ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನಕ್ಕೆ ಮುಲಕನಾಡು ಸಂಘದಿಂದ ಅರ್ಜಿ ಆಹ್ವಾನ
ಬೆಂಗಳೂರು ಮೇ 9 2019: ಮುಲಕನಾಡು ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನವನ್ನು ವಿತರಣೆ ಮಾಡಿ ಪ್ರೋತ್ಸಾಹಿಸುವ ಕಾರ್ಯಕ್ರಮವನ್ನು ಬೆಂಗಳೂರಿನ ಮುಲಕನಾಡು ಸಂಘ ಹಮ್ಮಿಕೊಂಡಿದೆ. ಈ ಕಾರ್ಯಕ್ರಮವು ಜೂನ್ ಮೊದಲ ವಾರದಲ್ಲಿ ಬೆಂಗಳೂರಿನಲ್ಲಿ ನಡೆಯಲಿದೆ.
ಕೊಡಗು ಪ್ರವಾಹ ಸಂತ್ರಸ್ತ ಮಕ್ಕಳಿಗೆ 100% ಸ್ಕಾಲರ್ ಶಿಪ್
ಈ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನವನ್ನು ಪಡೆಯಲು ಇಚ್ಛಿಸುವ ಸಮುದಾಯದ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ, ಗುರುತಿನ ಚೀಟಿ ಮತ್ತು ಸ್ವವಿವರದೊಂದಿಗೆ ಸಂಘದ ಕಚೇರಿಗೆ ಅರ್ಜಿಯನ್ನು ಸಲ್ಲಿಸುವಂತೆ ಸಂಘದ ಕಾರ್ಯದರ್ಶಿ ಪ್ರಕಾಶ್ ಅವರು ಮನವಿ ಮಾಡಿದ್ದಾರೆ.
ಉಚಿತ ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ: ಇದಲ್ಲದೇ ಪಿಯುಸಿ ನಂತರದ ಉನ್ನತ ವ್ಯಾಸಂಗಕ್ಕಾಗಿ ಸೇರ ಬಯಸಿರುವ ಸಮುದಾಯದ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾರ್ಥಿ ನಿಲಯದ ಸೌಲಭ್ಯ ಒದಗಿಸಲಾಗುವುದು. ಈ ಸೌಲಭ್ಯವನ್ನು ಪಡೆದುಕೊಳ್ಳಲು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಕುರಿತು ಹೆಚ್ಚಿನ ವಿವರಗಳನ್ನು ಸಂಘದ ಕಚೇರಿಯನ್ನು ಸಂಪರ್ಕ ಮಾಡುವಂತೆ ಸಿ ಪ್ರಕಾಶ್ ಅವರು ಕೋರಿದ್ದಾರೆ.
ಅಶೋಕ ವಿವಿಯಿಂದ 100 ಪದವಿ ವಿದ್ಯಾರ್ಥಿಗಳಿಗೆ ಸಂಪೂರ್ಣ ಧನ ಸಹಾಯ
ಕಚೇರಿ
ವಿಳಾಸ
ಮುಲಕನಾಡು
ಮಹಾಸಂಘ
(ರಿ)
ನಂ
36,
ಬಿ.ಎಚ್.ಸಿ.ಎಸ್
ಬಡಾವಣೆ
ಪಾದುಕಾ
ಮಂದಿರ
ರಸ್ತೆ,
ಉತ್ತರಹಳ್ಳಿ
-
ಕೆಂಗೇರಿ
ಮುಖ್ಯರಸ್ತೆ
ಬೆಂಗಳೂರು
-
560061