ಶಾಸಕ ಹ್ಯಾರಿಸ್ ಅವರೇ ನಿಮ್ಮ ಶುಭಾಶಯ ಬೇಕು ಆದರೆ ಹೀಗಲ್ಲ!
ಬೆಂಗಳೂರು, ಜನವರಿ 05 : ಚುನಾವಣೆಗಳೇ ಇರಲಿ ಹಬ್ಬಗಳೇ ಬರಲಿ ರಾಜಕಾರಣಿಗಳ ಫ್ಲೆಕ್ಸ್ ಮತ್ತು ಬ್ಯಾನರ್ ಗಳ ಹಾವಳಿಯಿಂದ ಸಾರ್ವಜನಿಕರಿಗೆ ತೊಂದರೆ ತಪ್ಪಿದ್ದಲ್ಲ.
ರಾಜಧಾನಿ ಬೆಂಗಳೂರಿನಲ್ಲಿ ಬಿಬಿಎಂಪಿ ಫ್ಲೆಕ್ಸ್ ಹಾಗೂ ಬ್ಯಾನರ್ ಗಳ ವಿರುದ್ಧ ಸಮರವನ್ನೇ ಸಾರಿದ್ದರೂ ಈ ಕಾಯಿದೆ ಜನಪ್ರತಿನಿಧಿಗಳಿಗೆ ಅನ್ವಯಿಸುದಿಲ್ಲ ಎಂಬಂತೆ ಭಾಸವಾಗುತ್ತಿದೆ. ಬೆಂಗಳೂರಿನ ಶಾಂತಿನಗರ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಕ್ರಿಸ್ ಮಸ್ ಹಬ್ಬದ ಅಂಗವಾಗಿ ಸಾರ್ವಜನಿಕರಿಗೆ ಶುಭ ಕೋರಲು ಹಾಕಿರುವ ಫ್ಲೆಕ್ಸ್ ಟ್ರಾಫಿಕ್ ಸಿಗ್ನಲ್ ನ್ನು ಮರೆಮಾಚುವಂತೆ ತೂಗು ಹಾಕಲಾಗಿದೆ.
Shantinagar MLA NA Haris's hoarding covering the traffic signal on Mother Teresa road, Yellagondanpalya, Bangalore. Why no action has been taken yet?@naharisblr | @BlrCityPolice | @blrcitytraffic pic.twitter.com/BwIQRne5AC
— Prasad Naik (@naikprasad) January 5, 2018
ಇದರಿಂದ ಮದರ್ ತೆರೆಸಾ ರಸ್ತೆ ಹಾಗೂ ಯಲ್ಲಗೊಂಡನಪಾಳ್ಯದಲ್ಲಿ ಅವೈಜ್ಞಾನಿಕ ಫ್ಲೆಕ್ಸ್ ಗಳಿಂದ ನಿತ್ಯ ಸಂಚರಿಸುವ ಲಕ್ಷಾಂತರ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

ಟ್ರಾಫಿಕ್ ಪೊಲೀಸರಿಗೆ ಸಿಗ್ನಲ್ ನಲ್ಲಿರುವ ಫ್ಲೆಕ್ಸ್ ಕಾಣುತ್ತಿಲ್ಲವೇ?
ಟ್ರಾಫಿಕ್ ಪೊಲೀಸ್ ಠಾಣೆಯಿಂದ ಕೆಲವೇ ಮೀಟರ್ ಅಂತರದಲ್ಲಿರುವ ಈ ಸಿಗ್ನಲ್ ಗೆ ಶಾಸಕರ ಫ್ಲೆಕ್ಸ್ ಅಡ್ಡವಾಗಿದ್ದರೂ ಟ್ರಾಫಿಕ್ ಪೊಲೀಸರು ಈ ಬಗ್ಗೆ ತಲೆಕಡಸಿಕೊಂಡಿಲ್ಲ. ಇದು ಶಾಸಕ ಶಾಸಕ ಹ್ಯಾರಿಸ್ ಗೆ ಸೇತರಿದ ಫ್ಲೆಕ್ಸ್ ಆಗಿರುವುದರಿಂದಲೇ ಟ್ರಾಫಿಕ್ ಪೊಲೀಸರು ಇದನ್ನು ಮುಟ್ಟಲು ಹೆದರುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

ಬಿಬಿಎಂಪಿ ಇಂತಹ ಫ್ಲೆಕ್ಸ್ ಗಳ ವಿರುದ್ಧ ಮತ್ತೆ ಸಮರ ಸಾರುತ್ತಾ?
ಟ್ರಾಫಿಕ್ ಸಿಗ್ನಲ್ ಗೆ ಅಡ್ಡವಾಗಿರುವ ಈ ಫ್ಲೆಕ್ಸ್ ನ್ನು ತೆರವುಗೊಳಿಸುವ ಮೂಲಕ ಮುಂದಾಗಬಹುದಾದ ಅನಾಹುತವನ್ನು ತಪ್ಪಿಸಲು ಇನ್ನುಮುಂದಾದರೂ ಟ್ರಾಫಿಕ್ ಪೊಲೀಸರು ಇಲ್ಲವೇ ಬಿಬಿಎಂಪಿ ಕ್ರಮ ಕೈಗೊಳ್ಳಬೇಕಿದೆ. ಜನಪ್ರತಿನಿಧಿಯಾಗಿರುವ ಎನ್.ಎ. ಹ್ಯಾರಿಸ್ ಕೂಡ ಸಾರ್ವಜನಿಕರ ಕಳಕಳಿಯಿಂದಾದರೂ ಇದನ್ನು ತೆರವುಗೊಳಿಸಲು ಸೂಚನೆ ನೀಡಬೇಕಿದೆ.

ಎನ್.ಎ. ಹ್ಯಾರಿಸ್ ಮೊದಲು ಫ್ಲೆಕ್ಸ್ ಗಳ ತೆರವಿಗೆ ಸೂಚನೆ ನೀಡಿ
ಕ್ರಿಸ್ ಮಸ್ ಹಬ್ಬ ಹಾಗೂ ಹೊಸ ವರ್ಷಾಚರಣೆ ಮುಗಿದು ವಾರಗಳೇ ಕಳೆಯುತ್ತಾ ಬಂದಿದ್ದರೂ ಇನ್ನು ಇಂತಹ ಬ್ಯಾನರ್ ಹಾಗೂ ಫ್ಲೆಕ್ಸ್ ಗಳು ಬೇಕೆ ಎಂಬ ನೈತಿಕ ಪ್ರಶ್ನೆಯನ್ನು ಶಾಸಕ ಹ್ಯಾರಿಸ್ ಕೇಳಿಕೊಳ್ಳಬೇಕಿದೆ. ಈ ಹಿಂದೆ ಲಕ್ಷಾಂತರ ಜನರು ಫ್ಲೆಕ್ಸ್ ನಿಂದ ತೊಂದರೆ ಅನುಭವಿಸಿದ್ದರೂ ಯಾರೂ ಕೂಡ ಧ್ವನಿ ಎತ್ತಿಲ್ಲ.

ಸಾರ್ವಜನಿಕರು ಧ್ವನಿ ಎತ್ತಿಲ್ಲ ಎಂದ ಮಾತ್ರಕ್ಕೆ ನಿಮ್ಮ ನಡೆ ಉಚಿತವೇ:
ಆದರೆ ಸಾರ್ವಜನಿಕರು ಧ್ವನಿ ಎತ್ತಿಲ್ಲ ಎಂದ ಮಾತ್ರಕ್ಕೆ ಶಾಸಕರು ಈ ರೀತಿ ನಡೆದುಕೊಳ್ಳುವುದು ಉಚಿತವೇ ಎಂಬುದನ್ನು ಅವರೇ ಪ್ರಶ್ನಿಸಿಕೊಳ್ಳಬೇಕಿದೆ. ಸದ್ಯಕ್ಕೆ ಸಾರ್ವಜನಿಕರು ಪ್ರಶ್ನಿಸದಿದ್ದರೂ ಸಮಯ ಬಂದಾಗ ಉತ್ತರ ನೀಡುವುದು ಸಾರ್ವಜನಿಕರಿಗೆ ತಿಳಿದ ವಿಷಯವೇ.
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ












Click it and Unblock the Notifications