ಮುನಿರತ್ನಗೆ ಸಂಕಷ್ಟ: ಕೇಸ್ ವಾಪಸ್ ಪಡೆಯಲು ಒಪ್ಪದ ಮುನಿರಾಜು
ಬೆಂಗಳೂರು, ನವೆಂಬರ್ 15: ಕೇಸ್ ವಾಪಸ್ ಪಡೆಯಲು ಮುನಿರಾಜು ಒಪ್ಪದ ಕಾರಣ ಮುನಿರತ್ನಗೆ ಸಂಕಷ್ಟ ಎದುರಾಗಿದೆ.
ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬಿಜೆಪಿ ಪರಾಜಿತ ಅಭ್ಯರ್ಥಿ ಪಿ. ಮುನಿರಾಜುಗೌಡ ಅವರನ್ನು ಮನವೊಲಿಸುವ ಪ್ರಯತ್ನ ಕಗ್ಗಂಟಾಗಿ ಪರಿಣಮಿಸಿದ್ದು, ಅನರ್ಹ ಶಾಸಕ ಮುನಿರತ್ನ ಅವರು ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರೂ ಮುನಿರಾಜುಗೌಡ ಅವರು ಮಾತ್ರ ತಮ್ಮ ಹಠವನ್ನು ಸಡಿಲಿಸುತ್ತಿಲ್ಲ.

ಬೇಕಾದರೆ ಕಚೇರಿಯಲ್ಲಿ ಕಸ ಗುಡಿಸುತ್ತೇನೆ
ಬೇಕಾದರೆ ಪಕ್ಷದ ಕಚೇರಿಯಲ್ಲಿ ಕಸ ಗುಡಿಸುತ್ತೇನೆ ಆದರೆ ತಮ್ಮ ನಿಲುವಿನಿಂದ ಹಿಂದೆ ಸರಿಯುವುದಿಲ್ಲ ಎಂದು ಮುನಿರಾಜುಗೌಡ ಹೇಳಿದ್ದಾರೆ.ಪ್ರಕರಣ ನ್ಯಾಯಾಲಯದಲ್ಲೇ ಇತ್ಯರ್ಥಗೊಳ್ಳಲಿ. ಕೋರ್ಟ್ ತೀರ್ಪು ಏನೇ ಬಂದರೂ ಅದನ್ನು ಒಪ್ಪಿಕೊಳ್ಳುತ್ತೇನೆ. ಆದರೆ ನಾನಾಗಿಯೇ ಕೇಸ್ ವಾಪಸ್ ಪಡೆಯುವುದಿಲ್ಲ ಎಂದು ಹೇಳಿದ್ದಾರೆ.

ನಿಗಮದ ಅಧ್ಯಕ್ಷ ಸ್ಥಾನ ನಯವಾಗಿ ತಿರಸ್ಕಾರ
ತಮಗೆ ನೀಡಿರುವ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನವನ್ನು ನಯವಾಗಿಯೇ ತಿರಸ್ಕರಿಸಿರುವ ಮುನಿರಾಜುಗೌಡ ಅವರು ನ್ಯಾಯಾಲಯದಲ್ಲಿರುವ ಮುನಿರತ್ನ ವಿರುದ್ಧದ ಪ್ರಕರಣವನ್ನು ವಾಪಸ್ ಪಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಹೈಕೋರ್ಟ್ನಲ್ಲಿರುವ ಪ್ರಕರಣ ಇತ್ಯರ್ಥಗೊಳ್ಳಬೇಕು
ಮುನಿರತ್ನ ವಿರುದ್ಧದ ಹೈಕೋರ್ಟ್ನಲ್ಲಿರುವ ಪ್ರಕಟಣ ಇತ್ಯರ್ಥಗೊಳ್ಳಬೇಕು ಅಥವಾ ವಾಪಸ್ ಪಡೆಯಬೇಕು. ಆಗ ಮಾತ್ರ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ ಉಪಚುನಾವಣೆಗೆ ದಾರಿ ಸುಗಮವಾಗಲಿದೆ. ಆದರೆ ಮುನಿರಾಜುಗೌಡ ಅವರ ಬಿಗಿ ನಿಲುವಿನಿಂದಾಗಿ ಮುನಿರತ್ನ ಬಿಜೆಪಿ ಸೇರಿದರೂ ಆತಂಕದಿಂದಲೇ ಓಡಾಡಿಕೊಂಡಿದ್ದಾರೆ.

ಯಡಿಯೂರಪ್ಪ ನಿವಾಸದಲ್ಲಿ ಸಮಾಲೋಚನೆ
ಮುನಿರತ್ನ, ಆರ್ ಆಶೋಕ್ ಸೇರಿದಂತೆ ಹಲವರು ಮುಖ್ಯಮಂತ್ರಿಗಳ ನಿವಾಸದಲ್ಲಿ ಸಭೆ ನಡೆಸಿದ್ದಾರೆ. ಬುಧವಾರ ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೇ ಮುನಿರಾಜುಗೌಡ ಅವರಿಗೆ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ಸಿಎಂ ಕಚೇರಿಯಿಂದ ಅಧಿಸೂಚನೆ ಹೊರಬಿದ್ದಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications