ನಿರ್ಮಾಣ ಹಂತದ ಕಟ್ಟಡ ಕುಸಿತ, 3 ಸಾವು, 11 ಕಾರ್ಮಿಕರ ರಕ್ಷಣೆ
Recommended Video

ಬೆಂಗಳೂರು, ಫೆಬ್ರವರಿ 15: ನಗರದ ಸರ್ಜಾಪುರ ರಸ್ತೆಯ ಕಸವನಹಳ್ಳಿಯಲ್ಲಿ ನಿರ್ಮಾಣ ಹಂತದ 5 ಅಂತಸ್ತಿನ ಕಟ್ಟಡ ಕುಸಿದು ಮೂವರು ಕಾರ್ಮಿಕ ಸಾವನ್ನಪ್ಪಿದ್ದು ಕನಿಷ್ಟ 20 ಜನ ಕಾರ್ಮಿಕರು ಕಟ್ಟಡದ ಅವಶೇಷದ ಅಡಿ ಸಿಲುಕಿದ್ದಾರೆ.
ಮೃತ ಕಾರ್ಮಿಕರನ್ನು ಮೊಹರಮ್, ರಾಜು, ಮದೀನಾ ಎಂದು ಗುರುತಿಸಲಾಗಿದ್ದು, ಇವರ ಸ್ಥಳದ ಮಾಹಿತಿ ಇನ್ನೂ ತಿಳಿದು ಬಂದಿಲ್ಲ. ಹೆಚ್ಚಿನ ಕಾರ್ಮಿಕರು ಉತ್ತರ ಕರ್ನಾಟಕ ಹಾಗೂ ಬಿಹಾರ ಮೂಲದವರು ಎನ್ನಲಾಗಿದೆ.
ಕಟ್ಟಡದ ಒಳಗೆ ಸುಮಾರು 25 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗುತ್ತಿದ್ದು, 8 ಜನ ಕಾರ್ಮಿಕರನ್ನು ಈಗಾಗಲೇ ಸ್ಥಳೀಯರು ರಕ್ಷಿಸಿದ್ದಾರೆ. ಇನ್ನೂ ಸಾಕಷ್ಟು ಜನ ಕಾರ್ಮಿಕರು ಅವಶೇಷದ ಅಡಿ ಸಿಲುಕಿದ್ದಾರೆ, ಸಾವು ನೋವು ಆಗಿರ ಬಹುದು ಎಂಬ ಅನುಮಾನ ವ್ಯಕ್ತಪಡಿಸಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಧಾವಿಸಿದ್ದು, ಸ್ಥಳೀಯರ ಸಹಾಯದೊಂದಿಗೆ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸುವ ಕಾರ್ಯ ಮಾಡುತ್ತಿದ್ದಾರೆ. ರಕ್ಷಿಸಲ್ಪಟ್ಟ ಕಾರ್ಮಿಕರನ್ನು ಸೇಂಟ್ ಜೋನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಫೀಕ್ ಎನ್ನುವವರಿಗೆ ಈ ಸೇರಿದ ಕಟ್ಟಡ ಇದಾಗಿದ್ದು, ಆಂಧ್ರ ಮೂಲದ ಕೃಷ್ಣಾರೆಡ್ಡಿ ಎಂಬುವರ ಮೇಲುಸ್ತುವಾರಿಯಲ್ಲಿ ಕಟ್ಟಡ ಕಾಮಗಾರಿ ನಡೆಯುತಿತ್ತು. ವಸತಿ ಉದ್ದೇಶಕ್ಕಾಗಿ ಈ ಬಹುಮಹಡಿಯನ್ನು ನಿರ್ಮಾಣ ಮಾಡಲಾಗುತಿತ್ತು.

ಸ್ಥಳಕ್ಕೆ ಬಿಬಿಎಂಪಿ ಮೇಯರ್ ಸಂಪತ್ರಾಜ್ ಭೇಟಿ ನೀಡಿದ್ದು, ಅಗ್ನಿಶಾಮಕ ದಳದ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಎಲ್ಲ ವ್ಯಕ್ತಿಗಳ ಆಸ್ಪತ್ರೆಯ ಖರ್ಚು ಭರಿಸುವುದಾಗಿ ಹೇಳಿರುವ ಅವರು, ಮೃತರ ಕುಟುಂಬಕ್ಕೆ ಪರಿಹಾರವನ್ನೂ ಘೋಷಿಸಿಸುವುದಾಗಿ ಭರವಸೆ ನೀಡಿದ್ದಾರೆ.
ಕಟ್ಟಡ ಕುಸಿಯಲು ಕಳಪೆ ಕಾಮಗಾರಿಯೇ ಕಾರಣ ಎನ್ನಲಾಗುತ್ತಿದ್ದು, ಕಟ್ಟಡದ ಎಂಜಿನಿಯರ್ ಮತ್ತು ಮಾಲೀಕರ ಮೇಲೆ ಪೊಲೀಸರು ದೂರು ದಾಖಲಿಸಲಿದ್ದಾರೆ.
-
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications