Breaking:ಮಾಜಿ ಸಿಎಂ ಎಚ್ಡಿಕೆ ವಿರುದ್ಧ ಸುಮಲತಾ ಅಂಬರೀಶ್ ಆಕ್ರೋಶ
ಬೆಂಗಳೂರು, ಜುಲೈ 09: ಬೆಂಗಳೂರಿನಲ್ಲಿ ಸಂಸದೆ ಸುಮಲತಾ ಅಂಬರೀಶ್ ದಿಢೀರ್ ಸುದ್ದಿಗೋಷ್ಠಿ ನಡೆಸಿ, ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂಬರೀಶ್ ಹೆಸರು ದುರ್ಬಳಕೆ ಬಗ್ಗೆ ಬೇಸರ ವ್ಯಕ್ತಪಡಿಸಿ, ಭಾವುಕರಾಗಿ ಮಾತನಾಡಿದ್ದಾರೆ.
ಅಂಬರೀಶ್ ಹೆಸರು ಹೇಳಲು ಯೋಗ್ಯತೆ ಇಲ್ಲದವರು ಇಂದು ಹೆಸರು ಬಳಸಿ ರಾಜಕೀಯ ಮಾಡುತ್ತಿದ್ದಾರೆ. ಅಂಬರೀಶ್ ಕಾಲದಲ್ಲೇ ಅಕ್ರಮ ನಡೆದಿತ್ತು ಎಂದು ಆರೋಪ ಮಾಡುತ್ತಿದ್ದಾರೆ
ಅಂಬರೀಶ್ ಕಾಲದಲ್ಲಿ ಅಕ್ರಮ ನಡೆದಿದ್ದರೆ ದಾಖಲೆ ಸಮೇತ ದೂರು ನೀಡಲಿ, ಇಷ್ಟು ದಿನ ಸುಮ್ಮನೆ ಇದ್ದಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ.
ಅಂಬರೀಶ್ ಸ್ಮಾರಕ ವಿಚಾರವಾಗಿ ದೊಡ್ಡಣ್ಣ, ಶಿವರಾಮಣ್ಣ ಹೋಗಿದ್ದಾಗ ಇವರು ಮಾತನಾಡಿದ್ದು ಸ್ವಲ್ಪ ನೆನಪು ಮಾಡಿಕೊಳ್ಳಲಿ; ಹಾಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸಹಿ ಹಾಕಿದ್ದು ನನಗೆ ನೆನಪಿದೆ. ಸ್ಮಾರಕ ನಿರ್ಮಾಣ ಅಭಿಮಾನಗಳ ಬೇಡಿಕೆ ಅದಕ್ಕೆ ಅಂದಿನ ಸರ್ಕಾರ ಸ್ಪಂದಿಸಿದ ರೀತಿ ಜನರಿಗೆ ಗೊತ್ತಿದೆ ಎಂದರು.

ಅಂಬರೀಷ್ ಮೃತದೇಹವನ್ನು ಮಂಡ್ಯಕ್ಕೆ ಕೊಂಡೊಯ್ದ ಬಗ್ಗೆ ಎಚ್ ಡಿ ಕುಮಾರಸ್ವಾಮಿ ಹೇಳಿದ್ದೇನು ಎಂಬುದು ಮಾಧ್ಯಮಗಳ ಬಳಿ ವಿಡಿಯೋಯಿದೆ, ಪರಿಶೀಲಿಸಿ ಎಂದ ಸುಮಲತಾ.
ಡೀಲಿಂಗ್ ಮಾಡೋದಕ್ಕೆ ಯಾರನ್ನು ನಾನು ಎಡ ಬಲ ಇಟ್ಟುಕೊಂಡಿಲ್ಲ, ಪಿಎಂಜಿಎಸ್ ವೈ ಅನುಷ್ಠಾನಗೊಳಿಸುವುದು ಸಂಸದರ ಕೆಲಸ, ಈ ಬಗ್ಗೆ ಪ್ರಶ್ನಿಸಿದರೆ ಭ್ರಷ್ಟಾಚಾರ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಉಲ್ಟಾ ಛೋರ್ ಕೊತ್ವಾಲ್ ಗೋ ಡಾಟೆ, ಕಳ್ಳನಾದವನು ಪೊಲೀಸರ ವಿರುದ್ಧವೇ ದೂರು ನೀಡುತ್ತಾನೆ ಎಂಬ ಮಾತಿದೆ. ನಾನು ಅಕ್ರಮ ಗಣಿಗಾರಿಕೆ, ಕೆಆರ್ ಎಸ್ ಅಣೆಕಟ್ಟಿಗೆ ಅಪಾಯ ಇರುವ ಬಗ್ಗೆ ಕಳವಳ ವ್ಯಕ್ತ
ಫೋನ್ ಟ್ಯಾಪಿಂಗ್ ಬಗ್ಗೆ ಸೂಕ್ತ ದಾಖಲೆಯಿದೆ. ಯಾವುದೇ ಒತ್ತಡಕ್ಕೆ ಒಳಗಾಗದೆ ತನಿಖೆ ನಡೆಸುತ್ತೇವೆ ಎಂದು ಪೊಲೀಸರ ಅಧಿಕಾರಗಳು ನನ್ನ ಬಳಿ ಹೇಳಿದ್ದಾರೆ. ಶ್ರೀಗಳ ಫೋನ್ ಟ್ಯಾಪ್ ಮಾಡಿದ್ದರು ಎಂದು ಸುಮಲತಾ ಹೇಳಿದರು.
Recommended Video
2+2=4 ಆಗುತ್ತೆ 2+2 = 5 ಆಗಲ್ಲ, ಸುಳ್ಳು ಹೆಚ್ಚು ದಿನ ನಿಲ್ಲಲ್ಲ, ಜನಕ್ಕೆ ಯಾರು ಏನು ಎಂಬುದು ಗೊತ್ತಾಗುತ್ತದೆ. ಬೇನಾಮಿ ಹೆಸರಿನಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಈ ಬಗ್ಗೆ ಸಿಎಂ ಯಡಿಯೂರಪ್ಪರ ಬಳಿ ಮಾತನಾಡುವೆ ಎಂದು ಸುಮಲತಾ ಹೇಳಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications