ವಿಶ್ವ ಹೃದಯ ದಿನದಂದು ವಿಶಿಷ್ಟ ಆಚರಣೆ ಮೈಸೂರು ವ್ಯಕ್ತಿಗೆ ಹೃದಯಕಸಿ
ಬೆಂಗಳೂರು, ಸೆಪ್ಟೆಂಬರ್, 30: ಎಮ್. ಎಸ್. ರಾಮಯ್ಯದಲ್ಲಿರುವ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ 40 ವರ್ಷದ ವ್ಯಕ್ತಿಗೆ ಯಶಸ್ವಿ ಹೃದಯಕಸಿ ಮಾಡುವ ಮೂಲಕ ವಿಶ್ವ ಹೃದಯ ದಿನವನ್ನು ಆಚರಿಸಲಾಯಿತು. ಮೂಲತಃ ಮೈಸೂರಿನವರಾದ 40 ವರ್ಷದ ವ್ಯಕ್ತಿ, ನಗರದಲ್ಲಿರುವ ಎಮ್. ಎಸ್. ರಾಮಯ್ಯದಲ್ಲಿರುವ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಹೃದಯಬೇನೆ ತೊಂದರೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇವರಿಗೆ ಇಸೆಮಿಕ್ ಡಿಲೆಟೆಡ್ ಕಾರ್ಡಿಯೊಮಯೋಪತಿ ಎಂಬ ತೀವ್ರ ಹೃದಯ ಕಾಯಿಲೆ ಇತ್ತು.
ಇವರಿಗೆ ಸಂರ್ಪೂಣ ಮೌಲ್ಯಮಾಪನ ಮಾಡಿದ ವೈದ್ಯರ ತಂಡ, ಇವರನ್ನು ಹೃದಯಕಸಿಗೆ ಒಳಗಾಗುವಂತೆ ಸೂಚಿಸಿದರು. ರೋಗಿಯು, ನಾಲ್ಕು ತಿಂಗಳ ಹಿಂದೆಯೆ ಹೊಂದಾಣಿಕೆಯಾಗುವ ಹೃದಯಕ್ಕಾಗಿ ನೊಂದಾಯಿಸಿಕೊಂಡಿದ್ದರು. 26 ವರ್ಷದ ಯುವಕನ ಹೃದಯವನ್ನು, ಮೈಸೂರು ನಗರ ನಿವಾಸಿಯಾದ 40 ವರ್ಷದ ವ್ಯಕ್ತಿಗೆ ಹೃದಯನ್ನು ಕಸಿ ಮಾಡಲಾಗಿದೆ.
ದಾನಿಯು 26 ವರ್ಷದ ಯುವಕನಾಗಿದ್ದು, ರಸ್ತೆ ಅಪಘಾತದಲ್ಲಿ ತಲೆಗೆ ಗಾಯಗೊಂಡು ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ, ಯುವಕನ ಮಿದುಳು ನಿಷ್ಕ್ರಿಯಗೊಂಡಿತು. ತದನಂತರ ಆಸ್ಪತ್ರೆಯ ವೈದ್ಯರು ಅಂಗಾಂಗದಾನಕ್ಕೆ ಯುವಕನ ಪೋಷಕರ ಮನವೊಲಿಸಿದರು. ಅಂಗಾಂಗ ದಾನಕ್ಕೆ ಮನೆಯವರು ಒಪ್ಪಿಗೆ ಸೂಚಿಸಿದ್ದರು.

ನಂತರ ಅವರ ಹೃದಯವನ್ನು ಸಂಗ್ರಹಿಸಿ ಬೆಂಗಳೂರಿನ ಎಮ್. ಎಸ್. ರಾಮಯ್ಯದಲ್ಲಿರುವ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಇಸೆಮಿಕ್ ಡಿಲೆಟೆಡ್ ಕಾರ್ಡಿಯೊಮಯೋಪತಿ ಎಂಬ ತೀವ್ರ ಹೃದಯ ಕಾಯಿಲೆಯಿಂದ ಬಳಲುತ್ತಿದ್ದ 40 ವರ್ಷದ ವ್ಯಕ್ತಿಗೆ ಕಸಿ ಮಾಡಲಾಗಿದೆ. ಹೃದಯವನ್ನು ಭಾನುವಾರ ಬೆಳಗಿನ ಜಾವ 2:00 ಗಂಟೆ ಸಮಯದಲ್ಲಿ ನಾರಾಯಣ ಹಾರ್ಟ್ ಸೆಂಟರ್ ಗೆ ರವಾನಿಸಲಾಯಿತು.

ಹೃದಯ ಕಸಿಯನ್ನು ಎಮ್. ಎಸ್. ರಾಮಯ್ಯದಲ್ಲಿರುವ ನಾರಾಯಣ ಹಾರ್ಟ್ ಸೆಂಟರ್ ನ ವೈದ್ಯರಾದ ಡಾ. ರವಿ ಶಂಕರ್ ಶೆಟ್ಟಿ, ಹಿರಿಯ ಕಾರ್ಡಿಯೋವ್ಯಾಸ್ಕುಲರ್ ಹಾಗು ಹೃದಯ ಕಸಿ ಶಸ್ತ್ರಚಿಕಿತ್ಸಕರು, ಯು. ಎಮ್. ನಾಗಮಲ್ಲೇಷ್ , ಹಿರಿಯ ಕಂಸಲ್ಟಂಟ್, ಹಾರ್ಟ್ ಫೇಲ್ಯೂರ್ ಹಾಗು ಹೃದಯ ಕಸಿ ವಿಭಾಗ, ನಾರಾಯಣ ಹೆಲ್ತ್ ಸಿಟಿಯ ಹಿರಿಯ ಕಾರ್ಡಿಯೋತೋರಾಸಿಕ್ ಕಸಿ ಶಸ್ತ್ರಚಿಕಿತ್ಸಕರಾದ ಡಾ. ವರುಣ್ ಶೆಟ್ಟಿ, ಡಾ. ಪ್ರಶಾಂತ್ ರಾಮಮೂರ್ತಿ, ಎಮ್. ಎಸ್. ರಾಮಯ್ಯದಲ್ಲಿರುವ ನಾರಾಯಣ ಹಾರ್ಟ್ ಸೆಂಟರ್ನ ಅರಿವಳಿಕೆ ತಜ್ಞರು, ಮತ್ತು ಡಾ. ಗುರು ಪೋಲಿಸ್ ಪಾಟಿಲ್ ತಂಡ ಯಶಸ್ವಿಯಾಗಿ ನೆರವೇರಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications