದೆ, ಅಷ್ಟೇ ಅಲ್ಲದೆ ಗಣಿಗಾರಿಕೆ ಮಾಫಿಯಾದಿಂದ ಹಳ್ಳಿಗೆ ಹಳ್ಳಿಯೇ ನಾಶವಾಗುತ್ತಿದೆ, ಆನೆಗಳು ಆ ಸ್ಥಳವನ್ನು ಬಿಟ್ಟು ಬೇರೆಡೆಗೆ ಹೋಗುತ್ತಿವೆ. ಸುತ್ತಮುತ್ತಲಿನ ಹಳ್ಳಿ ಜನರ ಆರೋಗ್ಯದ ಮೇಲೂ ತೀವ್ರ ಪರಿಣಾಮವನ್ನುಂಟು ಮಾಡುತ್ತಿದೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ನಮ್ಮ ಬೆಂಗಳೂರು ಪ್ರತಿಷ್ಠಾನ ಆರ್ಟಿಐ ಅರ್ಜಿ ಹಾಕಿ ಪಡೆದಿರುವ ಮಾಹಿತಿ ಪ್ರಕಾರ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಸಂರಕ್ಷಿತ ಪ್ರದೇಶದಿಂದ ಕೇವಲ 1 ಕಿ.ಮೀ ಹಾಗೂ ಬಫರ್ ವಲಯದಿಂದ ಕೇವಲ 10 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಯುತ್ತಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications