ಶಾಸಕ ಹ್ಯಾರಿಸ್ ಅವರೇ ನಿಮ್ಮ ಶುಭಾಶಯ ಬೇಕು ಆದರೆ ಹೀಗಲ್ಲ!
ಬೆಂಗಳೂರು, ಜನವರಿ 05 : ಚುನಾವಣೆಗಳೇ ಇರಲಿ ಹಬ್ಬಗಳೇ ಬರಲಿ ರಾಜಕಾರಣಿಗಳ ಫ್ಲೆಕ್ಸ್ ಮತ್ತು ಬ್ಯಾನರ್ ಗಳ ಹಾವಳಿಯಿಂದ ಸಾರ್ವಜನಿಕರಿಗೆ ತೊಂದರೆ ತಪ್ಪಿದ್ದಲ್ಲ.
ರಾಜಧಾನಿ ಬೆಂಗಳೂರಿನಲ್ಲಿ ಬಿಬಿಎಂಪಿ ಫ್ಲೆಕ್ಸ್ ಹಾಗೂ ಬ್ಯಾನರ್ ಗಳ ವಿರುದ್ಧ ಸಮರವನ್ನೇ ಸಾರಿದ್ದರೂ ಈ ಕಾಯಿದೆ ಜನಪ್ರತಿನಿಧಿಗಳಿಗೆ ಅನ್ವಯಿಸುದಿಲ್ಲ ಎಂಬಂತೆ ಭಾಸವಾಗುತ್ತಿದೆ. ಬೆಂಗಳೂರಿನ ಶಾಂತಿನಗರ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಕ್ರಿಸ್ ಮಸ್ ಹಬ್ಬದ ಅಂಗವಾಗಿ ಸಾರ್ವಜನಿಕರಿಗೆ ಶುಭ ಕೋರಲು ಹಾಕಿರುವ ಫ್ಲೆಕ್ಸ್ ಟ್ರಾಫಿಕ್ ಸಿಗ್ನಲ್ ನ್ನು ಮರೆಮಾಚುವಂತೆ ತೂಗು ಹಾಕಲಾಗಿದೆ.
Shantinagar MLA NA Haris's hoarding covering the traffic signal on Mother Teresa road, Yellagondanpalya, Bangalore. Why no action has been taken yet?@naharisblr | @BlrCityPolice | @blrcitytraffic pic.twitter.com/BwIQRne5AC
— Prasad Naik (@naikprasad) January 5, 2018
ಇದರಿಂದ ಮದರ್ ತೆರೆಸಾ ರಸ್ತೆ ಹಾಗೂ ಯಲ್ಲಗೊಂಡನಪಾಳ್ಯದಲ್ಲಿ ಅವೈಜ್ಞಾನಿಕ ಫ್ಲೆಕ್ಸ್ ಗಳಿಂದ ನಿತ್ಯ ಸಂಚರಿಸುವ ಲಕ್ಷಾಂತರ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

ಟ್ರಾಫಿಕ್ ಪೊಲೀಸರಿಗೆ ಸಿಗ್ನಲ್ ನಲ್ಲಿರುವ ಫ್ಲೆಕ್ಸ್ ಕಾಣುತ್ತಿಲ್ಲವೇ?
ಟ್ರಾಫಿಕ್ ಪೊಲೀಸ್ ಠಾಣೆಯಿಂದ ಕೆಲವೇ ಮೀಟರ್ ಅಂತರದಲ್ಲಿರುವ ಈ ಸಿಗ್ನಲ್ ಗೆ ಶಾಸಕರ ಫ್ಲೆಕ್ಸ್ ಅಡ್ಡವಾಗಿದ್ದರೂ ಟ್ರಾಫಿಕ್ ಪೊಲೀಸರು ಈ ಬಗ್ಗೆ ತಲೆಕಡಸಿಕೊಂಡಿಲ್ಲ. ಇದು ಶಾಸಕ ಶಾಸಕ ಹ್ಯಾರಿಸ್ ಗೆ ಸೇತರಿದ ಫ್ಲೆಕ್ಸ್ ಆಗಿರುವುದರಿಂದಲೇ ಟ್ರಾಫಿಕ್ ಪೊಲೀಸರು ಇದನ್ನು ಮುಟ್ಟಲು ಹೆದರುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

ಬಿಬಿಎಂಪಿ ಇಂತಹ ಫ್ಲೆಕ್ಸ್ ಗಳ ವಿರುದ್ಧ ಮತ್ತೆ ಸಮರ ಸಾರುತ್ತಾ?
ಟ್ರಾಫಿಕ್ ಸಿಗ್ನಲ್ ಗೆ ಅಡ್ಡವಾಗಿರುವ ಈ ಫ್ಲೆಕ್ಸ್ ನ್ನು ತೆರವುಗೊಳಿಸುವ ಮೂಲಕ ಮುಂದಾಗಬಹುದಾದ ಅನಾಹುತವನ್ನು ತಪ್ಪಿಸಲು ಇನ್ನುಮುಂದಾದರೂ ಟ್ರಾಫಿಕ್ ಪೊಲೀಸರು ಇಲ್ಲವೇ ಬಿಬಿಎಂಪಿ ಕ್ರಮ ಕೈಗೊಳ್ಳಬೇಕಿದೆ. ಜನಪ್ರತಿನಿಧಿಯಾಗಿರುವ ಎನ್.ಎ. ಹ್ಯಾರಿಸ್ ಕೂಡ ಸಾರ್ವಜನಿಕರ ಕಳಕಳಿಯಿಂದಾದರೂ ಇದನ್ನು ತೆರವುಗೊಳಿಸಲು ಸೂಚನೆ ನೀಡಬೇಕಿದೆ.

ಎನ್.ಎ. ಹ್ಯಾರಿಸ್ ಮೊದಲು ಫ್ಲೆಕ್ಸ್ ಗಳ ತೆರವಿಗೆ ಸೂಚನೆ ನೀಡಿ
ಕ್ರಿಸ್ ಮಸ್ ಹಬ್ಬ ಹಾಗೂ ಹೊಸ ವರ್ಷಾಚರಣೆ ಮುಗಿದು ವಾರಗಳೇ ಕಳೆಯುತ್ತಾ ಬಂದಿದ್ದರೂ ಇನ್ನು ಇಂತಹ ಬ್ಯಾನರ್ ಹಾಗೂ ಫ್ಲೆಕ್ಸ್ ಗಳು ಬೇಕೆ ಎಂಬ ನೈತಿಕ ಪ್ರಶ್ನೆಯನ್ನು ಶಾಸಕ ಹ್ಯಾರಿಸ್ ಕೇಳಿಕೊಳ್ಳಬೇಕಿದೆ. ಈ ಹಿಂದೆ ಲಕ್ಷಾಂತರ ಜನರು ಫ್ಲೆಕ್ಸ್ ನಿಂದ ತೊಂದರೆ ಅನುಭವಿಸಿದ್ದರೂ ಯಾರೂ ಕೂಡ ಧ್ವನಿ ಎತ್ತಿಲ್ಲ.

ಸಾರ್ವಜನಿಕರು ಧ್ವನಿ ಎತ್ತಿಲ್ಲ ಎಂದ ಮಾತ್ರಕ್ಕೆ ನಿಮ್ಮ ನಡೆ ಉಚಿತವೇ:
ಆದರೆ ಸಾರ್ವಜನಿಕರು ಧ್ವನಿ ಎತ್ತಿಲ್ಲ ಎಂದ ಮಾತ್ರಕ್ಕೆ ಶಾಸಕರು ಈ ರೀತಿ ನಡೆದುಕೊಳ್ಳುವುದು ಉಚಿತವೇ ಎಂಬುದನ್ನು ಅವರೇ ಪ್ರಶ್ನಿಸಿಕೊಳ್ಳಬೇಕಿದೆ. ಸದ್ಯಕ್ಕೆ ಸಾರ್ವಜನಿಕರು ಪ್ರಶ್ನಿಸದಿದ್ದರೂ ಸಮಯ ಬಂದಾಗ ಉತ್ತರ ನೀಡುವುದು ಸಾರ್ವಜನಿಕರಿಗೆ ತಿಳಿದ ವಿಷಯವೇ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications