ಶಾಂತಿನಗರದ ಜಪಾನಿ ಹೋಟೆಲ್ ವಿರುದ್ಧ ಸಂಸದ ಕಿಡಿ
ಬೆಂಗಳೂರು, ಜೂ.27: ಸರ್ವಜನಾಂಗದ ಶಾಂತಿಯ ತೋಟ ಎನಿಸಿರುವ ಕನ್ನಡ ನಾಡಿನ ರಾಜಧಾನಿ ಬೆಂಗಳೂರಿನ ಶಾಂತಿನಗರದ ಹೋಟೆಲ್ ವೊಂದರ ಮೇಲೆ ಸಂಸದ ರಾಜೀವ್ ಚಂದ್ರಶೇಖರ್ ಕಿಡಿಕಾರಿದ್ದಾರೆ. ಕಳೆದ ಕೆಲವು ದಿನಗಳಿಂದ ಸದ್ದು ಮಾಡಿದ್ದ ಜಪಾನಿ ಹೋಟೆಲ್ ವಿರುದ್ಧ ಸಂಸದ ರಾಜೀವ್ ಅವರು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.
ಶಾಂತಿನಗರದ Uno-In ಜಪಾನಿ ಹೋಟೆಲ್ ನಲ್ಲಿ ಭಾರತಿಯರಿಗೆ ಪ್ರವೇಶ ನಿರಾಕರಿಸಿದ ಸುದ್ದಿಯನ್ನು ಬೆಂಗಳೂರು ಮಿರರ್ ಇತ್ತೀಚೆಗೆ ಪ್ರಕಟಿಸಿತ್ತು. ಈ ಬಗ್ಗೆ ರೇಡಿಯೋ ಮಿರ್ಚಿ 98.3 ಎಫ್ಎಂ ವಾಹಿನಿಯ 'ಹಾಯ್ ಬೆಂಗಳೂರು' ಕಾರ್ಯಕ್ರಮದಲ್ಲಿ ಆರ್ ಜೆ ಸ್ಮಿತಾ ದೀಕ್ಷಿತ್ ಕೂಡಾ ಬೆಂಗಳೂರಿಗರ ಗಮನ ಸೆಳೆದರು.
ವಿವಾದಿತ ಹೋಟೆಲ್ ವಿರುದ್ಧ ನಿರೀಕ್ಷೆಯಂತೆ ಜನಾಭಿಪ್ರಾಯ ಸಿಕ್ಕಿತು. ಆದರೆ, ವಿಷಯ ಮುಂದಕ್ಕೆ ಹೋಗಲಿಲ್ಲ. ಈ ಸುದ್ದಿ ಬಗ್ಗೆ ತಿಳಿದ ಜನಾನುರಾಗಿ ಸಂಸದ ರಾಜೀವ್ ಚಂದ್ರಶೇಖರ್ ಅವರು 'ಘಟನೆ ಬಗ್ಗೆ ತೀವ್ರ ವಿಷಾದವಿದೆ. ಯಾವುದೇ ಹೊಟೆಲ್ ಆಗಲಿ ಅತಿಥಿಗಳನ್ನು ರಾಷ್ಟ್ರೀಯತೆ ಆಧಾರದ ಮೇಲೆ ವರ್ಣ ಬೇಧ ಮಾಡುವಂತಿಲ್ಲ' ಎಂದಿದ್ದಾರೆ.

ಈ ಸಂಬಂಧ ಸಂಸದ ರಾಜೀವ್ ಚಂದ್ರಶೇಖರ್ ಈಗಾಗಲೇ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಜಾತಿ, ಧರ್ಮ, ರಾಷ್ಟ್ರೀಯತೆಯ ಹೆಸರಿನಲ್ಲಿ ತಾರತಮ್ಯ ಮಾಡುವುದನ್ನು ಬಲವಾಗಿ ವಿರೋಧಿಸಿದ್ದಾರೆ.
'ನಾವೇನು ಪ್ರಜಾಪ್ರಭುತ್ವದಲ್ಲಿದ್ದೇವಾ ಅಥವಾ ಇನ್ನೂ ಬ್ರಿಟಿಷ್ ರಾಜ್ಯಭಾರವಿದೆಯೇ? ಈ ಹಿಂದೆ Indians and dogs not allowed ಎಂದು ಬ್ರಿಟಿಷರು ಹಾಕಿದ್ದ ಫಲಕ ಕಿಚ್ಚು ಎಬ್ಬಿಸಿತ್ತು. ಈಗ Indians not allowed ಎಂಬುದನ್ನು ಯಾವ ರೀತಿಯಿಂದಲೂ ಸಹಿಸಲು ಸಾಧ್ಯವಿಲ್ಲ' ಎಂದು ಬಿ ಪ್ಯಾಕ್ ಸದಸ್ಯ, ಮಣಿಪಾಲ್ ವಿದ್ಯಾಸಂಸ್ಥೆ ಚೇರ್ಮನ್ ಮೋಹನ್ ದಾಸ್ ಪೈ ಖಂಡಿಸಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications