ನಿರ್ಮಾಣ ಹಂತದ ಕಟ್ಟಡ ಕುಸಿತ, 3 ಸಾವು, 11 ಕಾರ್ಮಿಕರ ರಕ್ಷಣೆ
Recommended Video
ಬೆಂಗಳೂರು, ಫೆಬ್ರವರಿ 15: ನಗರದ ಸರ್ಜಾಪುರ ರಸ್ತೆಯ ಕಸವನಹಳ್ಳಿಯಲ್ಲಿ ನಿರ್ಮಾಣ ಹಂತದ 5 ಅಂತಸ್ತಿನ ಕಟ್ಟಡ ಕುಸಿದು ಮೂವರು ಕಾರ್ಮಿಕ ಸಾವನ್ನಪ್ಪಿದ್ದು ಕನಿಷ್ಟ 20 ಜನ ಕಾರ್ಮಿಕರು ಕಟ್ಟಡದ ಅವಶೇಷದ ಅಡಿ ಸಿಲುಕಿದ್ದಾರೆ.
ಮೃತ ಕಾರ್ಮಿಕರನ್ನು ಮೊಹರಮ್, ರಾಜು, ಮದೀನಾ ಎಂದು ಗುರುತಿಸಲಾಗಿದ್ದು, ಇವರ ಸ್ಥಳದ ಮಾಹಿತಿ ಇನ್ನೂ ತಿಳಿದು ಬಂದಿಲ್ಲ. ಹೆಚ್ಚಿನ ಕಾರ್ಮಿಕರು ಉತ್ತರ ಕರ್ನಾಟಕ ಹಾಗೂ ಬಿಹಾರ ಮೂಲದವರು ಎನ್ನಲಾಗಿದೆ.
ಕಟ್ಟಡ ಕುಸಿತ ತನಿಖೆಗೆ ತಂಡ, ಮೃತರ ಕುಟುಂಬಕ್ಕೆ ರು.5 ಲಕ್ಷ: ಜಾರ್ಜ್
ಕಟ್ಟಡದ ಒಳಗೆ ಸುಮಾರು 25 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗುತ್ತಿದ್ದು, 8 ಜನ ಕಾರ್ಮಿಕರನ್ನು ಈಗಾಗಲೇ ಸ್ಥಳೀಯರು ರಕ್ಷಿಸಿದ್ದಾರೆ. ಇನ್ನೂ ಸಾಕಷ್ಟು ಜನ ಕಾರ್ಮಿಕರು ಅವಶೇಷದ ಅಡಿ ಸಿಲುಕಿದ್ದಾರೆ, ಸಾವು ನೋವು ಆಗಿರ ಬಹುದು ಎಂಬ ಅನುಮಾನ ವ್ಯಕ್ತಪಡಿಸಲಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಧಾವಿಸಿದ್ದು, ಸ್ಥಳೀಯರ ಸಹಾಯದೊಂದಿಗೆ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸುವ ಕಾರ್ಯ ಮಾಡುತ್ತಿದ್ದಾರೆ. ರಕ್ಷಿಸಲ್ಪಟ್ಟ ಕಾರ್ಮಿಕರನ್ನು ಸೇಂಟ್ ಜೋನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಫೀಕ್ ಎನ್ನುವವರಿಗೆ ಈ ಸೇರಿದ ಕಟ್ಟಡ ಇದಾಗಿದ್ದು, ಆಂಧ್ರ ಮೂಲದ ಕೃಷ್ಣಾರೆಡ್ಡಿ ಎಂಬುವರ ಮೇಲುಸ್ತುವಾರಿಯಲ್ಲಿ ಕಟ್ಟಡ ಕಾಮಗಾರಿ ನಡೆಯುತಿತ್ತು. ವಸತಿ ಉದ್ದೇಶಕ್ಕಾಗಿ ಈ ಬಹುಮಹಡಿಯನ್ನು ನಿರ್ಮಾಣ ಮಾಡಲಾಗುತಿತ್ತು.
ಸ್ಥಳಕ್ಕೆ ಬಿಬಿಎಂಪಿ ಮೇಯರ್ ಸಂಪತ್ರಾಜ್ ಭೇಟಿ ನೀಡಿದ್ದು, ಅಗ್ನಿಶಾಮಕ ದಳದ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಎಲ್ಲ ವ್ಯಕ್ತಿಗಳ ಆಸ್ಪತ್ರೆಯ ಖರ್ಚು ಭರಿಸುವುದಾಗಿ ಹೇಳಿರುವ ಅವರು, ಮೃತರ ಕುಟುಂಬಕ್ಕೆ ಪರಿಹಾರವನ್ನೂ ಘೋಷಿಸಿಸುವುದಾಗಿ ಭರವಸೆ ನೀಡಿದ್ದಾರೆ.
ಕಟ್ಟಡ ಕುಸಿಯಲು ಕಳಪೆ ಕಾಮಗಾರಿಯೇ ಕಾರಣ ಎನ್ನಲಾಗುತ್ತಿದ್ದು, ಕಟ್ಟಡದ ಎಂಜಿನಿಯರ್ ಮತ್ತು ಮಾಲೀಕರ ಮೇಲೆ ಪೊಲೀಸರು ದೂರು ದಾಖಲಿಸಲಿದ್ದಾರೆ.