KIAL: ಹೊರ ರಾಜ್ಯದ ವಾಹನಗಳಿಗೆ ಸೂಪರ್ ಫಾಸ್ಟ್ ಎಂಟ್ರಿ ಕೊಡಿಸುವ ಕಾಮಗಾರಿಗಳಿವು
ಬೆಂಗಳೂರು, ಮೇ30:ಬೆಂಗಳೂರು ನಗರ ಸಂಚಾರ ನಿಯಂತ್ರಣಕ್ಕಾಗಿ ಮೆಗಾ ಪ್ಲಾನ್ ಯೋಜನೆಗಳು ಪ್ರಗತಿಯಲ್ಲಿದೆ. ಸಿಲಿಕಾನ್ ಸಿಟಿಯಲ್ಲಿನ ಸಂಚಾರವನ್ನು 2024 ವೇಳೆಗೆ ಶೇ 20% ತಗ್ಗಿಸುವುದಾಗಿದೆ. KRDCL ನಿಂದ ಸಾಗಿರುವ ರಸ್ತೆಗಳ ಅಭಿವೃದ್ದಿ ಕಾರ್ಯ 2024ಕ್ಕೆ ಕಾಮಗಾರಿ ಪೂರ್ಣಗೊಳ್ಳುವ ಭರವಸೆ ಮೂಡಿದೆ. ಹೊರ ರಾಜ್ಯದ ವಾಹನ ನಗರಕ್ಕೆ ಪ್ರವೇಶಿಸದೇ ನೇರವಾಗಿ ವಿಮಾನ ನಿಲ್ದಾಣಕ್ಕೆ ಸಂಪರ್ಕವನ್ನು ನೀಡುವ ರಸ್ತೆಗಳ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದೆ.
ನಗರದ ಟ್ರಾಫಿಕ್ಗೆ ಕಡಿವಾಣ ಹಾಕುವ ಮಹತ್ವಾಕಾಂಕ್ಷಿ ಯೋಜನೆ ಇದಾಗಿದೆ. ಈ ಯೋಜನೆ ಪೂರ್ಣಗೊಂಡರೆ ಶೇ 20 ಸಂಚಾರ ದಟ್ಟಣೆಗೆ ಕಡಿವಾಣ ಬೀಳಲಿದೆ. ಹೊರರಾಜ್ಯದಿಂದ ಬರುವ ವಾಹನಗಳು ನಗರವನ್ನು ಪ್ರವೇಶಿಸದೇ ನೇರವಾಗಿ ವಿಮಾನ ನಿಲ್ದಾಣಕ್ಕೆ ಸಂಪರ್ಕರನ್ನು ನೀಡಲಿರುವ ಯೋಜನೆ 72 ಸಾವಿರ ಕೋಟಿ ವೆಚ್ಚದಲ್ಲಿ ಸಪೋರ್ಟಿಂಗ್ ರಸ್ತೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಬೆಂಗಳೂರು ಸುತ್ತಲಿನ 154 ಕಿ.ಮೀ ಉದ್ದದ ರಸ್ತೆ ಅಭಿವೃದ್ದಿ ಕಾರ್ಯ ನಡೆಯುತ್ತಿದೆ.
ಈ ಯೋಜನೆಯಲ್ಲಿ ಯಾವುದೇ ಹೊಸರಸ್ತೆಯನ್ನು ನಿರ್ಮಾಣ ಮಾಡುತ್ತಿಲ್ಲ, ಬದಲಾಗಿ ಇರುವ ರಸ್ತೆಗೆ ಅಭಿವೃದ್ದಿ. ಈಗಿರುವ ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಗಳನ್ನು ಎರಡು ಪಥದಿಂದ ನಾಲ್ಕು ಪಥಗಳಿಗೆ ವಿಸ್ತರಣೆ ಮಾಡಲಾಗುತ್ತಿದೆ. ಮೇಲ್ಸೇತುವೆ ಮತ್ತು ಅಂಡರ್ ಪಾಸ್ಗಳನ್ನು ನಿರ್ಮಿಸಿ ಸಿಗ್ನಲ್ ಫ್ರೀ ಕಾರಿಡಾರ್ಗಳಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಕಳೆದ 5 ತಿಂಗಳಿಂದ ಕಾಮಗಾರಿ ಆರಂಭ ಗೊಂಡಿದ್ದು, ಶೇ.50 ರಷ್ಟು ಅಭಿವೃದ್ಧಿ ಕೆಲಸ ಪೂರ್ಣವಾಗಿದೆ.

ಯಾವ ಯಾವ ನಗರದ ಕಡೆಯಿಂದ ಸಂಪರ್ಕ
KRDCL ನಿಂದ ಸಾಗಿದ ರಸ್ತೆಗಳ ಅಭಿವೃದ್ದಿ ಕಾರ್ಯದಲ್ಲಿ ಮೈಸೂರು, ತುಮಕೂರು, ಹಾಸನ, ಆನೇಕಲ್, ಸೇರಿದಂತೆ ರಾಜ್ಯದ ವಿವಿಧ ಭಾಗದಿಂದ ಏರ್ಪೂರ್ಟ್ಗೆ ಬರುವವರಿಗೆ ಸೀಟಿ ಪ್ರವೇಶಿಸದೆ ನೇರ ಸಂಪರ್ಕವನ್ನು ಕಲ್ಪಿಲಾಗುತ್ತಿದೆ. 1.92 ಕಿಲೋ ಮೀಟರ್ ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಮಾಡಲಾಗುತ್ತಿದೆ. KRDCL ನಿಂದ ಸಾಗಿದ ರಸ್ತೆಗಳ ಅಭಿವೃದ್ದಿ ಕಾರ್ಯ 2024 ಕ್ಕೆ ಕಾಮಗಾರಿ ಪೂರ್ಣಗೊಳ್ಳುವ ವಿಶ್ವಾಸವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

KRDCL ನ ಸಿಇ ರವೀಂದ್ರನಾಥ್ ಮಾಹಿತಿ
ವಾಹನ ದಟ್ಟಣೆ ತಪ್ಪಿಸುವ ಉದ್ದೇಶದಿಂದ 1.92 ಕಿ ಮೀ. ಉದ್ದದ ಎಲಿವೇಟೆಡ್ ಕಾರಿಡಾರ್ ಅನ್ನು 182.16 ಕೋಟಿ ವೆಚ್ಚದಲ್ಲಿ ನಿಲ್ದಾಣ ಮಾಡಲಾಗುತ್ತಿದೆ.2024ರ ಜೂನ್ ವೇಳೆಗೆ ಪೂರ್ಣಗೊಳಿಸಲು ಯೋಜನೆ ರೂಪಿಸಲಾಗಿದೆ. ಹೆಚ್ಚುವರಿಯಾಗಿ ರಾಜ್ಯ ಸರ್ಕಾರದಿಂದ 587.20 ಕೋಟಿ ರು. ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಗೊಲ್ಲಹಳ್ಳಿ, ರಾಮಾನು ಕುಂಟೆ, ನಾರಾಯಣಪುರ, ಕಾಡುಗೋಡಿ ಬಳ್ಳಿ ರೈಲ್ವೆ ಮೇಲ್ವೇತುವೆ, ಬಸವನಹಳ್ಳಿ ಬಳಿ ವರ್ತೂರು ಕೋಡಿ ಸೇರಿದಂತೆ ಒಟ್ಟು ಮೂರು ಅಭಿವೃದ್ಧಿ ಕಾರ್ಯ ಆರಂಭ ಎಂದು KRDCL ನ ಮುಖ್ಯ ಎಂಜಿನಿಯರ್ ರವೀಂದ್ರನಾಥ್ ಮಾಹಿತಿ ನೀಡಿದ್ದಾರೆ.

ಸಂಚಾರದಟ್ಟಣೆಯಿಲ್ಲದ ಪ್ರಯಾಣ
ಬೆಂಗಳೂರಿನ ಹೊರಭಾಗದದಲ್ಲಿರುವ ಬೂದಿಗೆರೆ ಕ್ರಾಸ್ನಿಂದ ಏರ್ಪೋರ್ಟ್ , ನೆಲಮಂಗಲದಿಂದ ಮಧುರೆ ಕೆಡೆ ಮತ್ತು ಮಧುರೆಯಿಂದ (NH 74) ದೇವನಹಳ್ಳಿ ರಸ್ತೆ (NH 7)ಗೆ ಸಂಪರ್ಕ,ಬಿಡದಿಯಿಂದ ಜಿಗಣಿ ಕಡೆಗೆ , ಬನ್ನೇರುಘಟ್ಟದಿಂದ ಆನೇಕಲ್ ಬಳಿಯ ಬೆಸ್ತಮಾನಹಳ್ಳಿ, ಬೆಸ್ತಮಾನಹಳ್ಳಿ (SH-35) ಹೊಸಕೋಟೆಗೆ ರಸ್ತೆ ಸಂಪರ್ಕವನ್ನು ಕಲ್ಪಿಸುವ ಮೂಲಕ ನಗರದ ಸಂಚಾರವನ್ನು ನಿಯಂತ್ರಣಕ್ಕೆ ಯೋಜನೆ ಕಾರ್ಯಗತವಾಗಿದೆ. ಇದರಿಂದಗಾಗಿ ವಿಮಾನ ನಿಲ್ದಾಣ ಮಾತ್ರವಲ್ಲದೇ ಬೇರೆ ಬೇರೆ ಭಾಗಕ್ಕೆ ಅದರಲ್ಲೂ ಬೆಂಗಳೂರು ಹೊರವಲಯಕ್ಕೆ ಸಂಚಾರ ದಟ್ಟಣೆ ಇಲ್ಲದಂತೆ ಸಂಚಾರಿಸಲು ಅನುಕೂಲವಾಗಲಿದೆ.

ರಸ್ತೆ ಉದ್ದ - ಮೊತ್ತ - ಎಲ್ಲಿಂದ ಎಲ್ಲಿಗೆ?
• ಪ್ಯಾಕೇಜ್ 1 - 20.11 - 154.01- ಬೂದಿಗೆರೆ ಕ್ರಾಸ್ ನಿಂದ ಏರ್ಪೋರ್ಟ್
• ಪ್ಯಾಕೇಜ್ 2 (ಎ) - 15.25 - 174.37 - ನೆಲಮಂಗಲದಿಂದ ಮಧುರೆ
• ಪ್ಯಾಕೇಜ್ 2 (ಬಿ) - 23.99 - 190.19- ಮಧುರೆಯಿಂದ (NH 74) ದೇವನಹಳ್ಳಿ ರಸ್ತೆ (NH 7)
• ಪ್ಯಾಕೇಜ್ -3 (ಎ) 33.20 -151.29 - ಬಿಡದಿಯಿಂದ ಜಿಗಣಿ
• ಪ್ಯಾಕೇಜ್ 3 (ಬಿ) - 22.98 - 154.48 - ಬನ್ನೇರುಘಟ್ಟದಿಂದ ಆನೇಕಲ್ ಬಳಿಯ ಬೆಸ್ತಮಾನಹಳ್ಳಿ
• ಪ್ಯಾಕೇಜ್ 4 (ಎ) - 39. 28 - 204. - ಬೆಸ್ತಮಾನಹಳ್ಳಿ (SH-35) ಹೊಸಕೋಟೆ
Recommended Video
-
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ











Click it and Unblock the Notifications