RERA ಕಾಯ್ದೆ ಲೋಪಗಳ ಬಗ್ಗೆ ಸಿಎಂಗೆ ಸಂಸದ ರಾಜೀವ್ ಚಂದ್ರಶೇಖರ್ ಪತ್ರ
ಸಂಸದ ರಾಜೀವ್ ಚಂದ್ರಶೇಖರ್ ಅವರಿಂದ ಸಿಎಂ ಸಿದ್ದರಾಮಯ್ಯಗೆ ಪತ್ರ. ಕರ್ನಾಟಕದಲ್ಲಿರುವ ರಿಯಲ್ ಎಸ್ಟೇಟ್ (ರೆರಾ ಕಾಯ್ದೆಯಲ್ಲಿನ ಲೋಪದೋಷಗಳ ಬಗ್ಗೆ ಉಲ್ಲೇಖ.
ಬೆಂಗಳೂರು, ಆಗಸ್ಟ್ 10: ರಾಜ್ಯ ಸರ್ಕಾರ ಜಾರಿಗೊಳಿಸಿರುವ ರಿಯಲ್ ಎಸ್ಟೇಟ್ ಕಾಯ್ದೆಯಲ್ಲಿ (RERA - ರೆರಾ) ಹಲವಾರು ಲೋಪ ದೋಷಗಳಿದ್ದು, ಅವುಗಳು ಈ ಕಾಯ್ದೆಯ ಲಾಭವು ಗ್ರಾಹಕರಿಗೆ ಸಿಗದಂತೆ ನಿರ್ಬಂಧಿಸುವಂತಾಗಿದೆ ಎಂದು ಸಂಸದ ರಾಜೀವ್ ಚಂದ್ರಶೇಖರ್ ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಸತಿ ಸಚಿವ ಎಂ. ಕೃಷ್ಣಪ್ಪ ಅವರಿಗೆ ಪತ್ರ ಬರೆದಿರುವ ಅವರು, ಕಾಯ್ದೆಯಲ್ಲಿನ ಲೋಪದೋಷಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಹೊಸದಾಗಿ ಬಂದಿರುವ ಈ ರೆರಾ ನಿಯಮಗಳನ್ವಯ, ಈಗಾಗಲೇ ಚಾಲ್ತಿಯಲ್ಲಿರುವ ರಿಯಲ್ ಎಸ್ಟೇಟ್ ಯೋಜನೆಗಳನ್ನು ಕಾಯ್ದೆಯ ವ್ಯಾಪ್ತಿಯ ಹೊರಗಿಡುವ ಪ್ರಯತ್ನ ಮಾಡಲಾಗಿದೆ. ರಿಯಲ್ ಎಸ್ಟೇಟ್ ಉದ್ದಿಮೆದಾರರ ಮೇಲೆ ಹಿಡಿತ ಸಾಧಿಸಲು ಸರ್ಕಾರಕ್ಕೆ ಸಾಧ್ಯವಿಲ್ಲದಂಥ ನಿಯಮಗಳು ಇವಾಗಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಸಾಮಾನ್ಯವಾಗಿ ಹೊಸ ಕಾಯ್ದೆ, ಕಾನೂನುಗಳನ್ನು ಮಾಡುವುದು, ಅಂಕೆಯಿಲ್ಲದೆ ಸಾಗುವ ಇಂಥ ವಾಣಿಜ್ಯ ವ್ಯವಹಾರಗಳನ್ನು ಸರ್ಕಾರದ, ಕಾನೂನಿನ ಸುಪರ್ದಿಗೆ ತರುವ ಉದ್ದೇಶವನ್ನು ಹೊಂದಿರುತ್ತದೆ. ಆದರೆ, ರೆರಾ ಕಾಯ್ದೆಯಡಿ ರೂಪಿಸಲಾಗಿರುವ ಯಾವುದೇ ನಿಯಮಗಳು ಇಂಥ ಉದ್ದೇಶಗಳಿಗೆ ತದ್ವಿರುದ್ಧವಾಗಿವೆ ಎಂದು ರಾಜೀವ್ ಚಂದ್ರಶೇಖರ್ ಅವರು ಪತ್ರದಲ್ಲಿ ಹೇಳಿದ್ದಾರೆ.
ಕಾಯ್ದೆಯು ಸ್ಪಷ್ಟವಾಗಿ ಅಧಿಕಾರ ದುರುಪಯೋಗವನ್ನು ಬಿಂಬಿಸುತ್ತದೆ ಎಂದು ಅವರು ಹೇಳಿದ್ದಾರೆ.












Click it and Unblock the Notifications