ಸ್ವಾಮಿ ಖಾತೆಯಿಂದ ಕೋಟಿ ವರ್ಗಾವಣೆ: ನಟಿ ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ನೋಟಿಸ್
ಬೆಂಗಳೂರು, ಜನವರಿ 07: ನಕಲಿ ಅರ್ ಎಸ್ ಎಸ್ ನಾಯಕ ಸ್ವಾಮಿ ಅಲಿಯಾಸ್ ಯುವರಾಜ್ ಖಾತೆಯಿಂದ ಕೋಟ್ಯಂತರ ರೂಪಾಯಿ ವರ್ಗಾವಣೆ ಆಗಿರುವ ಪ್ರಕರಣ ಸಂಬಂಧ ನಟಿ ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ತನಿಖೆ ಕಂಟಕ ಎದುರಾಗಿದೆ.
ಸ್ವಾಮಿ ಖಾತೆಯಿಂದ ಹಣ ವರ್ಗಾವಣೆ ಪ್ರಕರಣ ವಿಚಾರಣೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಶುಕ್ರವಾರ ಬೆಳಗ್ಗೆ ವಿಚಾರಣೆಗೆ ಹಾಜರಾಗಲು ಸೂಚಿಸಿ ರಾಧಿಕಾ ಕುಮಾರಸ್ವಾಮಿಗೆ ನೋಟಿಸ್ ನೀಡಿದ್ದಾರೆ. ರಾಧಿಕಾ ಕುಮಾರಸ್ವಾಮಿಗೆ ನೋಟಿಸ್ ನೀಡಿರುವುದನ್ನು ಖಚಿತ ಪಡಿಸಿದ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ , ನಾಳೆ ಬೆಳಗ್ಗೆ ಹನ್ನೊಂದು ಗಂಟೆಗೆ ಸಿಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಉದ್ಯಮಿಗಳಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣದಲ್ಲಿ ನಕಲಿ ಅರ್ ಎಸ್ ಎಸ್ ನಾಯಕ ಸ್ವಾಮಿ ಅಲಿಯಾಸ್ ಯುವರಾಜ್ ಬಂಧನಕ್ಕೆ ಒಳಗಾಗಿದ್ದ. ಬಂಧನ ಬಳಿಕ ಆತನ ವಿರುದ್ಧ ಎಂಟು ದೂರು ಬಂದಿದ್ದವು. ಹೆಚ್ಚಿನ ತನಿಖೆ ನಡೆಸಿದಾಗ ನಟಿ ರಾಧಿಕಾ ಕುಮಾರಸ್ವಾಮಿ ಹಾಗೂ ಅವರ ಸಹೋದರ ರವಿರಾಜ್ ಬ್ಯಾಂಕ್ ಖಾತೆಗೆ ಕೋಟ್ಯಂತರ ರೂಪಾಯಿ ವರ್ಗಾವಣೆ ಆಗಿರುವ ಅಂಶ ಬೆಳಕಿಗೆ ಬಂದಿತ್ತು. ರವಿರಾಜ್ ಅವರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ ಬಳಿಕ ರಾಧಿಕಾ ಕುಮಾರಸ್ವಾಮಿಯ ಹೆಸರು ಬಹಿರಂಗವಾಗಿತ್ತು.

ಇದು ಸುದ್ದಿಯಾಗುತ್ತಿದ್ದಂತೆ ರಾಧಿಕಾ ಕುಮಾರಸ್ವಾಮಿ ತುರ್ತು ಸುದ್ದಿಗೋಷ್ಠಿ ಕರೆದು ಸ್ಪಷ್ಟನೆ ನೀಡಿದ್ದರು. ಜ್ಯೋತಿಷಿಯಾಗಿ ಸ್ವಾಮಿ ನಮ್ಮ ಕುಟುಂಬಕ್ಕೆ ಪರಿಚಯ. ನಾಟ್ಯರಾಣಿ ಸಿನಿಮಾ ನಿರ್ಮಾಣಕ್ಕಾಗಿ ನಾನು ಅವರ ಬಳಿ ಪ್ರಸ್ತಾಪಿಸಿದ್ದೆ. ಹೀಗಾಗಿ ಅವರು ನನ್ನ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ವರ್ಗಾವಣೆ ಮಾಡಿದ್ದು ಯಾರು ಎಂದು ಪರಿಶೀಲಿಸಲು ಹೋಗಿಲ್ಲ ಎಂದು ಸ್ಪಷ್ಡಪಡಿಸಿದ್ದರು. ಇದಾದ ಬೆನ್ನಲ್ಲೇ ಸಿಸಿಬಿ ಪೊಲೀಸರು ವಿಚಾರಣೆಗೆ ಹಾಜರಾಗಲು ಸೂಚಿಸಿ ನೋಟಿಸ್ ನೀಡಿದ್ದಾರೆ.
ಕಷ್ಟ ಕಷ್ಟ: ರಾಧಿಕಾ ಕುಮಾರಸ್ವಾಮಿ ಸ್ವಾಮಿ ಜತೆಗೂಡಿ ಯಾವುದಾದರೂ ಡೀಲಿಂಗ್ ಮಾಡಿದ್ದರಾ ? ಇಲ್ಲವೇ ನಿಜವಾಗಿಯೂ ಸಿನಿಮಾ ನಿರ್ಮಾಣಕ್ಕೆ ಸಾಲ ಪಡೆದಿದ್ದರಾ ಎಂಬುದನ್ನು ಸಾಕ್ಷಿ ಸಮೇತ ರಾಧಿಕ ಸ್ಪಷ್ಟನೆ ನೀಡಬೇಕಾಗುತ್ತದೆ. ಸ್ವಾಮಿ ಖಾತೆಯಿಂದ ಅಷ್ಡು ದೊಡ್ಡ ಮೊತ್ತ ಪಡೆದಿರುವ ಬಗ್ಗೆ ಯಾವುದಾದರೂ ಕರಾರು ಮಾಡಿಕೊಂಡಿದ್ದಲ್ಲಿ ಬಚಾವ್ ಆಗಲಿದ್ದಾರೆ. ಇಲ್ಲದಿದ್ದಲ್ಲಿ ರಾಧಿಕಾ ಅವರಿಗೆ ಕಷ್ಡ ಎದುರಾಗಲಿದೆ.
ನಕಲಿರಾಜನ ಬ್ಯಾಂಕ್ ಖಾತೆಯಿಂದ ನಟಿ ರಾಧಿಕಾ ಖಾತೆಗೆ ಕೋಟಿ ರೂ. ವರ್ಗ
ರಾಧಿಕಾ ಕುಮಾರಸ್ವಾಮಿ ಸುದ್ದಿಗೋಷ್ಢಿ ವೇಳೆ ನನ್ನ ಖಾತೆಗೆ ಯಾರಿಂದ ಹಣ. ಬಂದಿದೆಯೋ ಪರಿಶೀಲಿಸೋಕೆ ಹೋಗಿಲ್ಲ. ಸ್ವಾಮಿ ಅವರ ಅಣ್ಣನ ಖಾತೆಯಿಂದ ಬರಲಿದೆ ಎಂದು ಅವರು ಹೇಳಿದ್ದರು. ಆದರೆ ಈ ಹೇಳಿಕೆಯನ್ನು ಸಿಸಿಬಿ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಬ್ಯಾಂಕ್ ಖಾತೆಗೆ ಕೋಟ್ಯಂತರ ರೂಪಾಯಿ ಬಂದರೆ ಅದರ ಬಗ್ಗೆ ಯಾರು ತಾನೇ ಪರಿಶೀಲಿಸುವುದಿಲ್ಲ ? ರಾಧಿಕಾ ಒಬ್ಬ ನಟಿ. ಅಷ್ಟು ಮೊತ್ತ ಹಣ ಬ್ಯಾಂಕ್ ಖಾತೆಗೆ ಬಂದಾಗ ಯಾಕೆ ಪರಿಶೀಲಿಸಿಲ್ಲ ಎಂಬ ಪ್ರಶ್ನೆ ಉದ್ಭವಿಸಿದೆ. ಇನ್ನು ಸ್ವಾಮಿ ಬಂಧನವಾದ ಕೂಡಲೇ ಅವರ ಖಾತೆಯಿಂದ ಹಣ ಬಂದಿರುವ ಬಗ್ಗೆ ರಾಧಿಕಾ ಮೊದಲೇ ಸಿಸಿಬಿ ಪೊಲೀಸರಿಗೆ ನೀಡಬಹುದಿತ್ತಾದರೂ ಇಷ್ಡು ದಿನ ಯಾಕೆ ಸುಮ್ಮನಿದ್ದರು ಎಂಬ ಪ್ರಶ್ನೆ ಕಾಡುತ್ತಿದೆ.
ಇನ್ನು ವಿಚಾರಣೆ ವೇಳೆ ರಾಧಿಕಾ ನೀಡುವ ಹೇಳಿಕೆಯನ್ನು ಪೊಲೀಸರು ಗುಪ್ತವಾಗಿ ಇಟ್ಟುಕೊಳ್ಳಲಿದ್ದಾರೆ. ರಾಧಿಕಾ ಅವರ ಖಾತೆಗೆ ಹಣ ವರ್ಗಾವಣೆ ಮಾಡಿದ ಬಗ್ಗೆ ಸ್ವಾಮಿಯನ್ನು ವಿಚಾರಣೆ ನಡೆಸಲಿದ್ದಾರೆ. ಇಬ್ಬರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡು ಬಂದರೆ ರಾಧಿಕಾ ಕುಮಾರಸ್ವಾಮಿಗೆ ಸಂಕಷ್ಡ ಎದುರಾಗಲಿದೆ.
ಮಾತ್ರವಲ್ಲ ಸ್ವಾಮಿ ಖಾತೆಯಿಂದ ಇನ್ನೂ ಯಾರ್ಯಾರಿಗೆ ಹಣ ವರ್ಗಾವಣೆ ಆಗಿದೆಯೋ ಅವರೆಲ್ಲರಿಗೂ ಕಂಟಕ ಎದುರಾಗಲಿದೆ. ಸದ್ಯ ಮೊದಲ ಹಂತದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ವಿಚಾರಣೆ ನಡೆಯುತ್ತಿದ್ದು ಭಾರೀ ಕುತೂಹಲ ಕೆರಳಿಸಿದೆ.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications