ಜು.16 ರ 'ಮುನ್ನೋಟ'ದಲ್ಲಿ ಆಲೂರು ವೆಂಕಟರಾಯರ ಸಂಸ್ಮರಣೆ
ಬೆಂಗಳೂರು, ಜುಲೈ 11: ಕರ್ನಾಟಕ ಏಕೀಕರಣ ಎಂದೊಡನೆ ಮೊದಲು ನೆನಪಾಗುವವರು ಆಲೂರು ವೆಂಕಟರಾಯರು.
ಹರಿದು ಹಂಚಿಹೋಗಿದ್ದ ಕನ್ನಡಿಗರನ್ನು ಒಂದಾಗಿಸಲು ಅಗತ್ಯವಿದ್ದ ಚಿಂತನೆಯನ್ನು ಹುಟ್ಟುಹಾಕಿ, ಕರ್ನಾಟಕ ಏಕೀಕರಣ ಚಳವಳಿಗೆ ನಾಂದಿ ಹಾಡಿದ ಆಲೂರು ವೆಂಕಟರಾಯರ (ಜುಲೈ 12, 1880 - ಫೆಬ್ರವರಿ 25,1964) 138 ನೇ ಹುಟ್ಟುಹಬ್ಬ ನಿಮಿತ್ತ ಮಾತುಕತೆ @ಮುನ್ನೋಟ ಕಾರ್ಯಕ್ರಮವನ್ನು 'ಮುನ್ನೋಟ' ತಂಡ ಹಮ್ಮಿಕೊಂಡಿದೆ.

ಜುಲೈ 16, ಭಾನುವಾರದಂದು ಬಸವನಗುಡಿಯ ಸೌತ್ ಅವೆನ್ಯೂ ಕಾಂಪ್ಲೆಕ್ಸ್ ನಲ್ಲಿ ಬೆಳಿಗ್ಗೆ 11:30 ಕ್ಕೆ ಕಾರ್ಯಕ್ರಮ ನಡೆಯಲಿದೆ. ಕನ್ನಡ ಉಪನ್ಯಾಸಕ ಮತ್ತು ವಿಮರ್ಶಕರಾದ ಡಾ.ಎಚ್.ಎಸ್.ಸತ್ಯನಾರಾಯಣ ಅವರು 'ಆಲೂರು ವೆಂಕಟರಾಯರು ಮತ್ತು ಕರ್ನಾಟಕ ಏಕೀಕರಣ' ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ.

ಆಲೂರು ವೆಂಕಟರಾಯರು
1956 ರ ಕರ್ನಾಟಕ ಏಕೀಕರಣದ ಹಿಂದೆ ಸಾವಿರಾರು ಜನರ ಅವಿರತ ಶ್ರಮವಿದೆ. ಕರ್ನಾಟಕಕ್ಕಾಗಿ ಪ್ರತಿಯೊಬ್ಬರೂ ದುಡಿವಂತೆ ಮಾಡಿ, ಏಕೀಕರಣ ಚಳವಳಿಗೆ ಚಿಂತನೆಯ ಚೌಕಟ್ಟನ್ನು ರೂಪಿಸಿದ ಕೀರ್ತಿ, ಕರ್ನಾಟಕ ಕುಲಪುರೋಹಿತ ಎಂದೇ ಖ್ಯಾತರಾದ ಆಲೂರು ವೆಂಕಟರಾಯರಿಗೆ ಸಲ್ಲುತ್ತದು.
1880 ಜುಲೈ 12 ರಂದು ವಿಜಯಪುರದ ಮಾಧ್ವ ಕುಟುಂಬದಲ್ಲಿ ಜನಿಸಿದ ವೆಂಕಟರಾಯರ ತಂದೆ ಭೀಮರಾಯರು ಮತ್ತು ತಾಯಿ ಭಾಗೀರಥಮ್ಮ. ಪುಣೆಯ ಫೆರ್ಗುಸನ್ ಕಾಲೇಜಿನಲ್ಲಿ ಬಿಎ ಮತ್ತು ಎಲ್ ಎಲ್ ಬಿ(ಕಾನೂನು) ಪದವಿ ಪಡೆದ ಅವರು ಲೋಕಮಾನ್ಯ ಬಾಲಗಂಗಾಧರ ತಿಲಕರ ಚಿಂತನೆಗಳಿಂದ ಪ್ರಭಾವಿತರಾದವರು.
ಸ್ವಾತಂತ್ರ್ಯಾನಂತರದ ದಿನಗಳಲ್ಲಿ ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಧುಮುಕಿದ ಅವರ ಅವಿರತ ಪರಿಶ್ರಮದಿಂದಾಗಿ 1956 ಕರ್ನಾಟಕವೊಂದು ಪ್ರತ್ಯೇಕ ರಾಜ್ಯವಾಗಿ, ಕನ್ನಡಿಗರಿಗೆ ದಕ್ಕಿತು. ವೆಂಕಟರಾಯರ ನನ್ನ ಜೀವನ ಸ್ಮೃತಿಗಳು ಎಂಬ ಆತ್ಮಕಥನವು 'ಜಯಕರ್ನಾಟಕ' ಮಾಸಿಕದಲ್ಲಿ ಧಾರಾವಾಹಿಯಾಗಿ ಪ್ರಕಟವಾಗುತ್ತಿದ್ದುದನ್ನು ಇಲ್ಲಿ ಉಲ್ಲೇಖಿಸಬಹುದು. ಹೆಚ್ಚಿನ ಮಾಹಿತಿಗೆ http://alurtrust.com/contact.html
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications