IMA ಜ್ಯುವೆಲ್ಲರಿ ಮಾಲೀಕ ಮನ್ಸೂರ್ ಖಾನ್ ನಾಪತ್ತೆ; 400 ಕೋಟಿ ಕಥೆ ಏನಂತೆ?
ಬೆಂಗಳೂರು, ಜೂನ್ 10: ಹೆಸರಾಂತ ಆಭರಣ ಮಳಿಗೆ ಮಾಲೀಕ ಮೊಹ್ಮದ್ ಮನ್ಸೂರ್ ಖಾನ್ ನಾಪತ್ತೆಯಾಗಿದ್ದು, ಸೋಮವಾರ ಮಳಿಗೆಯ ಎರಡು ಶಾಖೆಗಳಿರುವ ಜಯನಗರ ಮತ್ತು ಶಿವಾಜಿನಗರದಲ್ಲಿ ಹೂಡಿಕೆ ಮಾಡಿರುವವರು ಆತಂಕ ಎದುರಿಸುತ್ತಿದ್ದಾರೆ. ಮನ್ಸೂರ್ ಖಾನ್ ನದು ಎನ್ನಲಾದ ಆಡಿಯೋವೊಂದರಲ್ಲಿ ಆತ ತನ್ನ ಸ್ಥಿತಿಯ ಬಗ್ಗೆ ಮಾತನಾಡಿದ್ದಾನೆ.
ಈ ಆಡಿಯೋ ಕೇಳುವ ಹೊತ್ತಿಗೆ ನಾನು ಈ ಜಗತ್ತಿನಲ್ಲಿ ಇರುವುದಿಲ್ಲ ಎಂದಿರುವ ಖಾನ್, ಶಿವಾಜಿನಗರದ ಸ್ಥಳೀಯ ಶಾಸಕರು ನಾನೂರು ಕೋಟಿ ರುಪಾಯಿ ನನಗೆ ನೀಡಬೇಕು. ಜತೆಗೆ ಮೂವತ್ತಾಮೂರು ಸಾವಿರ ಕ್ಯಾರೆಟ್ ವಜ್ರ, ಚಿನ್ನಾಭರಣ ಇದೆ. ಅವುಗಳನ್ನೆಲ್ಲ ಮಾರಿ, ಹೂಡಿಕೆದಾರರ ಹಣವನ್ನು ಹಿಂತಿರುಗಿಸುವಂತೆ ಹೇಳಿದ್ದಾನೆ.
ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದ್ದುದರಿಂದ ಬೆಂಗಳೂರಿನ ಬಳಿಯ ಹಳ್ಳಿಯೊಂದರಲ್ಲಿ ಇರಿಸಬೇಕಾಯಿತು. ನಾನು ಹಣವನ್ನೂ ಕೊಟ್ಟು, ರೌಡಿಗಳಿಂದ ಜೀವ ಬೆದರಿಕೆಯನ್ನೂ ಅನುಭವಿಸಬೇಕಾಯಿತು. ಬಿಡಿಎನ ಕುಮಾರ್ ಎಂಬಾತನಿಗೆ ಐದು ಕೋಟಿ ರುಪಾಯಿ ನೀಡಿದ್ದೇನೆ ಎಂದು ಖಾನ್ ಆಡಿಯೋದಲ್ಲಿ ತಿಳಿಸಿದ್ದಾನೆ.

ಪ್ರಮುಖ ರಾಜಕಾರಣಿಯೊಬ್ಬರ ವಿರುದ್ಧ ಗಂಭೀರವಾದ ಆರೋಪ ಮಾಡಿರುವ ಅವರು, ಹಲವು ರಾಜಕೀಯ ಮುಖಂಡರು, ಸರಕಾರ ಅಧಿಕಾರಿಗಳು ಹೀಗೆ ವಿವಿಧ ಸ್ತರದಲ್ಲಿ ಇರುವವರು ಯಾರೂ ಸರಿಯಿಲ್ಲ ಎಂದು ಹೇಳಿದ್ದಾರೆ. ಇನ್ನು ಹೂಡಿಕೆದಾರರು ದೂರು ನೀಡಿದರೆ ತನಿಖೆ ನಡೆಸುವುದಾಗಿ ಪೂರ್ವವಿಭಾಗದ ಡಿಸಿಪಿ ರಾಹುಲ್ ಕುಮಾರ್ ತಿಳಿಸಿದ್ದಾರೆ.
ಎರಡು-ಮೂರು ದಿನದಿಂದ ಮನ್ಸೂರ್ ಖಾನ್ ಮೊಬೈಲ್ ಫೋನ್ ಸ್ವಿಚ್ಛ್ ಆಫ್ ಆಗಿದ್ದು, ಆತ ಆಡಿಯೋದಲ್ಲಿ ಹೇಳಿರುವಂತೆ ಆತ್ಮಹತ್ಯೆ ಮಾಡಿಕೊಂಡಿದ್ದಾನೋ ಅಥವಾ ರಾಜ್ಯ- ದೇಶ ಬಿಟ್ಟೇ ಪರಾರಿ ಆಗಿದ್ದಾನೋ ಎಂಬುದು ತಿಳಿದುಬರಬೇಕಿದೆ. ಸದ್ಯಕ್ಕೆ ದೇಶದ ಎಲ್ಲ ಪ್ರಮುಖ ಬಂದರು, ಏರ್ ಪೋರ್ಟ್ ಗಳಲ್ಲಿ ಲುಕ್ ಔಟ್ ನೋಟಿಸ್ ನೀಡಲಾಗಿದೆ.
ಈ ಮಧ್ಯೆ, ಅಧಿಕಾರಿಗಳು ಹಾಗೂ ರಾಜಕಾರಣಿಗಳಿಗೆ ಲಂಚ ಕೊಟ್ಟು ಸಾಕಾಗಿದೆ ಎಂದು ಆಡಿಯೋದಲ್ಲಿ ಅಲವತ್ತುಕೊಂಡಿರುವ ಮನ್ಸೂರ್ ಖಾನ್, ನನ್ನ ಆಸ್ತಿ ಮಾರಿ, ಹೂಡಿಕೆದಾರರ ಹಣವನ್ನು ಹಿಂತಿರುಗಿಸುವಂತೆ ಹೇಳಿದ್ದಾನೆ. ಪೊಲೀಸರು ಆತನ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
-
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral












Click it and Unblock the Notifications